ಕೈಗಾದಲ್ಲಿ ಬರ್ಡ್ ಮ್ಯಾರಾಥಾನ್; 8 ಹೊಸ ಪಕ್ಷಿಗಳು ಪತ್ತೆ
ಕಾರವಾರ, ಜನವರಿ 22: ಪರಿಸರ ಮುಂದಾಳತ್ವ ಕಾರ್ಯಕ್ರಮದಡಿ ಕೈಗಾ ಅಣು ವಿದ್ಯುತ್ ಕೇಂದ್ರವು ಭಾನುವಾರ 'ಕೈಗಾ ಬರ್ಡ್ ಮ್ಯಾರಾಥಾನ್' 8ನೇ ಆವೃತ್ತಿಯ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಕೈಗಾ ಅಣು ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 8 ಹೊಸ ಪಕ್ಷಿಗಳು ಪತ್ತೆಯಾಗಿವೆ.
ಈ ಮೂಲಕ ಕೈಗಾ ಅಣು ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಪ್ರದೇಶದಲ್ಲಿ ಆಯೋಜಿಸಿದ್ದ ಪಕ್ಷಿ ಗಣತಿಯಲ್ಲಿ ಈವರೆಗೆ ಪತ್ತೆಯಾದ ಪಕ್ಷಿಗಳ ಸಂಖ್ಯೆ 284ಕ್ಕೆ ಏರಿದೆ.
115 ಪಕ್ಷ ವೀಕ್ಷಣಾಕಾರರು ಈ ಬರ್ಡ್ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದರು. ಹೊಸ ಪಕ್ಷಿಗಳು ಸ್ಥಾವರದ ಪರಿಸರದಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ ಇಲ್ಲಿನ ವಾತಾವರಣವು ಆರೋಗ್ಯಕರವಾಗಿದೆ ಎಂದು ಕೈಗಾ ಅಣು ವಿದ್ಯುತ್ ಸ್ಥಾವರದ ನಿರ್ದೇಶಕರು ಅಭಿಪ್ರಾಯಪಟ್ಟಿದ್ದಾರೆ.

ಹೊಸ ಪಕ್ಷಿಗಳು ಇವು
ಇಂಡಿಯನ್ ಸ್ವಿಫ್ಟಲೆಟ್, ವೆಟ್ರಂಪಡ್ ಸ್ಪೆನ್ ಟೇಲ್, ಯುರೇಶಿಯನ್ ಹಾಬಿ, ನಾರ್ತರ್ನ್ ಪಿನ್ಟೇಲ್, ನಾರ್ತರ್ನ್ ಶೆವೇಲಿಯರ್, ಯುವ್ರೀ ಬೆಲ್ಲಿಡ್ ಕುಕ್ಕೂ, ಗ್ರೇಟರ್ ಸ್ಪಾಟ್ಟೆಡ್ ಈಗಲ್, ಯುರೇಶಿಯನ್ ಸ್ಪಾರ್ರೋ ಹಾಕ್ಗಳು ಈ ಬಾರಿ ಪತ್ತೆಯಾದ ಹೊಸ ಪಕ್ಷಿಗಳಾಗಿವೆ.

115 ಮಂದಿ ಭಾಗಿ
ಸ್ಥಳೀಯ ಕೈಗಾ ನೌಕರರು, ಶಿರಸಿಯ ಅರಣ್ಯ ಮಹಾವಿದ್ಯಾಲಯ, ಉತ್ತರ ಕರ್ನಾಟಕ ಪಕ್ಷಿ ವೀಕ್ಷಣಾ ತಂಡ, ಗೋವಾ ಬರ್ಡ್ ಕನ್ಸರ್ವೇಷನ್ ನೆಟ್ವರ್ಕ್, ಗೋವಾ ಮಹಾವಿದ್ಯಾಲಯ, ಬೆಂಗಳೂರು ಪಕ್ಷಿ ವೀಕ್ಷಣಾಕಾರರ ಸಂಘ, ಡೆಹರಾಡೂನ್ನ ವೈಲ್ಡ್ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಕೇರಳ ಬರ್ಡರ್ಸ್ ಹೀಗೆ ದೇಶದ ವಿವಿಧ ಭಾಗಗಳಿಂದ ಸುಮಾರು 115 ಪಕ್ಷಿ ವೀಕ್ಷಣಾಕಾರರು ಈ ಗಣತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪೂರಕ ಪರಿಸರ
ಪಕ್ಷಿ ಗಣತಿಗೆ ಚಾಲನೆ ನೀಡಿದ ಕೈಗಾ ವಿದ್ಯುತ್ ಕೇಂದ್ರದ ನಿರ್ದೇಶಕ ಸಂಜಯ ಕುಮಾರ, "ವರ್ಷದಿಂದ ವರ್ಷಕ್ಕೆ ಈ ಭಾಗದಲ್ಲಿ ಪಕ್ಷಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಲ್ಲಿನ ಪರಿಸರ ಆರೋಗ್ಯಕರವಾಗಿದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ. ಕೈಗಾ ಅಣುವಿದ್ಯುತ್ ಕೇಂದ್ರವು ಪರಿಸರಕ್ಕೆ ಪೂರಕವಾಗಿದ್ದು, ಭಾರತದ ವಿದ್ಯತ್ ಶಕ್ತಿಯ ಬೇಡಿಕೆಯನ್ನು ನೀಗಿಸುವತ್ತ ತನ್ನ ಅಮೂಲ್ಯ ಕೊಡುಗೆಯನ್ನು ನೀಡುತ್ತಿದೆ," ಎಂದರು.

ಗಣ್ಯರು ಉಪಸ್ಥಿತಿ
ಕೈಗಾ 3 ಮತ್ತು 4ನೇ ಘಟಕದ ನಿರ್ದೇಶಕ ಜೆ.ಆರ್.ದೇಶಪಾಂಡೆ, ಭಾರತೀಯ ಅಣು ವಿದ್ಯುತ್ ನಿಗಮದ ಮುಂಬೈ ಶಾಖೆಯ ಸುಶಾಂತ ಕುಮಾರ ಜೇನಾ, ವೈಲ್ಡ್ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಡಾ.ಹುಸೇನ್, ಕೈಗಾ ಪರಿಸರ ಮುಂದಾಳತ್ವ ಕಾರ್ಯಕ್ರಮದ ಅಧ್ಯಕ್ಷ ಪ್ರೇಮ ಕುಮಾರ ಉಪಸ್ಥಿತರಿದ್ದರು.
ಫೋಟೋಗಳು: ಸುನೀಲ್ ಬಾರ್ಕೂರ್, ಕೈಗಾ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications