ಉತ್ತರ ಕನ್ನಡ; 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ
ಕಾರವಾರ, ಮಾರ್ಚ್ 17; ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಠ ಪದ್ಧತಿ ಇನ್ನೂ ಜೀವಂತವಾಗಿದೆ. ಗ್ರಾಮಸ್ಥರ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಣ್ಣೆಮಡಿ ಗ್ರಾಮದ 12 ಮನೆಗಳಿಗೆ ಸಂಪೂರ್ಣ ಬಹಿಷ್ಕಾರ ಹಾಕಲಾಗಿದೆ. ಎಣ್ಣೆಮಡಿಯ ಹಳ್ಳೇರ ಜಾತಿಯ ಯಜಮಾನ, ಹಕ್ಕುದಾರ ಹಾಗೂ ಮುಖಂಡರ ಅಣತಿಯಂತೆ ಕೆಲವರು ಕಾಡು ಪ್ರಾಣಿ ಬೇಟೆಯಾಡಿ ಕೊಂದು ಹಾಕಿದ್ದರು.
ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಾಗಲು ಗ್ರಾಮದ ಸೀತೆ ಹಳ್ಳೇರ ಹಾಗೂ ಅವರ ಮನೆಯ ಜನರೇ ಕಾರಣ ಎಂದು ಅವರ ಮನೆಗೆ ನುಗ್ಗಿ, ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಕುರಿತು ಸೀತೆಯ ಕುಟುಂಬಸ್ಥರು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಘಟನೆ ವಿಕೋಪಕ್ಕೆ ತಿರುಗಿದ ನಂತರ ಸ್ಥಳಕ್ಕೆ ಭಟ್ಕಳ ಡಿವೈಎಸ್ಪಿ, ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಭೆ ನಡೆಸಿದರು. ಸ್ಥಳೀಯ ವ್ಯಕ್ತಿಗಳು ಇದ್ಯಾವುದಕ್ಕೂ ಬಗ್ಗಲಿಲ್ಲ. ಯಜಮಾನ ಮತ್ತು ಇತರರು ಸೀತೆ ಹಳ್ಳೇರ ಅವರಿಗೆ ದೂರು ವಾಪಸ್ ಪಡೆಯಲು ಒತ್ತಡ ಹೇರಿದ್ದರು.
ದೂರು ವಾಪಸ್ ಪಡೆಯದ ಕಾರಣ ಸೀತೆ ಹಳ್ಳೇರ ಹಾಗೂ ಅವರ ಕುಟುಂಬದ ಸಂಬಂಧಿಗಳ ಒಟ್ಟು 12 ಮನೆಗಳಿಗೆ ಗ್ರಾಮದಿಂದ ಬಹಿಷ್ಕಾರ ಹಾಕಲಾಗಿದೆ. ಈ ಕುಟುಂಬಗಳ ಜೊತೆ ಯಾರೂ ಸಂಪರ್ಕ ಬೆಳೆಸುತ್ತಿಲ್ಲ, ಅಂಗಡಿಗೆ ಹೋದರೆ ದಿನಸಿ ಪದಾರ್ಥ ಕೊಡುತ್ತಿಲ್ಲ, ಶಾಲಾ- ಕಾಲೇಜಿಗೆ ತೆರಳಿದರೂ ಮಕ್ಕಳನ್ನು ಮಾತನಾಡಿಸುತ್ತಿಲ್ಲ. ಕೂಲಿ ನಾಲಿ ಮಾಡಿ ಬದುಕುತ್ತಿದ್ದ ಕುಟುಂಬವನ್ನು ಊರಿನಿಂದ ಹೊರ ಇಡಲಾಗಿದೆ.
ಮುಖ್ಯಮಂತ್ರಿಗಳಿಗೆ ಪತ್ರ; ಎಣ್ಣೆಮಡಿಯ ಹಳ್ಳೇರ ಸಮುದಾಯದ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಕುರಿತು ಶಿವಾನಂದ ಹಳ್ಳೇರ ಎಂಬುವವರು ಬಹಿಷ್ಕಾರ ಹಾಕಲು ಕಾರಣರಾದ ಹಳ್ಳೇರ ಸಮುದಾಯದ ಯಜಮಾನ ನಾರಾಯಣ ಹಳ್ಳೇರ, ಹಕ್ಕುದಾರ ಪಾಂಡುರಂಗ ಹಳ್ಳೇರ, ಮುಖಂಡರಾದ ಗೋವಿಂದ ಹಳ್ಳೇರ, ನಾರಾಯಣ ಜೋಗಿ ಹಳ್ಳೇರ, ರಾಜು ಹಳ್ಳೇರ, ಕಮಲಾಕ್ಷ ಹಳ್ಳೇರ, ಈರಪ್ಪ ಹಳ್ಳೇರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರು, ಮುಖ್ಯಮಂತ್ರಿ, ಗೃಹಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲಾ, ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications