ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಳಾದರೂ ಆತ್ಮಹತ್ಯೆ ಮಾಡಿಕೊಂಡ ಬಾಲಕಿ
ಕಾರವಾರ, ಮೇ 07 : ಕರ್ನಾಟಕ ರಾಜ್ಯದ ಎಸ್ಎಸ್ಎಲ್ ಸಿ ಫಲಿತಾಂಶ ಇಂದು ಸೋಮವಾರ ಪ್ರಕಟವಾಗಿದೆ. ಹೆಚ್ಚು ಅಂಕ ಪಡೆದಿರುವ ಮಕ್ಕಳ ಸಂತೋಷ ಮುಗಿಲು ಮುಟ್ಟಿದರೆ, ಅನುತ್ತೀರ್ಣರಾದ ಮಕ್ಕಳು ಮುಂದೆ ಮತ್ತೇ ಪರೀಕ್ಷೆ ಬರೆದು ಉತ್ತೀರ್ಣರಾದರೆ ಆಯಿತು ಎಂಬ ಲೆಕ್ಕಚಾರದಲ್ಲಿದ್ದಾರೆ.
ಆದರೆ ಇಲ್ಲೊಬ್ಬಳು ಬಾಲಕಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರೂ ಅಂಕ ಕಡಿಮೆ ಬಂದಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಾಲೂಕಿನ ಮಾಜಾಳಿಯಲ್ಲಿ ನಡೆದಿದೆ.
ನಗರದ ಹಿಂದೂ ಹೈಸ್ಕೂಲಿನ ವಿದ್ಯಾರ್ಥಿನಿಯಾಗಿರುವ ಶೇಪಾಲಿ ಉಲ್ಲಾಸ ಪಡವಳಕರ ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದಳು. ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ಶೇ 66 ಫಲಿತಾಂಶ ಸಾಧಿಸಿದ್ದಳು. ಆದರೆ, ತಾನು ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕ ಬಂದಿದೆಯೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು, ನೋಡುವರ ಮನಕಲಕುವಂತಿತ್ತು.
ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications