2.50 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ
ಬೆಂಗಳೂರು, ಜನವರಿ 09: ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು.
ಈ ಕುರಿತು ಮಂಗಳವಾರ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿ , ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು.

1 ರಿಂದ 8 ನೇ ತರಗತಿವರೆಗಿನ 2,35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂ ಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ನಂತೆ 3.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ ಐ ಐ ಟಿ, ಐಐ ಎಂ ಪ್ರವೇಶ ಪಡೆದಿರುವ 19 ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ. ನಂತೆ 38 ಲಕ್ಷ ರೂ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಸಿಗದ 3,330 ವಿದ್ಯಾರ್ಥಿಗಳಿಗೆ ತಲಾ 1,500 ರೂ. ನಂತೆ 13.50 ಕೋಟಿ ರೂ., ಬಿಡುಗಡೆ ಮಾಡಲಾಯಿತು. ಅಲ್ಲದೇ ಈ ಕಾರ್ಯಕ್ರಮದಲ್ಲಿ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.
ವಿಶೇಷ ಚೇತನ ಯುವಕನಿಗೆ ಸಹಾಯಹಸ್ತ ಚಾಚಿದ ಸಂತೋಷ್ ಲಾಡ್
ಅಂಗವೈಕಲ್ಯತೆ ಇದ್ದರೂ ಛಲದಿಂದ ಜೀವನ ಸಾಗಿಸುತ್ತಿರುವ ಪ್ರತಿಭಾವಂತ ವಿಶೇಷ ಚೇತನ ವಿದ್ಯಾರ್ಥಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ತ್ರಿಚಕ್ರ ವಾಹನವನ್ನು ನೀಡುವುದಾಗಿ ಅಭಯಹಸ್ತ ನೀಡಿದ್ದಾರೆ.
ಸಂಕಷ್ಟ ಎಂದು ಹೇಳಿಕೊಂಡು ಬರುವ ಜನರ ಪಾಲಿಗೆ ಸದಾ ಸ್ಪಂದಿಸುವ ಸಂತೋಷ್ ಲಾಡ್ ಅವರು ಇರುವ ಧಾರವಾಡದ ಸರ್ಕಿಟ್ ಹೌಸ್ ಗೆ ರಾತ್ರಿ ತನ್ನ ಸ್ನೇಹಿತರ ಜೊತೆ ಬಂದಿದ್ದ ಸಿದ್ದಪ್ಪ ಎಂಬ ಈ ಯುವಕ ಮೂಲತಃ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿ. ಸದ್ಯ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ. ತಮ್ಮ ಸಂತೋಷ್ ಲಾಡ್ ಫೌಂಡೇಶನ್ ಅಧ್ಯಕ್ಷರಾದ ಆನಂದ್ ಕಲಾಲ್ ಅವರಿಗೆ ಫೋನ್ ಮಾಡಿ ಈ ಯುವಕನಿಗೆ ತ್ರಿಚಕ್ರ ವಾಹನ ಮತ್ತು 25,000 ರೂಪಾಯಿಯ ಆರ್ಥಿಕ ಸಹಾಯವನ್ನು ಮಾಡಲು ಹೇಳಿ ಸಂತೋಷ್ ಲಾಡ್ ಅವರು ಮತ್ತೊಮ್ಮೆ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ.
-
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications