ಕಳವಳ ಹೆಚ್ಚಿಸಿದ ತಿಮಿಂಗಲಗಳ ಸರಣಿ ಸಾವು: ಕಾರಣ ಪತ್ತೆಗೆ ಅಧ್ಯಯನ!
ಕಾರವಾರ, ಸೆಪ್ಟೆಂಬರ್ 16: : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಕಡಲತೀರದಲ್ಲಿ ಕಳೆದೊಂದು ವಾರದ ಹಿಂದೆ ಬೃಹತ್ ತಿಮಿಂಗಿಲದ ಕಳೆಬರ ಪತ್ತೆಯಾದ ಬೆನ್ನಲ್ಲೇ ಶನಿವಾರ ಮತ್ತೆರಡು ತಿಮಿಂಗಿಲಗಳ ಕಳೆಬರ ಪತ್ತೆಯಾಗಿದೆ. ಆದರೆ ಈ ಸರಣಿ ತಿಮಿಂಗಲಗಳ ಸಾವು ಇದೀಗ ಕಡಲಜೀವಶಾಸ್ತ್ರಜ್ಞರಲ್ಲಿ ಕಳವಳ ಸೃಷ್ಟಿಸಿದ್ದು, ಅಧ್ಯಯನದ ಮೂಲಕ ಕಾರಣ ಪತ್ತೆಗೆ ಮುಂದಾಗಿದ್ದಾರೆ.
ಹೊನ್ನಾವರದ ಮುಗಳಿ ಕಡಲತೀರದಲ್ಲಿ ಕಳೆದ ಭಾನುವಾರ ಸುಮಾರು 35 ಮೀ. ಉದ್ದದ ಗಂಡು ತಿಮಿಂಗಿಲದ ಕಳೆಬರಹವೊಂದು ದಡದಲ್ಲಿ ಪತ್ತೆಯಾಗಿತ್ತು. ಮೃತಪಟ್ಟು ಹಲವು ದಿನಗಳ ಬಳಿಕ ಅರಬ್ಬಿ ಸಮುದ್ರದಲ್ಲಿ ತೇಲಿ ಬಂದ ಕಳೆಬರ ಹೊನ್ನಾವರದ ಮುಗಳಿ ಕಡಲತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ತಿಳಿದ ಹೊನ್ನಾವರ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಳೆಬರದ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಬಳಿಕ ಅಲ್ಲೀಯೇ ಹೂತಿದ್ದರು.

ಆದರೆ ಹೀಗೆ ಸಾವನ್ನಪ್ಪಿ ವಾರ ಕಳೆಯುವ ಮುನ್ನವೇ ಶನಿವಾರ ಬೆಳಿಗ್ಗೆ ಹೊನ್ನಾವರದ ಟೊಂಕಾ ಕಾಸರಕೋಡು ಕಡಲತೀರದ ಬಳಿ ಹೆಣ್ಣು ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಇದು ಕೂಡ ಭಾರೀ ಗಾತ್ರದ್ದಾಗಿದ್ದು, ಸುಮಾರು 25 ಮೀ. ಉದ್ದವಿದೆ ಎನ್ನಲಾಗಿದೆ. ಆದರೆ ಅರಣ್ಯಾಧಿಕಾರಿಗಳು ಹಾಗೂ ಕಡಲ ವಿಜ್ಞಾನಿಗಳು ಪರಿಶೀಲನೆಗೆ ತೆರಳಿದ್ದ ವೇಳೆ ಈ ಹೆಣ್ಣು ತಿಮಿಂಗಿಲ ಸಿಕ್ಕ ಅನತಿ ದೂರದಲ್ಲೇ ಇನ್ನೊಂದು ಮರಿ ತಿಮಿಂಗಿಲದ ಕಳೇಬರ ಸಿಕ್ಕಿದೆ ಎನ್ನಲಾಗಿದೆ.
ಸದ್ಯ ಇವೆರಡೂ ತಿಮಿಂಗಿಲಗಳ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಇನ್ನು ಈ ಬಗ್ಗೆ ಕಡಲ ಜೀವಶಾಸ್ತ್ರಜ್ಞ ಡಾ. ಶಿವಕುಮಾರ್ ಹರಗಿ ಮಾತನಾಡಿ, ತಿಮಿಂಗಿಲಗಳ ಕಳೇಬರ ಪೂರ್ತಿ ಕೊಳೆತಿರುವ ಕಾರಣ ಸಾವಿಗೆ ಕಾರಣ ಇನ್ನೂ ತಿಳಿದುಬರುತ್ತಿಲ್ಲ. ಆದರೆ ಒಂದೇ ವಾರದಲ್ಲಿ ಮೂರು ಕಳೇಬರ ದೊರೆತಿರುವುದು ಗಂಭೀರವಾಗಿದೆ. ಈ ಬಗ್ಗೆ ಅಧ್ಯಯನ ಮಾಡಬೇಕಿದೆ. ಸಿಕ್ಕ ಮೂರೂ ತಿಮಿಂಗಿಲಗಳು ಬಲೀನ್ ವ್ಹೇಲ್ ಜಾತಿಯದ್ದಾಗಿವೆ. ಸತ್ತು ಮೂರ್ನಾಲ್ಕು ದಿನಗಳ ಬಳಿಕ ಕಡಲತೀರಕ್ಕೆ ಬಂದಿವೆ. ಇವು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಶೆಡ್ಯೂಲ್ 1ರಲ್ಲಿ ಬರುವ ಕಾರಣ ಇವುಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಇನ್ನು ತಿಮಿಂಗಿಲಗಳದ್ದು ಇದೀಗ ಮಿಲನದ ಕಾಲ. ಗಂಡು, ಹೆಣ್ಣು ಹಾಗೂ ಮರಿಗಳ ಕಳೇಬರ ದೊರೆತಿರುವುದರಿಂದ ಇವು ಮಿಲನಕ್ಕೆಂದು ಶಾಂತ ಸಮುದ್ರಕ್ಕೆ ಬಂದಾಗ ಯಾವುದೋ ಬೃಹತ್ ಹಡಗುಗಳು ಡಿಕ್ಕಿಯಾಗಿ ಇವು ಸಾವನ್ನಪ್ಪಿರುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿದ ಬಳಿಕವೇ ನಿಖರ ಕಾರಣ ತಿಳಿಯಲಿದೆ ಎಂದು ಕಡಲ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತಾ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications