Good news for homeless: "ಮನೆ ಭಾಗ್ಯ" ಮನೆ ಇಲ್ಲದವರಿಗೆ ಗುಡ್ನ್ಯೂಸ್ ಕೊಟ್ಟ ಜಮೀರ್
ರಾಜ್ಯದಲ್ಲಿ "ವಸತಿ ಭಾಗ್ಯ" ಎನ್ನುವ ಹೊಸ ಯೋಜನೆಯನ್ನು ಪರಿಚಯಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಈ ಮೂಲಕ ಮನೆ ಇಲ್ಲದ ಬಡವರಿಗೆ ಗುಡ್ನ್ಯೂಸ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ರಾಜ್ಯದ ಬಡ ಕುಟುಂಬದವರಿಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಕರ್ನಾಟಕದ ಪ್ರತಿ ತಾಲ್ಲೂಕಿನಲ್ಲಿ ಮನೆ ಇಲ್ಲದಿರುವ ಸಮುದಾದವರಿಗೆ ಮನೆ ನಿರ್ಮಾಣ ಮಾಡುವ ಬಗ್ಗೆ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಬಡ ಮುಸ್ಲಿಂ ಸಮುದಾಯದವರಿಗೆ ವಕ್ಫ್ ಮಂಡಳಿಯಿಂದಲೇ ವಸತಿ ಭಾಗ್ಯ ಕಲ್ಪಿಸುವ ಯೋಜನೆ ಪ್ರಸ್ತಾವನೆಯಲ್ಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಖ್ಫ್ ಅದಾಲತ್ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯವನ್ನು ಜಮೀರ್ ಅವರು ಹೇಳಿದ್ದಾರೆ. ನಮ್ಮ ಸಮುದಾಯದಲ್ಲಿ ಅತ್ಯಂತ ಬಡವರಿದ್ದು, ಈ ರೀತಿ ಮನೆ ಇಲ್ಲದವರ ಸಮೀಕ್ಷೆ ನಡೆಸಿ ಅವರಿಗೆ ಕಡಿಮೆ ಬಾಡಿಗೆ ದರದಲ್ಲಿ ನೀಡಲಾಗುವುದು. ಇದರಿಂದ ಮಂಡಳಿ ಗೂ ಆದಾಯ ಬರುವಂತಾಗುತ್ತದೆ, ಸಮುದಾಯಕ್ಕೂ ಒಳಿತಾಗುತ್ತದೆ ಎಂದಿದ್ದಾರೆ.

ಅಲ್ಲದೇ ಮೌಜನ್ ಹಾಗೂ ಇಮಾಮ್ಗಳಿಗೆ ಬಾಡಿಗೆ ಆಧಾರದ ಮೇಲೆ ಮನೆ ಕಟ್ಟಿಕೊಡಲು ನಿರ್ಧರಿಸಲಾಗಿದೆ. ರಾಜ್ಯ ವಕ್ಫ್ ಮಂಡಳಿ ಸಮುದಾಯದ ಒಳಿತಿಗೆ ಶ್ರಮಿಸುತ್ತಿದ್ದು ತುರ್ತಾಗಿ ವೈದ್ಯಕೀಯ ನೆರವು ಪಡೆಯಲು ಅನುಕೂಲವಾಗುವಂತೆ ಜಿಲ್ಲೆಗೆ ಒಂದರಂತೆ ತಲಾ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಬುಲೆನ್ಸ್ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ ಒಂದರಂತೆ ಫ್ರೀಜರ್ ಸಹ ನೀಡಲಾಗುವುದು ಎಂದರು.
ಅರ್ಜಿ ಸ್ವೀಕಾರ: ವಖ್ಫ್ ಅದಾಲತ್ ನಲ್ಲಿ ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 368 ಅರ್ಜಿ ಸ್ವೀಕರಿಸಲಾಗಿದ್ದು, ಈ ಪೈಕಿ ಒತ್ತುವರಿ ಸಂಬಂಧ 100, ಖಬರಸ್ಥಾನ ಕುರಿತ 55 ಹಾಗೂ ಇತರೆ 213 ಅರ್ಜಿಗಳು ಸಲ್ಲಿಕೆಯಾಗಿವೆ. ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 82 ಅರ್ಜಿ ಸ್ವೀಕೃತವಾಗಿದ್ದು ಆ ಪೈಕಿ ಒತ್ತುವರಿ ಸಂಬಂಧ 38, ಖಬರಾಸ್ಥಾನ ಕುರಿತ 33 ಹಾಗೂ ಇತರೆ 11 ಅರ್ಜಿ ಸ್ವೀಕಾರಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಐದು ಜಿಲ್ಲೆಗಳಲ್ಲಿ ವಖ್ಫ ಅದಾಲತ್
ಇಲ್ಲಿಯವರೆಗೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ವಖ್ಫ ಅದಾಲತ್ ನಡೆಸಲಾಗಿದೆ. ಐದು ಜಿಲ್ಲೆಗಳ ವಖ್ಫ್ ಅದಾಲತ್ನಿಂದಾಗಿ 507 ಖಾತೆ ಆಗಿದೆ. ಇನ್ನುಳಿದ 382 ಪ್ರಗತಿಯಲ್ಲಿದೆ. ಕಲಬುರಗಿಯಲ್ಲಿ ವಖ್ಫ್ ಆಸ್ತಿ 21440 ಎಕರೆ ಇದ್ದು, 3610 ಎಕರೆ ಒತ್ತುವರಿ ಆಗಿದೆ. ಯಾದಗಿರಿಯಲ್ಲಿ 6194 ಎಕರೆ ಪೈಕಿ 123 ಎಕರೆ ಒತ್ತುವರಿ ಆಗಿದೆ ಎಂದು ಜಮೀರ್ ತಿಳಿಸಿದ್ದಾರೆ. ಇನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಅನ್ವರ್ ಭಾಷಾ ಮಾತನಾಡಿ, ರಾಜ್ಯದಲ್ಲಿ ಆಸ್ತಿಗಳ ಸಂರಕ್ಷಣೆ ನಿಟ್ಟಿನಲ್ಲಿ ಅದರ ಖಾತಾ ಅಪಡೇಟ್, ಸರ್ವೇ, ಮುಟೇಷನ್ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications