ಪ್ರತೀ ತಾಲ್ಲೂಕಿಗೆ 2 ಗೋಶಾಲೆ, ಗೋ ಸೇವಾ ಆಯೋಗ ರಚನೆ: ಸಚಿವ ಪ್ರಭು ಚೌಹಾಣ್
ಕಾರವಾರ, ಜನವರಿ 19: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಎರಡರಂತೆ ಗೋಶಾಲೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಗೋ ಸೇವಾ ಆಯೋಗ ರಚನೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದರು.
ವಧೆಗಾಗಿ ಗೋ ಸಾಗಣೆ ಮಾಡುವವರ ವಿರುದ್ಧ ದೂರು ನೀಡಲು ಹಾಗೂ ರೈತರಿಗೆ ಕೃಷಿ ಸಂಬಂಧಿ ವಿಚಾರಕ್ಕಾಗಿ ಗೋ ಸಾಗಣೆ ಮಾಡುವ ಸಲುವಾಗಿ ಯಾವುದೇ ಮಾಹಿತಿಗಳನ್ನು ಒದಗಿಸಲು ವಾರ್ ರೂಮ್ಗಳಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರೂ ಆಗಿರುವ ಪ್ರಭು ಚೌಹಾಣ್ ತಿಳಿಸಿದರು.

ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಶಿಕ್ಷೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020 ಸೋಮವಾರದಿಂದ ಜಾರಿಗೆ ಬಂದಿದ್ದು, ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಶಿಕ್ಷೆಯ ಹಾಗೂ ದಂಡದ ಪ್ರಮಾಣದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

10 ಲಕ್ಷದವರೆಗೆ ದಂಡ
ಈ ಕಾಯ್ದೆಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಗ್ರಾಮಸಭೆ ಸೇರಿದಂತೆ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಸಭೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕೂಡಾ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಶಿಕ್ಷೆಯ ಪ್ರಮಾಣವನ್ನು 3 ವರ್ಷದಿಂದ 6 ವರ್ಷದವರೆಗೆ ಮತ್ತು ಮೊದಲನೆ ಬಾರಿಗೆ 50,000 ರಿಂದ 5 ಲಕ್ಷದವರೆಗೆ, ಎರಡನೇ ಬಾರಿ ಮಾಡಿದರೆ 10 ಲಕ್ಷದವರೆಗೆ ದಂಡ ವಿಧಿಸಬೇಕೆಂದು ತಿಳಿಸಿದರು.

ಕೃಷಿ ಮತ್ತು ಪಶುಪಾಲನಾ ಚಟುವಟಿಕೆಗಳಿಗೆ ಮಾತ್ರ ಸೀಮಿತ
ಯಾವುದೇ ಗೋವುಗಳು ಕಸಾಯಿಖಾನೆಗೆ ಹೋಗಬಾರದು. ಪಶು ವೈದ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಡಿಒಗಳು ರೈತರಲ್ಲಿ ಗೋ ಹತ್ಯೆಯ ಶಿಕ್ಷೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಕಾಯಿದೆಯಲ್ಲಿ ಜಾನುವಾರು ಎಂದರೆ ಹಸು ಕರು, ಎತ್ತು, ಹೋರಿಗಳು ಹಾಗೂ 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳು ಆಗಿವೆ. ಇಂತಹ ಜಾನುವರುಗಳ ಸಾಗಾಣಿಕೆ ಮೇಲೆ ನಿರ್ಬಂಧವಿರುವುದರಿಂದ ಕೃಷಿ ಮತ್ತು ಪಶುಪಾಲನಾ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿ ಅನುಮತಿ ನೀಡುವ ವ್ಯವಸ್ಥೆ ಮಾಡಬೇಕು ಎಂದರು. ಅವುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಣಿಕೆ ಮಾಡಬೇಕಾಗಿ ಬಂದಲ್ಲಿ ಪಶು ವೈದ್ಯರ ಪ್ರಮಾಣ ಪತ್ರ ಮತ್ತು ಮಾಲಿಕತ್ವದ ಹಾಗೂ ಎನಿಮಲ್ ಟ್ಯಾಗ್ ಹೊಂದಿರುವಂತೆ ನೋಡಿಕೊಳ್ಳಬೇಕು.
Recommended Video

ಆಹಾರ ಮತ್ತು ನೀರು ವಾಹನದಲ್ಲಿ ಇರುವಂತೆ ಸೂಚನೆ
ಅಲ್ಲದೇ ವಾಹನದಲ್ಲಿ 5 ರಿಂದ 6 ಜಾನುವಾರುಗಳಿಗೆ ಮಾತ್ರ ಸಾಗಾಣಿಕೆಗೆ ಅವಕಾಶ ನೀಡಬೇಕು ಮತ್ತು ಅಗತ್ಯ ಆಹಾರ ಮತ್ತು ನೀರು ವಾಹನದಲ್ಲಿ ಇರುವಂತೆ ಸೂಚಿಸಬೇಕು. ಗರ್ಭಧಾರಿತ ಜಾನುವಾರುಗಳಿಗೆ ಸಾಗಾಣಿಕೆ ಮಾಡಲು ಅವಕಾಶ ನೀಡಬಾರದು ಮತ್ತು ರಾತ್ರಿ 8ರಿಂದ ಬೆಳಗ್ಗೆ 6 ರವರೆಗಿನ ಅವಧಿಯಲ್ಲಿ ಕೂಡ ಸಾಗಾಣಿಕೆ ಅವಕಾಶ ನೀಡಬಾರದೆಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಹಾಜರಿದ್ದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications