ಕುಮಟಾದ ಡಾ. ಜಾನು ಆಸ್ಪತ್ರೆಯಲ್ಲಿ ಗೋಕರ್ಣ ಮಹಿಳೆಗೆ ತ್ರಿವಳಿ ಜನನ
ಕುಮಟಾ, ಅಕ್ಟೋಬರ್ 03: ಕುಮಟಾ ಪಟ್ಟಣದ ಸುಭಾಸ್ ರಸ್ತೆಯ ಪ್ರಸಿದ್ಧ ಡಾ ಜಾನು ಆಸ್ಪತ್ರೆಯಲ್ಲಿ ಗರ್ಭಿಣಿಯೋರ್ವಳು ತ್ರಿವಳಿ ಶಿಶುಗಳಿಗೆ ಜನ್ಮ ನೀಡಿದ್ದು, ತಾಯಿ, ಮಗು ಸುರಕ್ಷಿತರಾಗಿದ್ದಾರೆ.
ಜಿಲ್ಲೆಯಲ್ಲಿಯೇ ಪ್ರಸಿದ್ಧ ಗಳಿಸಿರುವ ಡಾ ಜಾನು ಮಣಕಿಕರ್ಸ್ ಮೆಟರನಿಟಿ ಮತ್ತು ನರ್ಸಿಂಗ್ ಹೋಮ್ನಲ್ಲಿ ತ್ರಿವಳಿ ಶಿಶುಗಳಿಗೆ ಜನ್ಮ ನೀಡಿದವರು ಗೋಕರ್ಣದ ಗಂಗಾವಳಿ ನಿವಾಸಿಯಾದ 24 ವರ್ಷದ ಹಲೀಮಾ ಸಾದಿಕ್ ಸಾಬ್. ಇವರಿಗೆ 7ನೇ ತಿಂಗಳಿನಲ್ಲೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ ಜಾನು ಆಸ್ಪತ್ರೆಯಲ್ಲಿ ದಾಖಲಿಸಿದ್ದರು.
ಗರ್ಭಿಣಿಯನ್ನು ಪರೀಕ್ಷಿಸಿದ ಡಾ ಪ್ರಶಾಂತ ಮಣಕಿಕರ್ ಅವರು ನಾರ್ಮಲ್ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಸುರಕ್ಷಿತ ಮತ್ತು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದರಿಂದ ಹಲೀಮಾ ಸಾದಿಕ್ ಸಾಬ್ ಅವರು ಎರಡು ಹೆಣ್ಣು ಮತ್ತು ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಆದರೂ ಚಿಕ್ಕ ಶಿಶುಗಳ ಆರೋಗ್ಯ ಸುರಕ್ಷತಾ ದೃಷ್ಠಿಯಿಂದ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಶಿಶುಗಳನ್ನು ಮಣಿಪಾಲ ಆಸ್ಪತ್ರೆಯ ಶಿಶು ಸುರಕ್ಷತಾ ಕೇಂದ್ರದಲ್ಲಿ ಇರಿಸಲಾಗಿದೆ.
ಕುಮಟಾ ಪಟ್ಟಣದ ಸುಭಾಸ್ ರಸ್ತೆಯ ಡಾ.ಜಾನು ಆಸ್ಪತ್ರೆಯಲ್ಲಿ ಗರ್ಭಿಣಿಯೋರ್ವರು ಅವಧಿ ಪೂರ್ವವೇ ತ್ರಿವಳಿ ಶಿಶುಗಳಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಹೆರಿಗೆಯ ಬಳಿಕ ಸದ್ಯ ತಾಯಿ, ಮಗು ಸುರಕ್ಷಿತರಾಗಿದ್ದಾರೆ.#Kumta #Kannadanews pic.twitter.com/ycqb89V5Z1
— oneindiakannada (@OneindiaKannada) October 3, 2021
ಜಾನು ಆಸ್ಪತ್ರೆಯ ಡಾ ಪ್ರಶಾಂತ ಮಣಕಿಕರ್ ಅವರು ಉತ್ತಮ ಸ್ತ್ರೀ ರೋಗ ತಜ್ಞ ವೈದ್ಯರಾಗಿದ್ದು, ಅವರು 10 ವರ್ಷಗಳ ಹಿಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವಾಗಲೂ ಎರಡು ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದು, ಅವರು ಕೂಡ ತ್ರಿವಳಿ ಶಿಶುಗಳಿಗೆ ಜನ್ಮ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಅದರಂತೆ ಡಾ ಪ್ರಶಾಂತ ಮಣಕಿಕರ್ ಅವರ ಅಜ್ಜ ಜಾನು ಮಣಕಿಕರ್ ಮತ್ತು ತಂದೆ ಕಮಲಾಕರ್ ಮಣಕಿಕರ್ ಪ್ರಸಿದ್ಧ ವೈದ್ಯರಾಗಿದ್ದರು. ಡಾ ಜಾನು ಎಂದರೆ ಇಡೀ ಜಿಲ್ಲೆಯಲ್ಲಿಯೇ ಗುರುತಿಸಿಕೊಂಡ ವೈದ್ಯರಾಗಿದ್ದರು. ಅಜ್ಜ ಮತ್ತು ತಂದೆಯವರ ಸೇವಾಭಾವವನ್ನು ಡಾ ಪ್ರಶಾಂತ ಅವರು ಮುಂದುವರೆಸಿಕೊಂಡು ಹೋಗುತ್ತಿದ್ದು, ತಮ್ಮ ಅಜ್ಜನ ಹೆಸರಿನಲ್ಲಿರುವ ಆಸ್ಪತ್ರೆಯಲ್ಲೂ ಬಡ ಜನರಿಗೆ ಅತೀ ಕಡಿಮೆ ಶುಲ್ಕದಲ್ಲಿ ಚಿಕಿತ್ಸೆ ನೀಡುವ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಲ್ಲದೇ 1964ರಲ್ಲಿ ಆರಂಭವಾದ ಡಾ ಜಾನು ಮಣಕಿಕರ್ಸ್ ಮೆಟರನಿಟಿ ಮತ್ತು ನರ್ಸಿಂಗ್ ಹೋಮ್ 57 ವರ್ಷಗಳಿಂದ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ಜಿಲ್ಲೆಯಲ್ಲಿಯೇ ಹೆಸರುಗಳಿಸಿದೆ. ಈ ಪ್ರಸಿದ್ಧ ಆಸ್ಪತ್ರೆಗೆ ನ್ಯಾಷನಲ್ ಎಕ್ರಿಡೇಷನ್ ಬೋರ್ಡ್ ಫಾರ್ ಹಾಸ್ಪಿಟಲ್ ಆ್ಯಂಡ್ ಹೆಲ್ತ್ ಕೇರ್ ಪ್ರೊವೈಡರ್ ಎಂಬ ಪ್ರಮಾಣ ಪತ್ರ ಕೂಡ ದೊರೆತ್ತಿರುವುದು ರೋಗಿಗಳಿಗೆ ವೈದ್ಯರ ಬಗ್ಗೆ ಇನ್ನು ಹೆಚ್ಚಿನ ವಿಶ್ವಾಸ ಮೂಡುವಂತೆ ಮಾಡಿದೆ.
Recommended Video
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications