ಜಿ.ಪಂ-ತಾ.ಪಂ ಚುನಾವಣೆ ಬಾಕಿ: ಕ್ಷೇತ್ರ ಪುನರ್ ವಿಂಗಡಣೆಗೆ 10 ದಿನದಲ್ಲಿ ಅಧಿಸೂಚನೆ: ಸರ್ಕಾರ
ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ 10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರವು ಮಂಗಳವಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬೆಂಗಳೂರು, ಫೆಬ್ರವರಿ 14: ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಯುವುದು ಬಾಕಿ ಇದೆ. ಈ ಸಂಬಂಧ ಮುಂದಿನ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರ ವಿಂಗಡಣೆ ಕುರಿತು ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ಮಂಗಳವಾರ ನಡೆಯಿತು. ಈ ವೇಳೆ ನ್ಯಾಯಪೀಠಕ್ಕೆ ಸರ್ಕಾರ ಪರ ಹಿರಿಯ ವಕೀಲರಾದ ಎಜಿ ಪ್ರಭುಲಿಂಗ್ ನಾವದಗಿ ಅವರು ವಾದ ಮಾಡಿದರು. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಕ್ಷೇತ್ರ ಪುನರ್ ವಿಂಗಡಣೆಗಾಗಿ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಕ್ಕೆ ಕಳೆದ ತಿಂಗಳು ಜನವರಿ 30ರಂದು ಕ್ಷೇತ್ರ ಪುನರ್ ವಿಂಗಡಣೆ ಕುರಿತು ಸಮಿತಿಯ ವರದಿಯೊಂದನ್ನು ನೀಡಲಾಗಿದೆ. ಆ ವರದಿಯನ್ವಯಸಿ ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಸಾರ್ವಜನಿಕರ ಆಕ್ಷೇಪಣೆಗಳನ್ನು ಪರಿಗಣಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಸರ್ಕಾರದ ಪರ ವಾದ ಹಾಗೂ ಮಾಹಿತಿ ದಾಖಲಿಸಿಕೊಂಡ ಹೈಕೋರ್ಟ್ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಎರಡು ವಾರ ಮುಂದೂಡಿ ಆದೇಶಿಸಿತು.

ಈ ಹಿಂದೊಮ್ಮೆ ಇದೇ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಐದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಬೇಕಿತ್ತು. ಈ ನಿಟ್ಟಿನಲ್ಲಿ ವಿಫಲವಾಗಿದ್ದ ರಾಜ್ಯ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್ ಹೈಕೋರ್ಟ್ ನ್ಯಾಯಪೀಠ ರೂಪಾಯಿ 5 ಲಕ್ಷ ದಂಡ ವಿಧಿಸಿತ್ತು. ಅಷ್ಟೇ ಅಲ್ಲದೇ ಪ್ರಕ್ರಿಯೆ ಪೂರ್ಣಗೊಳಿಸಲು ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ಫೆಬ್ರವರಿವರೆಗೆ ಕಾಲಾವಕಾಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ












Click it and Unblock the Notifications