ಕೈಗಾ: ಮತ್ತೆರಡು ಉಷ್ಣ ವಿದ್ಯುತ್ ಘಟಕ ಸ್ಥಾಪನೆಗೆ ತಯಾರಿ
ಕಾರವಾರ, ನವೆಂಬರ್ 18: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 5 ಮತ್ತು 6 ನೇ ಘಟಕದ ನಿರ್ಮಾಣಕ್ಕೆ ಸಿದ್ಧತೆಗಳು ನಡೆದಿದೆ. ಈ ಬಗ್ಗೆ ನ.17 ರಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಕೈಗಾ ಅಣು ಸ್ಥಾವರದ ಪ್ರಭಾರ ಸ್ಥಾನಿಕ ನಿರ್ದೇಶಕ ಸಂಜಯಕುಮಾರ್, ದೇಶದಾದ್ಯಂತ 10 ಅಣು ವಿದ್ಯುತ್ ಘಟಕಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.
ಅದರಂತೆ ಕೈಗಾದದಲ್ಲಿ ತಲಾ 700 ಮೆಗಾವ್ಯಾಟ್ ಅಣು ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಎರಡು ಘಟಕಗಳು ನಿರ್ಮಾಣವಾಗಲಿದೆ. ಈಗಾಗಲೇ ಕಳೆದ ಮೂರು ವರ್ಷಗಳಿಂದ ಮೆಕಾನ್ ಎಂಬ ಸಂಸ್ಥೆ ಇಲ್ಲಿ ಸಮೀಕ್ಷೆ ನಡೆಸಿ, ಈ ಎರಡು ಘಟಕಗಳ ಸ್ಥಾಪನೆಯ ಕುರಿತು ಅಧ್ಯಯನ ನಡೆಸಿದೆ. ಮುಂಬರುವ ಜನವರಿಯಲ್ಲಿ ಪರಿಸರ ಅಧ್ಯಯನದ ಕುರಿತ ವರದಿಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅರಣ್ಯ ಇಲಾಖೆಗೆ ಸಲ್ಲಿಸಿಲಾಗುತ್ತದೆ.

ಬಳಿಕ ಸಾರ್ವಜನಿಕ ಅಹವಾಲು ಸಭೆ ನಡೆಸಿ, ಅದರ ವರದಿಯನ್ನು ಭಾರತೀಯ ಅಣು ವಿದ್ಯುತ್ ನಿಗಮ (ಎನ್ ಪಿಸಿಐಲ್)ಗೆ ಕಳುಹಿಸಲಾಗುತ್ತದೆ. ಅದು ಕೇಂದ್ರ ಪರಿಸರ ಸಚಿವಾಲಯ ಹಾಗೂ ಅರಣ್ಯ ಸಚಿವಾಲಯಕ್ಕೆ ಅನುಮತಿಗಾಗಿ ಕಳುಹಿಸಲಿದೆ ಎಂದು ತಿಳಿಸಿದರು. ಮೊದಲೇ ಈ ಆರು ಘಟಕಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಹೀಗಾಗಿ ಮತ್ತೆ ಭೂ ಸ್ವಾಧೀನ ಮಾಡಿಕೊಳ್ಳುವ ಅಗತ್ಯ ಇಲ್ಲ. ಇರುವ ವಿದ್ಯುತ್ ಮಾರ್ಗವನ್ನೇ ಮೇಲ್ದರ್ಜೆಗೇರಿಸಿ, ಕಾರ್ಯ ಪ್ರಾರಂಭ ಮಾಡಲಿದ್ದೇವೆ ಎಂದು ಸಂಜಯಕುಮಾರ್ ತಿಳಿಸಿದರು.
ದೇಶದಲ್ಲಿ ಕೈಗಾ ಅಣು ಸ್ಥಾವರ ಹೆಚ್ಚು ಸುಂದರ ಹಾಗೂ ಹೆಚ್ಚು ಸುರಕ್ಷಿತ ಘಟಕವಾಗಿದೆ. ಇಲ್ಲಿನ ಅಧಿಕಾರಿಗಳ ಶ್ರಮದಿಂದಾಗಿ ಕೈಗಾ ಸ್ಥಾವರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. 1ನೇ ಘಟಕ ನಿರಂತರವಾಗಿ 553 ದಿನ, 2ನೇ ಘಟಕ 529, 3ನೇ ಘಟಕ 409, 4ನೇ ಘಟಕ 541 ದಿನಗಳವರೆಗೆ ವಿದ್ಯುತ್ ಉತ್ಪಾದಿಸುತ್ತಿವೆ ಎಂದು ಅವರು ತಿಳಿಸಿದರು. ಭಾರತದಲ್ಲಿ ಅಣು ವಿದ್ಯುತ್ ಸ್ಥಾವರಗಳು ಅತೀ ಉತ್ತಮವಾಗಿ ಹಾಗೂ ಸುರಕ್ಷಿತವಾಗಿ ಕಾರ್ಯನಿರ್ವಹಿಸುತ್ತಿವೆ.
ಕಲ್ಲಿದ್ದಲು ಆಧಾರಿತ ಘಟಕಗಳಿಗೆ ಹೆಚ್ಚು ಭವಿಷ್ಯ ಇಲ್ಲ. ಕೈಗಾ ಸ್ಥಾವರದಿಂದಾಗಿ ಪರಿಸರದ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದುರ ಬಗ್ಗೆ ಸಾರ್ವಜನಿಕರೇ ಖುದ್ದು ತಿಳಿಯಲು ಅನುಕೂಲವಾಗುವಂತೆ ಬಾಬಾ ಅಣು ವಿದ್ಯುತ್ ಸಂಶೋಧನಾ ಕೇಂದ್ರ ಹಾಗೂ ಭಾರತೀಯ ಪರಿಸರ ವಿಕಿರಣ ಮೇಲ್ವಿಚಾರಣಾ ವ್ಯವಸ್ಥೆಯ ಸಂಸ್ಥೆ (ಇಂಡಿಯನ್ ಎನ್ವಿರಾನ್ಮೆಂಟಲ್ ರೇಡಿಯೇಶನ್ ಮಾನಿಟರಿಂಗ್ ಸಿಸ್ಟಮ್ ಕಂಪೆನಿ) ಕೈಗಾದಲ್ಲಿ ವಿಕಿರಣ ಪ್ರಮಾಣ ಅಳೆಯಲು ಉಪಕರಣವನ್ನು ಅಳವಡಿಸಿದ್ದಾರೆ. ಅದರನ್ವಯ ಕೈಗಾದಲ್ಲಿ ವಿಕಿರಣ ಪ್ರಮಾಣ ಸಾಮಾನ್ಯ ಮಟ್ಟದಲ್ಲಿದೆ. ಇದರಿಂದ ಸಾರ್ವಜನಿಕರ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಂಜಯಕುಮಾರ್ ಸ್ಪಷ್ಟಪಡಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications