ಕಳವಳ ಹೆಚ್ಚಿಸಿದ ತಿಮಿಂಗಲಗಳ ಸರಣಿ ಸಾವು: ಕಾರಣ ಪತ್ತೆಗೆ ಅಧ್ಯಯನ!
ಕಾರವಾರ, ಸೆಪ್ಟೆಂಬರ್ 16: : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಕಡಲತೀರದಲ್ಲಿ ಕಳೆದೊಂದು ವಾರದ ಹಿಂದೆ ಬೃಹತ್ ತಿಮಿಂಗಿಲದ ಕಳೆಬರ ಪತ್ತೆಯಾದ ಬೆನ್ನಲ್ಲೇ ಶನಿವಾರ ಮತ್ತೆರಡು ತಿಮಿಂಗಿಲಗಳ ಕಳೆಬರ ಪತ್ತೆಯಾಗಿದೆ. ಆದರೆ ಈ ಸರಣಿ ತಿಮಿಂಗಲಗಳ ಸಾವು ಇದೀಗ ಕಡಲಜೀವಶಾಸ್ತ್ರಜ್ಞರಲ್ಲಿ ಕಳವಳ ಸೃಷ್ಟಿಸಿದ್ದು, ಅಧ್ಯಯನದ ಮೂಲಕ ಕಾರಣ ಪತ್ತೆಗೆ ಮುಂದಾಗಿದ್ದಾರೆ.
ಹೊನ್ನಾವರದ ಮುಗಳಿ ಕಡಲತೀರದಲ್ಲಿ ಕಳೆದ ಭಾನುವಾರ ಸುಮಾರು 35 ಮೀ. ಉದ್ದದ ಗಂಡು ತಿಮಿಂಗಿಲದ ಕಳೆಬರಹವೊಂದು ದಡದಲ್ಲಿ ಪತ್ತೆಯಾಗಿತ್ತು. ಮೃತಪಟ್ಟು ಹಲವು ದಿನಗಳ ಬಳಿಕ ಅರಬ್ಬಿ ಸಮುದ್ರದಲ್ಲಿ ತೇಲಿ ಬಂದ ಕಳೆಬರ ಹೊನ್ನಾವರದ ಮುಗಳಿ ಕಡಲತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ತಿಳಿದ ಹೊನ್ನಾವರ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಳೆಬರದ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಬಳಿಕ ಅಲ್ಲೀಯೇ ಹೂತಿದ್ದರು.

ಆದರೆ ಹೀಗೆ ಸಾವನ್ನಪ್ಪಿ ವಾರ ಕಳೆಯುವ ಮುನ್ನವೇ ಶನಿವಾರ ಬೆಳಿಗ್ಗೆ ಹೊನ್ನಾವರದ ಟೊಂಕಾ ಕಾಸರಕೋಡು ಕಡಲತೀರದ ಬಳಿ ಹೆಣ್ಣು ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಇದು ಕೂಡ ಭಾರೀ ಗಾತ್ರದ್ದಾಗಿದ್ದು, ಸುಮಾರು 25 ಮೀ. ಉದ್ದವಿದೆ ಎನ್ನಲಾಗಿದೆ. ಆದರೆ ಅರಣ್ಯಾಧಿಕಾರಿಗಳು ಹಾಗೂ ಕಡಲ ವಿಜ್ಞಾನಿಗಳು ಪರಿಶೀಲನೆಗೆ ತೆರಳಿದ್ದ ವೇಳೆ ಈ ಹೆಣ್ಣು ತಿಮಿಂಗಿಲ ಸಿಕ್ಕ ಅನತಿ ದೂರದಲ್ಲೇ ಇನ್ನೊಂದು ಮರಿ ತಿಮಿಂಗಿಲದ ಕಳೇಬರ ಸಿಕ್ಕಿದೆ ಎನ್ನಲಾಗಿದೆ.
ಸದ್ಯ ಇವೆರಡೂ ತಿಮಿಂಗಿಲಗಳ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಇನ್ನು ಈ ಬಗ್ಗೆ ಕಡಲ ಜೀವಶಾಸ್ತ್ರಜ್ಞ ಡಾ. ಶಿವಕುಮಾರ್ ಹರಗಿ ಮಾತನಾಡಿ, ತಿಮಿಂಗಿಲಗಳ ಕಳೇಬರ ಪೂರ್ತಿ ಕೊಳೆತಿರುವ ಕಾರಣ ಸಾವಿಗೆ ಕಾರಣ ಇನ್ನೂ ತಿಳಿದುಬರುತ್ತಿಲ್ಲ. ಆದರೆ ಒಂದೇ ವಾರದಲ್ಲಿ ಮೂರು ಕಳೇಬರ ದೊರೆತಿರುವುದು ಗಂಭೀರವಾಗಿದೆ. ಈ ಬಗ್ಗೆ ಅಧ್ಯಯನ ಮಾಡಬೇಕಿದೆ. ಸಿಕ್ಕ ಮೂರೂ ತಿಮಿಂಗಿಲಗಳು ಬಲೀನ್ ವ್ಹೇಲ್ ಜಾತಿಯದ್ದಾಗಿವೆ. ಸತ್ತು ಮೂರ್ನಾಲ್ಕು ದಿನಗಳ ಬಳಿಕ ಕಡಲತೀರಕ್ಕೆ ಬಂದಿವೆ. ಇವು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಶೆಡ್ಯೂಲ್ 1ರಲ್ಲಿ ಬರುವ ಕಾರಣ ಇವುಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಇನ್ನು ತಿಮಿಂಗಿಲಗಳದ್ದು ಇದೀಗ ಮಿಲನದ ಕಾಲ. ಗಂಡು, ಹೆಣ್ಣು ಹಾಗೂ ಮರಿಗಳ ಕಳೇಬರ ದೊರೆತಿರುವುದರಿಂದ ಇವು ಮಿಲನಕ್ಕೆಂದು ಶಾಂತ ಸಮುದ್ರಕ್ಕೆ ಬಂದಾಗ ಯಾವುದೋ ಬೃಹತ್ ಹಡಗುಗಳು ಡಿಕ್ಕಿಯಾಗಿ ಇವು ಸಾವನ್ನಪ್ಪಿರುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿದ ಬಳಿಕವೇ ನಿಖರ ಕಾರಣ ತಿಳಿಯಲಿದೆ ಎಂದು ಕಡಲ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತಾ ತಿಳಿಸಿದ್ದಾರೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications