ಜಮೀರ್ ಸೇರಿ 3 ಕಾಂಗ್ರೆಸ್ ಶಾಸಕರು ಅನರ್ಹತೆ ಭೀತಿಯಿಂದ ಬಚಾವ್
ಬೆಂಗಳೂರು, ಮೇ 18: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತದಾನ ಮಾಡಿ ಅನರ್ಹತೆಯ ತೂಗುಗತ್ತಿ ಏಳು ಜನ ಶಾಸಕರಿಗೆ ಕೊನೆಗೂ ರಿಲೀಫ್ ಸಿಕ್ಕಿದೆ.
ಸ್ಪೀಕರ್ ಹುದ್ದೆಯಿಂದ ಕೆಳಗಿಳಿಯುವ ಕೆಲವೇ ನಿಮಿಷಗಳ ಮೊದಲು ಸ್ಪೀಕರ್ ಕೆ.ಬಿ. ಕೋಳಿವಾಡ ಏಳು ಜನ ಶಾಸಕರ ವಿರುದ್ಧದ ಅನರ್ಹತೆಯ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಶಾಸಕರಾದ ಜಮೀರ್ ಅಹಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಎನ್ ಚೆಲುವರಾಯಸ್ವಾಮಿ, ಎಚ್ಸಿ ಬಾಲಕೃಷ್ಣ, ಅಹಮದ್ ಇಕ್ಬಾಲ್ ಅನ್ಸಾರಿ, ಭೀಮಾ ನಾಯಕ್, ಅಖಂಡ ಶ್ರೀನಿವಾಸಮೂರ್ತಿ ಇವರು 2017ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರಾದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದರು.

ಈ ಕಾರಣಕ್ಕಾಗಿ ಇವರನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಸ್ಪೀಕರ್ಗೆ ಅರ್ಜಿ ಸಲ್ಲಿಸಿತ್ತು. ಆದರೆಸ್ಪೀಕರ್ ಈವರೆಗೂ ಅರ್ಜಿಯನ್ನು ವಿಲೇವಾರಿ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದರು.ಅನರ್ಹತೆ ಎದುರಿಸುತ್ತಿದ್ದ ಏಳು ಶಾಸಕರ ಪೈಕಿ ಜಮೀರ್ ಅಹಮದ್ ಖಾನ್, ಭೀಮಾ ನಾಯಕ್ ಹಾಗೂ ಅಖಂಡ ಶ್ರೀನಿವಾಸ ಮೂರ್ತಿ ಮೂವರು ಮಾತ್ರ ಗೆದ್ದಿದ್ದರು.
ಹಾಗಾಗಿ ನಾಳೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ವಿಶ್ವಾಸಮತ ಕೋರುತ್ತಿರುವ ಹಿನ್ನಲೆಯಲ್ಲಿ ಹಂಗಾಮಿ ಸ್ಪೀಕರ್ ಭೋಪಯ್ಯ ಅಧಿಕಾರವಹಿಸಿಕೊಂಡರೆ ಈ ಮೂರು ಮಂದಿ ಶಾಸಕರನ್ನು ಅನರ್ಹಗೊಳಿಸಬಹುದೆಂಬ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಜನರ ಶಾಸಕರ ಅನರ್ಹ ಅರ್ಜಿಯನ್ನು ಕೆಬಿ ಕೋಳಿವಾಡ್ ಕೊನೆಯ ಸಮಯದಲ್ಲಿ ವಜಾಗೊಳಿಸಿರುವುದರಿಂದ ಕಾಂಗ್ರೆಸ್ ಪಕ್ಷದ ಮೂವರು ಶಾಸಕರು ಬಚಾವಾಗಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications