Yuva Nidhi: ಯುವನಿಧಿ ಯೋಜನೆ ಬಗ್ಗೆ ಭರ್ಜರಿ ಅಪ್ಡೇಟ್, ಇಲ್ಲಿದೆ ಮಾಹಿತಿ...
ಕರ್ನಾಟಕದಲ್ಲಿ 2023 ವಿಧಾನಸಭೆ ಚುನಾವಣೆ ಗೆದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಗಿದ್ದೇ ಗ್ಯಾರಂಟಿ ಯೋಜನೆಗಳು ಎನ್ನಬಹುದು. ಯಾಕಂದ್ರೆ ಗ್ಯಾರಂಟಿ ಯೋಜನೆಗಳು ಮತದಾರರ ಮನಸ್ಸು ಗೆದ್ದು, ಭರ್ಜರಿ ವೋಟ್ ಗಳಿಸುವಲ್ಲಿ ಸಹಾಯ ಮಾಡಿದ್ದವು. ಒಟ್ಟು 5 ಗ್ಯಾರಂಟಿ ಯೋಜನೆಗಳ ಪೈಕಿ 'ಯುವನಿಧಿ' ಕೂಡ ಸಾಕಷ್ಟು ಗಮನ ಸೆಳೆದಿತ್ತು. ಯುವಕರಿಗೆ ಈ ಯೋಜನೆ ಸಾಕಷ್ಟು ಬೆಂಬಲ ನೀಡುವ ನಿರೀಕ್ಷೆಯು ಕೂಡ ಇದ್ದು, ಇದೇ ಸಮಯದಲ್ಲಿ ಯುವನಿಧಿ ಯೋಜನೆ ಬಗ್ಗೆ ಭರ್ಜರಿ ಅಪ್ಡೇಟ್ ಇಲ್ಲಿದೆ!
ಹೌದು, ಕರ್ನಾಟಕ ರಾಜ್ಯಕ್ಕೆ ಸೀಮಿತವಾಗಿದ್ದ ಬಿಜೆಪಿ & ಕಾಂಗ್ರೆಸ್ ಗ್ಯಾರಂಟಿ ವಾರ್ ದೇಶದ ಮಟ್ಟದಲ್ಲಿ ಸದ್ದು ಮಾಡಿತ್ತು. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತೆ, ಅನ್ನೋ ಆರೋಪ ಕೂಡ ಮಾಡುತ್ತಿದ್ದವು ವಿರೋಧ ಪಕ್ಷಗಳು. ಆದರೆ ಅದನ್ನೆಲ್ಲಾ ಮೀರಿ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸರ್ಕಾರ ಈಗಲೂ ಮುಂದುವರಿಸಿಕೊಂಡು ಬರುತ್ತಿದೆ. ಈ ಪೈಕಿ 'ಯುವನಿಧಿ' ಯೋಜನೆ ಭರ್ಜರಿ ಗಮನ ಸೆಳೆಯುತ್ತಿದ್ದು, ರಾಜ್ಯದಲ್ಲಿ ಈ ಬಗ್ಗೆ ಈಗ ವಿಶೇಷ ನೋಂದಣಿ ಅಭಿಯಾನ ಶುರು ಮಾಡಲಾಗಿದೆ.

'ಯುವನಿಧಿ' ಯೋಜನೆ ವಿಶೇಷ ನೋಂದಣಿ
ಹೌದು, ಕರ್ನಾಟಕದ ಮಹಾತ್ವಾಕಾಂಕ್ಷಿ ಯೋಜನೆ 'ಯುವನಿಧಿ' ಅಡಿ ಫಲಾನುಭವಿಗಳ ನೋಂದಣಿಯು ನಡೆಯುತ್ತಿದೆ. 2025ನೇ ಸಾಲಿನಲ್ಲಿ ಪದವಿ / ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ತೇರ್ಗಡೆ ಆಗಿರುವ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನ ಪಡೆಯಲು ಅವಕಾಶವಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ 'ಯುವನಿಧಿ' ಯೋಜನೆ ವಿಶೇಷ ನೋಂದಣಿ ಅಭಿಯಾನ 2025 ಜುಲೈ 7 ರಿಂದ ಆಗಸ್ಟ್ 7ರ ತನಕ ಹಮ್ಮಿಕೊಂಡಿದೆ.
2023 & 2024 ಸಾಲಿನಲ್ಲಿ ತೇರ್ಗಡೆ ಆಗಿದ್ದು, ಅರ್ಜಿ ಸಲ್ಲಿಸದೇ ಇರುವವರು ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಅಭ್ಯರ್ಥಿಗಳು ಸೂಚಿತ ವಿದ್ಯಾರ್ಹತೆಗಳಲ್ಲಿ ಪಾಸ್ ಆಗಿ 180 ದಿನ ಕಳೆದರೂ ಉದ್ಯೋಗ ಸಿಗದ ಪದವೀಧರ ನಿರುದ್ಯೋಗಿಗಳಿಗೆ ಈ ಯೋಜನೆ ಅಡಿಯಲ್ಲಿ ಭತ್ಯೆ ಸಿಗಲಿದೆ. ಹಾಗಾದ್ರೆ ಅರ್ಜಿಯನ್ನು ಸಲ್ಲಿಸಲು ಯಾವ ವೆಬ್ಸೈಟ್ ಸಂಪರ್ಕಿಸಬೇಕು? ಮುಂದೆ ಓದಿ.
ಹೆಚ್ಚಿನ ಮಾಹಿತಿಗೆ ಸಂಪರ್ಕ ಮಾಡಿ
ಅಂದಹಾಗೆ, ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆಯನ್ನು & ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂಪಾಯಿ ನಿರುದ್ಯೋಗ ಭತ್ಯೆ ಉದ್ಯೋಗ ಸಿಗುವವರೆಗೂ ಅಥವ ಗರಿಷ್ಠ 2 ವರ್ಷ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲು ಅವಕಾಶವನ್ನ ಕಲ್ಪಿಸಲಾಗಿದೆ. ಯುವನಿಧಿ ಯೋಜನೆ ಬಗ್ಗೆ ಮಾಹಿತಿಗೆ www.sevasindhugs.karnataka.gov.in ವೆಬ್ ಸೈಟ್ ಅಥವಾ ಸಹಾಯವಾಣಿ 1800-599-7154 ಸಂಪರ್ಕವನ್ನು ಮಾಡಬಹುದು ಎಂದು ಮಾಹಿತಿಯನ್ನ ನೀಡಲಾಗಿದ್ದು, ಈ ಯೋಜನೆಯ ಲಾಭ ಪಡೆಯಲು ತಿಳಿಸಲಾಗಿದೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications