ಸಾವಂತವಾಡದಲ್ಲಿ ಹೋಂ ನರ್ಸ್ ಮೇಲೆ ವೃದ್ಧನಿಂದ ಅತ್ಯಾಚಾರ
ಕಾರವಾರ, ಸೆಪ್ಟೆಂಬರ್.20: ಮನೆಗೆ ಹೋಗಿ ರೋಗಿಯನ್ನು ಆರೈಕೆ ಮಾಡಲು ನರ್ಸ್ ಗಳು ಇನ್ನು ಮುಂದೆ ಹಿಂಜರಿದರೆ ಅಚ್ಚರಿ ಇಲ್ಲ. ಕಾರಣ ಅಂತಹದೊಂದು ಘಟನೆ ಕಾರವಾರ ತಾಲೂಕಿನಲ್ಲಿ ನಡೆದಿದೆ.
ಹೋಂ ನರ್ಸ್ ಮೇಲೆ 70 ವರ್ಷದ ವೃದ್ಧನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ತಾಲೂಕಿನ ಮಾಜಾಳಿಯ ಸಾವಂತವಾಡದಲ್ಲಿ ಬೆಳಕಿಗೆ ಬಂದಿದೆ.
ದಿನಕರ ಸಾವಂತ ಎಂಬ ವೃದ್ಧ ಹೋಂ ನರ್ಸ್ ಮೇಲೆ ಅತ್ಯಾಚಾರ ನಡೆಸಿದ ಆರೋಪಿ.
ಆರೋಪಿ ತಂಗಿಯು ಅನಾರೋಗ್ಯ ಪೀಡಿತರಾಗಿದ್ದರು. ಅವರನ್ನು ನೋಡಿಕೊಳ್ಳಲು ಪೂನಾದಿಂದ ಹೋಂ ನರ್ಸ್(39) ಅನ್ನು ಮನೆಗೆ ಕರೆಸಲಾಗಿತ್ತು. ನರ್ಸ್ ಅನ್ನು ತನ್ನ ರೂಮಿಗೆ ಬಲವಂತವಾಗಿ ಎಳೆದೊಯ್ದ ವೃದ್ಧ, ಅತ್ಯಾಚಾರ ನಡೆಸಿದ್ದಾನೆ.

ಈ ಬಗ್ಗೆ ಅತ್ಯಾಚಾರಕ್ಕೊಳಗಾದ ನರ್ಸ್ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದೆ. ವೃದ್ಧನ ಬಂಧನಕ್ಕೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.
ದಿವ್ಯಾಂಗ ಮಹಿಳೆ ಮೇಲೆ ಅತ್ಯಾಚಾರ
ಕೆಲಸ ಕೊಡಿಸುವುದಾಗಿ ನಂಬಿಸಿ 29 ವರ್ಷದ ದಿವ್ಯಾಂಗ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸೋಮ ಸಾಯಿಲು ಬಂಧಿತ ಆರೋಪಿ.
ಸಂತ್ರಸ್ತೆಯ ಪತಿ ಆರ್ ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಅವರು ಇತ್ತೀಚೆಗೆ ನಿಧನ ಹೊಂದಿದರು. ಆ ಕೆಲಸವನ್ನು ಪಡೆಯಲು ಸಂತ್ರಸ್ತೆ ಪ್ರಯತ್ನಿಸುತ್ತಿದ್ದರು. ಈ ವೇಳೆ ಆರೋಪಿ ಆರ್ ಟಿಸಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ.
ಮಹಿಳೆ ಪ್ರಜ್ಞೆ ತಪ್ಪಿ ತಪ್ಪಿಸಿ ಈ ನೀಚ ಕೃತ್ಯ ಎಸಗಿರುವ ಆರೋಪಿ ಪೊಲೀಸರಿಗೆ ತಿಳಿಸಿದರೆ ಪುತ್ರನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾನೆ. ಅತ್ಯಾಚಾರ ಮತ್ತು ವಂಚನೆ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಪೊಲೀಸರು ಕೇಸ್ ದಾಖಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications