ದಾಂಡೇಲಿಯ ಕಾಳಿ ನದಿ ದಂಡೆಯಿಂದ ಬಾಲಕನ ಎಳೆದೊಯ್ದ ಮೊಸಳೆ
ಕಾರವಾರ, ಅಕ್ಟೋಬರ್ 25: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದು ಹೋದ ಘಟನೆ ದಾಂಡೇಲಿ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದ ನಿವಾಸಿಯಾಗಿರುವ ಮೆಹಮೂದ್ ಅಲಿಮಿಯಾ ಗುಲ್ಬರ್ಗ ಎಂಬುವವರ ಮಗನಾದ 15 ವರ್ಷದ ಬಾಲಕ ಮೊಹಿನ್ ಮೆಹಮೂದ್ ಅಲಿಮಿಯಾ ಗುಲ್ಬರ್ಗ ಎಂಬತಾನನ್ನು ಮೊಸಳೆ ಎಳೆದುಕೊಂಡು ಹೋದ ಘಟನೆ ನಡೆದಿದೆ.
ಈ ಘಟನೆ ವಿಚಾರ ಕಾಡ್ಗಿಚ್ಚಿನಂತೆ ಹರಡಿದ್ದು, ನದಿಯ ಹತ್ತಿರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರ ತೊಡಗಿದ್ದಾರೆ. ಈ ಘಟನೆ ನಡೆದ ತಕ್ಷಣವೇ ಹತ್ತಿರದ ನಿವಾಸಿಯಾಗಿರುವ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ದಾಂಡೇಲಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಪೊಲೀಸ್ ವೃತ್ತ ನಿರೀಕ್ಷಕರಾದ ಪ್ರಭು ಗಂಗನಹಳ್ಳಿ, ಗ್ರಾಮೀಣ ಠಾಣೆಯ ಪಿಎಸ್ಐ.ಆರ್. ಗಡ್ಡೇಕರ ಹಾಗೂ ಪೊಲೀಸ್ ಸಿಬ್ಬಂದಿಗಳು, ವಲಯಾರಣ್ಯಾಧಿಕಾರಿ ವಿನಯ್ ಭಟ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸ್ಥಳೀಯರು ಎರಡ್ಮೂರು ತೆಪ್ಪದ ಮೂಲಕ ಬಾಲಕನ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇತ್ತ ಜಂಗಲ್ ಲಾಡ್ಜಸ್ ಹಾಗೂ ಗಣೇಶಗುಡಿ ರ್ಯಾಪ್ಟಿಂಗ್ನವರಿಗೆ ಮಾಹಿತಿ ನೀಡಿ ರ್ಯಾಪ್ಟ್ ಜೊತೆಗೆ ಸ್ಥಳಕ್ಕೆ ಕರೆಸಿ, ಅವರಿಂದಲೂ ಪತ್ತೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಪ್ರವಾಸೋದ್ಯಮಿಗಳಾದ ಸ್ಟ್ಯಾನ್ಲಿ, ರವಿ ನಾಯಕ ಮೊದಲಾದವರ ತಂಡ ರ್ಯಾಪ್ಟ್ ಮೂಲಕ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸ್ಥಳದಲ್ಲಿ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ, ನಗರ ಸಭಾ ಸದಸ್ಯರುಗಳಾದ ಪ್ರೀತಿ ನಾಯರ್, ದಶರಥ ಬಂಡಿವಡ್ಡರ ಹಾಗೂ ನಗರದ ವಿವಿಧ ಸಂಘಟನೆಗಳ ಮುಖಂಡರುಗಳು ಮೊಕ್ಕಾಂ ಹೂಡಿದ್ದಾರೆ.

ಈಗಾಗಲೇ ಗಣೇಶಗುಡಿ ಕೆಪಿಸಿಯವರಿಗೆ ಮಾಹಿತಿ ನೀಡಿ ನೀರು ಬಿಡುವುದನ್ನು ಸ್ಥಗಿತಗೊಳಿಸಲಾಗಿದೆ. ಸಂಜೆ ನಾಲ್ಕುವರೆ ಘಂಟೆ ಸುಮಾರಿಗೆ ಎರಡು ಸಲ ಬಾಲಕನನ್ನು ಮೇಲಕ್ಕೆತ್ತಿ ನೀರಿನ ಕೆಳಗಡೆ ಮೊಸಳೆ ಹೋಗಿರುವುದು ಕಂಡು ಬಂದಿದೆ. ಇದೀಗ ಈ ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಇದೀಗ ಹಳಿಯಾಳ ರಸ್ತೆ, ಅಲೈಡ್ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ.
ನಗರದಲ್ಲಿ ಮೊದಲ ಪ್ರಕರಣ
ಮೊಸಳೆ ಬಾಲಕನನ್ನು ಎಳೆದುಕೊಂಡು ಹೋಗಿರುವುದು ದಾಂಡೇಲಿ ನಗರದಲ್ಲಿ ಇದು ಮೊದಲ ಪ್ರಕರಣವಾಗಿ ದಾಖಲಾಗಿದೆ. ಮಾಹಿತಿಯ ಪ್ರಕಾರ ಮೊಸಳೆ ಈವರೆಗೆ ನರಬಲಿಯನ್ನು ಪಡೆದುಕೊಂಡಿರಲಿಲ್ಲ. ಮೊಸಳೆ ಜೀವಂತವಾಗಿ ಯಾವುದನ್ನು ತಿನ್ನುವುದಿಲ್ಲ. ಕೊಳೆತ ನಂತರದಲ್ಲಿ ತಿನ್ನುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಹಾಗಾಗಿ ಬಾಲಕನನ್ನು ಅವಿತಿಟ್ಟರಬಹುದೆಂದು ಶಂಕಿಸಲಾಗಿದೆ.
ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು
ಈಗಾಗಲೇ ನಗರಸಭೆಯಿಂದ ಬಹಳಷ್ಟು ಬಾರಿ ಇಲ್ಲಿ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಅರಣ್ಯ ಇಲಾಖೆಯವರು ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ದಾಂಡೇಲಿ ನಗರಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
Recommended Video
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications