ಸಿದ್ದರಾಮಯ್ಯ ಮೇಲಿನ ಸ್ವಾಮಿನಿಷ್ಠೆಯ ಫಲ: ಜಮೀರ್ ಅಹ್ಮದ್ ಇಂದು ಪ್ರಮಾಣ ವಚನ
ಬೆಂಗಳೂರು, ಮೇ 20: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.
ಶುಕ್ರವಾರ ತಡರಾತ್ರಿ ಹೈಕಮಾಂಡ್ ಎಂಟು ಜನರ ಹೆಸರನ್ನು ಮಂತ್ರಿಗಿರಿಗೆ ಫೈನಲ್ ಮಾಡಿದೆ. ಈ ಸಂಬಂಧ ಎಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯೂ ಹರಿದಾಡುತ್ತಿದೆ. ಈ ಎಂಟು ಜನರ ಪೈಕಿ, ಸಿದ್ದರಾಮಯ್ಯನವರ ಪರಮಾಪ್ತ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕೂಡಾ ಒಬ್ಬರು.

ನೇರನೇರವಾಗಿ ಜಮೀರ್ ಅವರು ಸಿದ್ದರಾಮಯ್ಯನವರ ಜೊತೆ ಗುರುತಿಸಿಕೊಂಡವರು. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಹಲವು ಬಾರಿ ಹೇಳಿ, ಕೆಪಿಸಿಸಿ ಅಧ್ಯಕ್ಷರಿಂದ ಮೌಕಿಕ ಎಚ್ಚರಿಕೆಯನ್ನು ಪಡೆದುಕೊಂಡಿದ್ದರು.
ಆದರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಜಮೀರ್ ಮತ್ತೆಮತ್ತೆ ಸಿದ್ದು ಸಿಎಂ ಎನ್ನುವ ಮಾತನ್ನು ಹೇಳುತ್ತಿದ್ದರು. ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಬೇಕು ಎನ್ನುವ ಗೊಂದಲವಿದ್ದಾಗ, ತಾವು ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ದರಾಗಿದ್ದರು.
ನೀವು ಬಂದು ನಾಮಿನೇಶನ್ ಫೈಲ್ ಮಾಡಿ ಹೋಗಿ, ನಿಮ್ಮನ್ನು ಐವತ್ತು ಸಾವಿರ ಲೀಡ್ ನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಜಮೀರ್ ಹೇಳಿದ್ದರು.
ಈಗ ಅವರ ಸ್ವಾಮಿನಿಷ್ಠೆಗೆ ಫಲ ಸಿಕ್ಕಿದೆ. ಇಂದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜೊತೆಗೆ ಜಮೀರ್ ಅಹ್ಮದ್ ಖಾನ್ ಕೂಡಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications