ವಸತಿಶಾಲೆ ವಿದ್ಯಾರ್ಥಿಗಳ ಪರಿಸರ ಕಾಳಜಿಗೆ ನಮ್ಮದೊಂದು ಸಲಾಂ!
ಶಿಡ್ಲಘಟ್ಟ, ನವೆಂಬರ್, 09: ಯುವಶಕ್ತಿ ತಂಡವು ಬಯಲು ಸೀಮೆ ವಸತಿ ಶಾಲೆಗಳ ಆವರಣದಲ್ಲಿ ನೆಡಲಾದ ಸಸಿಗಳ ಬೆಳವಣಿಗೆ ಪರಿಶೀಲಿಸಲು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿದ್ದು, ಗಿಡಗಳ ಬಗ್ಗೆ ಇರುವ ಕಾಳಜಿ ವ್ಯಕ್ತಪಡಿಸಿದರು.
ಕೆಲವು ತಿಂಗಳ ಹಿಂದೆ ಕೋಟಗಲ್ ನ ಕಿತ್ತೂರು ಚೆನ್ನಮ್ಮ ಮಹಿಳಾ ವಸತಿ ಶಾಲೆ, ಗಡಿಗವಾರಹಳ್ಳಿ ಹಾಗೂ ತಿಮ್ಮನಾಯಕ ಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಯುವಶಕ್ತಿಯು ವಿವಿಧ ಗಿಡಗಳನ್ನು ನೀಡಿ ಅವುಗಳ ಆರೈಕೆ ಮಾಡುವಂತೆ ಮಕ್ಕಳಿಗೆ ಸಲಹೆ ನೀಡಿದ್ದರು.[ಈ ವಿಶ್ವದಲ್ಲಿ ಬದುಕಲು ಇಚ್ಛೆ ಇದ್ದರೆ ಈ ಟಿಪ್ಸ್ ಪಾಲಿಸಿ]

ಈ ಬಾರಿ ನೆಟ್ಟಿರುವ ಎಲ್ಲಾ ಸಸಿಗಳು ಉತ್ತಮ ಬೆಳವಣಿಗೆ ಕಂಡಿವೆ. ಸಸಿಗಳ ಗುಣಿಗಳಲ್ಲಿ ಕಳೆ ತೆಗೆದು, ಪಾತಿಗಳನ್ನು ಮಾಡಿಸಲು, ನೀರುಣಿಸಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯರು, ಶಾಲಾ ಸಿಬ್ಬಂದಿ ಹಾಗು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಇವರಲ್ಲಿರುವ ಪರಿಸರ ಕಾಳಜಿ ಕಂಡು ಸಂತಸವಾಗಿದೆ ಎಂದು ಅಭಿಪ್ರಾಯಪಟ್ಟರು.
ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಗಿಡಗಳನ್ನು ನೆಡುವ ಸಲುವಾಗಿ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಬಿ.ಜೆ. ಹೊಸಮಟ್, ಗಡಿಗವಾರಹಳ್ಳಿ ವಸತಿ ಶಾಲೆ ಪಕ್ಕದಲ್ಲಿರುವ ಸುಮಾರು 1000 ಎಕರೆ ಸರ್ಕಾರಿ ಸ್ಥಳದಲ್ಲಿ ಸಾವಿರಾರು ಗಿಡ ನೆಡುವ ನಮ್ಮ ಯೋಜನೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ಯುವಶಕ್ತಿ ತಂಡದ ಸದಸ್ಯರು ತಿಳಿಸಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications