ಯುವನಿಧಿ ಪ್ಲಸ್ ಕರ್ನಾಟಕದಲ್ಲಿ ಯುವಕರಿಗೆ 25 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ: ಸಿಎಂ ಮಹತ್ವದ ಘೋಷಣೆ
ಬೆಂಗಳೂರು, ಫೆಬ್ರವರಿ 17: ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ರಾಜ್ಯದ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಮಾಡಲು ಮತ್ತು ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿಯನ್ನು ಸಿದ್ಧಪಡಿಸಲಾಗುವುದು.ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.
ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು. ಗುತ್ತಿದೆ.

ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು. ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೊದಲನೇ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ NABARD ಸಹಯೋಗದೊಂದಿಗೆ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಸಲಾಗುವುದು. ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.
IIM-B ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್ಕ್ಯುಬೇಶನ್ ಕೇಂದ್ರಗಳನ್ನು (DLIC) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್ಕ್ಯುಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.
ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪಿಸಲಾಗುವುದು. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. ಇದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಮತ್ತು ಇದರ ಸಂಪೂರ್ಣ ನಿರ್ವಹಣೆಯನ್ನು ಎಸ್.ಹೆಚ್.ಜಿ. ಮಹಿಳೆಯರ ಮೂಲಕ ಮಾಡಲಾಗುವುದು.
ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು. ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ GP-SHG ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.












Click it and Unblock the Notifications