68 ವರ್ಷ ವಯಸ್ಸಿನ ಇವರು ಸಿವಿಲ್ ಡಿಪ್ಲೋಮಾ ವಿದ್ಯಾರ್ಥಿ
ಕಾರವಾರ, ಫೆಬ್ರವರಿ 4: ಅವರಿಗೀಗ ಮಕ್ಕಳನ್ನು ಎತ್ತಿ ಆಡಿಸುವ ವಯಸ್ಸು. ಈ ಪ್ರಾಯದಲ್ಲೂ ಅವರು ಓರ್ವ ಕ್ರಿಯಾಶೀಲ ಹಾಗೂ ಆದರ್ಶ ವಿದ್ಯಾರ್ಥಿಯಾಗಿ ನಿತ್ಯ ತರಗತಿಗೆ ಹಾಜರಾಗುತ್ತಿದ್ದಾರೆ. ತಮಗಿಂತ ಹಿರಿಯನಿಗೆ ಶಿಕ್ಷಕರಾಗಿ ಪಾಠ ಮಾಡುವ ಅದೃಷ್ಟ ಆ ಕಾಲೇಜಿನ ಉಪನ್ಯಾಸಕರದ್ದು.
ಅಂದಹಾಗೆ ಆ ಯಂಗ್ ಸೀನಿಯರ್ ವಿದ್ಯಾರ್ಥಿಯೇ ಶಿರಸಿಯ ಆದರ್ಶ ನಗರದ ನಿವಾಸಿ ನಾರಾಯಣ ಭಟ್ಟ. ವಯಸ್ಸು 68, ಆದರೂ ಇಲ್ಲಿನ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ. ಎಕ್ಸ್ಟ್ರನಲ್ ವಿದ್ಯಾರ್ಥಿ ಕೂಡ ಇವರಲ್ಲ. ನಿತ್ಯ ಕಾಲೇಜಿನ ಸಮವಸ್ತ್ರ ಧರಿಸಿ ಸರಿಯಾದ ಸಮಯಕ್ಕೆ ಕಾಲೇಜಿನ ತರಗತಿಗೆ ಹಾಜರಾಗಿ, ಟೀನೇಜ್ ವಿದ್ಯಾರ್ಥಿಗಳ ಜೊತೆಗೆ ಹೊಂದಿಕೊಂಡು, ಅವರಂತೆಯೇ ಕ್ಲಾಸಿನಲ್ಲಿ ಕುಳಿತು ಪಾಠ ಕೇಳುತ್ತಾರೆ.
ನಿತ್ಯದ ಹೋಮ್ ವರ್ಕ್ ಅನ್ನು ಕೂಡ ಚಾಚೂ ತಪ್ಪದೇ ಮಾಡಿಕೊಂಡು ಬರುವ ಮೂಲಕ ಕಾಲೇಜಿನ ಆದರ್ಶ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದಾರೆ. ತಾಂತ್ರಿಕ ಶಿಕ್ಷಣದ ಇತಿಹಾಸದಲ್ಲೇ ಇಷ್ಟೊಂದು ಸೀನಿಯರ್ ವ್ಯಕ್ತಿ ವಿದ್ಯಾರ್ಥಿಯಾಗಿದ್ದು ಬಹುಶಃ ಇದೇ ಮೊದಲು.

ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 1973ರಲ್ಲಿ ಮೆಕ್ಯಾನಿಕಲ್ ಡಿಪ್ಲೋಮಾದಲ್ಲಿ ರಾಜ್ಯಕ್ಕೆ ದ್ವಿತೀಯ ಶ್ರೇಣಿ ಪಡೆದಿದ್ದ ನಾರಾಯಣ ಭಟ್ಟರು, ಬಿಣಗಾದ ಕಾಸ್ಟಿಕ್ ಸೋಡಾ ಫ್ಯಾಕ್ಟರಿಯಲ್ಲಿ (ಆಗಿನ ಬಿಲ್ಟ್, ಈಗಿನ ಗ್ರಾಸಿಮ್ ಇಂಡಸ್ಟ್ರೀಸ್) ನೌಕರಿಗೆ ಸೇರಿಕೊಂಡಿದ್ದರು.
1993ರವರೆಗೆ ಕರ್ತವ್ಯ ನಿರ್ವಹಿಸಿ, ನಂತರ ಗುಜರಾತ್ ನಲ್ಲಿ 2013ರವರೆಗೆ ಕಾರ್ಯನಿರ್ವಹಿಸಿ ನಿವೃತ್ತರಾಗಿ, ಶಿರಸಿಗೆ ಬಂದು ನಿವೃತ್ತಿ ಜೀವನ ಕಳೆಯುತ್ತಿದ್ದರು.

ಆದರೆ ಸುಮ್ಮನೆ ಮನೆಯಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸಿವಿಲ್ ಡಿಪ್ಲೋಮಾ ಮಾಡಬೇಕೆಂಬ ಮಹಾದಾಸೆಯೊಂದಿಗೆ ಶಿರಸಿ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಸಹಕಾರದಿಂದ 2019ರಲ್ಲಿ ಪ್ರವೇಶ ಲಭಿಸಿ, ನಿತ್ಯ ತರಗತಿಗೆ ಹಾಜರಾಗಿ ಪ್ರಥಮ ವರ್ಷದಲ್ಲಿ ಶೇ.91 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಮೆಕ್ಯಾನಿಕಲ್ ಡಿಪ್ಲೊಮಾ ಮುಗಿಸಿದ ನನಗೆ ಸಿವಿಲ್ ಡಿಪ್ಲೊಮಾ ಮಾಡಬೇಕೆಂಬ ಹುಮ್ಮಸ್ಸಿತ್ತು. ಹೀಗಾಗಿ ಕಾಲೇಜಿಗೆ ಸೇರುತ್ತೇನೆ ಎಂದಾಗ ಪತ್ನಿ, ಮಕ್ಕಳು, ಅಳಿಯಂದಿರು ಕೂಡ ಖುಷಿಯಿಂದಲೇ ಒಪ್ಪಿದರು ಎಂದು ನಾರಾಯಣ ಭಟ್ ಹುಮ್ಮಸ್ಸಿನಿಂದಲೇ ನುಡಿಯುತ್ತಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications