ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆ: ಮಗಳನ್ನೇ ಅಪಹರಿಸಿದ ತಾಯಿ
ಕಾರವಾರ, ಡಿಸೆಂಬರ್ 26: ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶನಿವಾರ ವರದಿಯಾಗಿದೆ.
ರುತಿಕಾ ಎಂಬ ಯುವತಿ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬ ಯುವಕನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು. ಈ ಬಗ್ಗೆ ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತಿದ್ದ ಆಕೆಯ ತಾಯಿ ರೂಪ ಶಿರ್ಸಿಕರ್ ಗೆ ಇಷ್ಟವಿರಲಿಲ್ಲ.
ಮಗಳು ತನ್ನ ಮಾತು ಕೇಳದೇ ಬೇರೆ ಯುವಕನನ್ನು ವಿವಾಹವಾಗಿದ್ದಕ್ಕೆ ಕುಪಿತಗೊಂಡ ಈಕೆ, ಶನಿವಾರ ಬೆಳಗ್ಗೆ ತನ್ನ ತಾಯಿ ಹಾಗೂ ಮೂರು ಜನ ಯುವಕರೊಂದಿಗೆ ಬಸವೇಶ್ವರ ನಗರದಲ್ಲಿದ್ದ ರುತಿಕಾ ಮನೆಗೆ ಏಕಾಏಕಿ ಧಾವಿಸಿದ್ದಾಳೆ. ಈ ವೇಳೆ ಮನೆಯಲ್ಲಿದ್ದ ಎಲ್ಲರಿಗೂ ಪೆಪ್ಪರ್ ಸ್ಪ್ರೇ ಯನ್ನು ಮುಖಕ್ಕೆ ಎರಚಿ, ಮಗಳನ್ನು ಆಕೆಯ ಗಂಡನ ಎದುರೇ ತಾನು ತಂದಿದ್ದ ಕಾರಿನಲ್ಲಿ ಅಪಹರಿಸಿ ಕರೆದೊಯ್ದಿದ್ದಾಳೆ.

ಈ ಘಟನೆ ಸಂಬಂಧ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಯುವತಿ ಪತಿ ಮಣಿಕಂಠ ಅವರು, ಪತ್ನಿ ಅಪಹರಣದ ಬಗ್ಗೆ ದೂರು ನೀಡಿದ್ದಾರೆ. ಇನ್ನು ಅಪಹರಣ ಮಾಡಿದ ರೂಪ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಕುಟುಂಬದೊಂದಿಗೆ ಪರಾರಿಯಾಗಿದ್ದು, ಈಕೆಯ ಹುಡುಕಾಟ ನಡೆಸಲಾಗುತ್ತಿದೆ.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications