ಉತ್ತರ ಕನ್ನಡ; 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ
ಕಾರವಾರ, ಮಾರ್ಚ್ 17; ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಠ ಪದ್ಧತಿ ಇನ್ನೂ ಜೀವಂತವಾಗಿದೆ. ಗ್ರಾಮಸ್ಥರ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಣ್ಣೆಮಡಿ ಗ್ರಾಮದ 12 ಮನೆಗಳಿಗೆ ಸಂಪೂರ್ಣ ಬಹಿಷ್ಕಾರ ಹಾಕಲಾಗಿದೆ. ಎಣ್ಣೆಮಡಿಯ ಹಳ್ಳೇರ ಜಾತಿಯ ಯಜಮಾನ, ಹಕ್ಕುದಾರ ಹಾಗೂ ಮುಖಂಡರ ಅಣತಿಯಂತೆ ಕೆಲವರು ಕಾಡು ಪ್ರಾಣಿ ಬೇಟೆಯಾಡಿ ಕೊಂದು ಹಾಕಿದ್ದರು.
ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಾಗಲು ಗ್ರಾಮದ ಸೀತೆ ಹಳ್ಳೇರ ಹಾಗೂ ಅವರ ಮನೆಯ ಜನರೇ ಕಾರಣ ಎಂದು ಅವರ ಮನೆಗೆ ನುಗ್ಗಿ, ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಕುರಿತು ಸೀತೆಯ ಕುಟುಂಬಸ್ಥರು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಘಟನೆ ವಿಕೋಪಕ್ಕೆ ತಿರುಗಿದ ನಂತರ ಸ್ಥಳಕ್ಕೆ ಭಟ್ಕಳ ಡಿವೈಎಸ್ಪಿ, ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಭೆ ನಡೆಸಿದರು. ಸ್ಥಳೀಯ ವ್ಯಕ್ತಿಗಳು ಇದ್ಯಾವುದಕ್ಕೂ ಬಗ್ಗಲಿಲ್ಲ. ಯಜಮಾನ ಮತ್ತು ಇತರರು ಸೀತೆ ಹಳ್ಳೇರ ಅವರಿಗೆ ದೂರು ವಾಪಸ್ ಪಡೆಯಲು ಒತ್ತಡ ಹೇರಿದ್ದರು.
ದೂರು ವಾಪಸ್ ಪಡೆಯದ ಕಾರಣ ಸೀತೆ ಹಳ್ಳೇರ ಹಾಗೂ ಅವರ ಕುಟುಂಬದ ಸಂಬಂಧಿಗಳ ಒಟ್ಟು 12 ಮನೆಗಳಿಗೆ ಗ್ರಾಮದಿಂದ ಬಹಿಷ್ಕಾರ ಹಾಕಲಾಗಿದೆ. ಈ ಕುಟುಂಬಗಳ ಜೊತೆ ಯಾರೂ ಸಂಪರ್ಕ ಬೆಳೆಸುತ್ತಿಲ್ಲ, ಅಂಗಡಿಗೆ ಹೋದರೆ ದಿನಸಿ ಪದಾರ್ಥ ಕೊಡುತ್ತಿಲ್ಲ, ಶಾಲಾ- ಕಾಲೇಜಿಗೆ ತೆರಳಿದರೂ ಮಕ್ಕಳನ್ನು ಮಾತನಾಡಿಸುತ್ತಿಲ್ಲ. ಕೂಲಿ ನಾಲಿ ಮಾಡಿ ಬದುಕುತ್ತಿದ್ದ ಕುಟುಂಬವನ್ನು ಊರಿನಿಂದ ಹೊರ ಇಡಲಾಗಿದೆ.
ಮುಖ್ಯಮಂತ್ರಿಗಳಿಗೆ ಪತ್ರ; ಎಣ್ಣೆಮಡಿಯ ಹಳ್ಳೇರ ಸಮುದಾಯದ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಕುರಿತು ಶಿವಾನಂದ ಹಳ್ಳೇರ ಎಂಬುವವರು ಬಹಿಷ್ಕಾರ ಹಾಕಲು ಕಾರಣರಾದ ಹಳ್ಳೇರ ಸಮುದಾಯದ ಯಜಮಾನ ನಾರಾಯಣ ಹಳ್ಳೇರ, ಹಕ್ಕುದಾರ ಪಾಂಡುರಂಗ ಹಳ್ಳೇರ, ಮುಖಂಡರಾದ ಗೋವಿಂದ ಹಳ್ಳೇರ, ನಾರಾಯಣ ಜೋಗಿ ಹಳ್ಳೇರ, ರಾಜು ಹಳ್ಳೇರ, ಕಮಲಾಕ್ಷ ಹಳ್ಳೇರ, ಈರಪ್ಪ ಹಳ್ಳೇರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರು, ಮುಖ್ಯಮಂತ್ರಿ, ಗೃಹಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲಾ, ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications