ಮೀಸಲಾತಿ ಆಟ, ಭವಾನಿ ರೇವಣ್ಣ ಕೈತಪ್ಪಿದ ಅಧ್ಯಕ್ಷ ಸ್ಥಾನ
ಹಾಸನ, ಏಪ್ರಿಲ್ 06 : ಭವಾನಿ ರೇವಣ್ಣ ಅವರು ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗುತ್ತಾರೆ ಎಂಬ ರಾಜಕೀಯ ಲೆಕ್ಕಾಚಾರ ಬುಡಮೇಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಕರಡು ಮೀಸಲಾತಿ ಪ್ರಕಟವಾಗಿದ್ದು, ಅತಂತ್ರ ಜಿಲ್ಲಾ ಪಂಚಾಯಿತಿಗಳ ಮೈತ್ರಿ ರಾಜಕೀಯ ಬದಲಾಗಿದೆ.
ಫೆಬ್ರವರಿಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು, ಹಾಸನ ಜಿಲ್ಲೆಯ ಹೊಳೇನರಸೀಪುರ ಕ್ಷೇತ್ರದ ಹಳೇಕೋಟೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅಧಿಕೃತವಾಗಿ ಚುನಾವಣಾ ರಾಜಕಾರಣಕ್ಕೆ ಪ್ರವೇಶ ಮಾಡಿದ್ದರು. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]

ಭವಾನಿ ರೇವಣ್ಣ ಅವರು ಗೆಲುವು ಸಾಧಿಸಿದ ಬಳಿಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗುತ್ತಾರೆ ಎಂಬ ಲೆಕ್ಕಾಚಾರ ಆರಂಭವಾಗಿತ್ತು. ಆದರೆ, ಸರ್ಕಾರ ಮಂಗಳವಾರ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದ್ದು, ಭವಾನಿ ರೇವಣ್ಣ ಅವರು ಅಧ್ಯಕ್ಷರಾಗುವ ಅವಕಾಶ ಕೈ ತಪ್ಪಿದೆ. [ತಾಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ]
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ (ಮಹಿಳೆ) ಮೀಸಲಾಗಿದೆ. ಇದರಿಂದ ಬಹುಮತ ಹೊಂದಿರುವ ಜೆಡಿಎಸ್ ಪಕ್ಷಕ್ಕೆ ಅಧ್ಯಕ್ಷ ಸ್ಥಾನ ಕೈತಪ್ಪಿದಂತಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಸ್ಥಾನ ದೊರೆಯಬಹುದು ಎಂದು ಅಂದಾಜಿಸಲಾಗಿದೆ.
ಚುನಾವಣೆಯಲ್ಲಿ ಪರಿಶಿಷ್ಟ ಪಂಗಡದಿಂದ ಒಬ್ಬರು ಮಹಿಳೆ ಮಾತ್ರ ಗೆದ್ದಿದ್ದು, ಅವರು ಕಾಂಗ್ರೆಸ್ ಪಕ್ಷದವರು. ಆದ್ದರಿಂದ, ಬಾಗೇಶಪುರ ಕ್ಷೇತ್ರದ ಸದಸ್ಯೆ ಶ್ವೇತಾ ದೇವರಾಜು ಅಧ್ಯಕ್ಷೆಯಾಗುವ ಸಾಧ್ಯತೆ ಇದೆ. ಏ.15ರಂದು ಸರ್ಕಾರ ಅಂತಿಮ ಮೀಸಲಾತಿ ಪಟ್ಟಿ ಹೊರಡಿಸಲಿದ್ದು, ಆಗ ಲೆಕ್ಕಾಚಾರ ಬದಲಾಗುವುದೇ? ಕಾದು ನೋಡಬೇಕು.
ಅಂದಹಾಗೆ ಹಾಸನ ಜಿಲ್ಲಾ ಪಂಚಾಯಿತಿ ಒಟ್ಟು ಸದಸ್ಯ ಬಲ 40. 16 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದರೆ, ಜೆಡಿಎಸ್ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 1 ಸ್ಥಾನ ಗೆದ್ದಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications