ಜಮೀರ್ ಸೇರಿ 3 ಕಾಂಗ್ರೆಸ್ ಶಾಸಕರು ಅನರ್ಹತೆ ಭೀತಿಯಿಂದ ಬಚಾವ್
ಬೆಂಗಳೂರು, ಮೇ 18: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತದಾನ ಮಾಡಿ ಅನರ್ಹತೆಯ ತೂಗುಗತ್ತಿ ಏಳು ಜನ ಶಾಸಕರಿಗೆ ಕೊನೆಗೂ ರಿಲೀಫ್ ಸಿಕ್ಕಿದೆ.
ಸ್ಪೀಕರ್ ಹುದ್ದೆಯಿಂದ ಕೆಳಗಿಳಿಯುವ ಕೆಲವೇ ನಿಮಿಷಗಳ ಮೊದಲು ಸ್ಪೀಕರ್ ಕೆ.ಬಿ. ಕೋಳಿವಾಡ ಏಳು ಜನ ಶಾಸಕರ ವಿರುದ್ಧದ ಅನರ್ಹತೆಯ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಶಾಸಕರಾದ ಜಮೀರ್ ಅಹಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಎನ್ ಚೆಲುವರಾಯಸ್ವಾಮಿ, ಎಚ್ಸಿ ಬಾಲಕೃಷ್ಣ, ಅಹಮದ್ ಇಕ್ಬಾಲ್ ಅನ್ಸಾರಿ, ಭೀಮಾ ನಾಯಕ್, ಅಖಂಡ ಶ್ರೀನಿವಾಸಮೂರ್ತಿ ಇವರು 2017ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರಾದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದರು.

ಈ ಕಾರಣಕ್ಕಾಗಿ ಇವರನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಸ್ಪೀಕರ್ಗೆ ಅರ್ಜಿ ಸಲ್ಲಿಸಿತ್ತು. ಆದರೆಸ್ಪೀಕರ್ ಈವರೆಗೂ ಅರ್ಜಿಯನ್ನು ವಿಲೇವಾರಿ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದರು.ಅನರ್ಹತೆ ಎದುರಿಸುತ್ತಿದ್ದ ಏಳು ಶಾಸಕರ ಪೈಕಿ ಜಮೀರ್ ಅಹಮದ್ ಖಾನ್, ಭೀಮಾ ನಾಯಕ್ ಹಾಗೂ ಅಖಂಡ ಶ್ರೀನಿವಾಸ ಮೂರ್ತಿ ಮೂವರು ಮಾತ್ರ ಗೆದ್ದಿದ್ದರು.
ಹಾಗಾಗಿ ನಾಳೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ವಿಶ್ವಾಸಮತ ಕೋರುತ್ತಿರುವ ಹಿನ್ನಲೆಯಲ್ಲಿ ಹಂಗಾಮಿ ಸ್ಪೀಕರ್ ಭೋಪಯ್ಯ ಅಧಿಕಾರವಹಿಸಿಕೊಂಡರೆ ಈ ಮೂರು ಮಂದಿ ಶಾಸಕರನ್ನು ಅನರ್ಹಗೊಳಿಸಬಹುದೆಂಬ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಜನರ ಶಾಸಕರ ಅನರ್ಹ ಅರ್ಜಿಯನ್ನು ಕೆಬಿ ಕೋಳಿವಾಡ್ ಕೊನೆಯ ಸಮಯದಲ್ಲಿ ವಜಾಗೊಳಿಸಿರುವುದರಿಂದ ಕಾಂಗ್ರೆಸ್ ಪಕ್ಷದ ಮೂವರು ಶಾಸಕರು ಬಚಾವಾಗಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications