ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಸಿಯಲ್ಲಿ ಮತದಾನ ಮುಗಿಯುತ್ತಿದ್ದಂತೆಯೇ ಗಲಾಟೆ:ಓರ್ವನ ಕೊಲೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಶಿರಸಿ, ಏಪ್ರಿಲ್ 24: ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಮಂಗಳವಾರ (ಏ.23)ರಾತ್ರಿ ಪಟ್ಟಣದಲ್ಲಿ ಒಂದೇ ಕೋಮಿನ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆ ನಡೆದ ಸ್ಥಳದಲ್ಲೇ ವ್ಯಕ್ತಿಯೊಬ್ಬನ ಮೃತ ದೇಹ ಬುಧವಾರ ಪತ್ತೆಯಾಗಿದೆ.

ಶಿರಸಿಯ ಕಸ್ತೂರಬಾ ನಗರದ ಬಯಲು ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಅಸ್ಸಲಾಂ ಬಾಬಾಜಾನ್ (22) ಎಂಬುವವನು ಕೊಲೆಯಾಗಿರುವವನು.

After the voting one person is murdered in Sirsi

ರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಮೈತ್ರಿ ನಾಯಕರಿಂದ ಪ್ರತಿತಂತ್ರರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಮೈತ್ರಿ ನಾಯಕರಿಂದ ಪ್ರತಿತಂತ್ರ

ಮಂಗಳವಾರ (ಏ.23)ರಾತ್ರಿ ಒಂದೇ ಕೋಮಿನ ಎರಡು ಗುಂಪುಗಳು ಕಸ್ತೂರಬಾ ನಗರದಲ್ಲಿ ಗಲಾಟೆ ಮಾಡಿಕೊಂಡಿವೆ. ಈ ವೇಳೆ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಅನೀಫ್ ತಹಸೀಲ್ದಾರ್ ಗೆ ಚಾಕು ಇರಿಯಲಾಗಿತ್ತು. ತಕ್ಷಣದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಲಾಟೆಯನ್ನು ತಹಬದಿಗೆ ತಂದಿದ್ದರು. ಚಾಕುವಿಂದ ಇರಿತಗೊಂಡ ಅನೀಫ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿತ್ತು.

After the voting one person is murdered in Sirsi

 ಎನ್ ಡಿ ತಿವಾರಿ ಪುತ್ರನ ನಿಗೂಢ ಸಾವು, ರೋಹಿತ್ ಪತ್ನಿಯ ಬಂಧನ ಎನ್ ಡಿ ತಿವಾರಿ ಪುತ್ರನ ನಿಗೂಢ ಸಾವು, ರೋಹಿತ್ ಪತ್ನಿಯ ಬಂಧನ

ಆದರೆ, ಈ ಗಲಾಟೆ ನಡೆದ ಸ್ಥಳದಲ್ಲೇ ಇಂದು ಬುಧವಾರ ಬೆಳಗ್ಗೆ ಅಸ್ಸಲಾಂ ಎಂಬಾತನ ಮೃತ ದೇಹ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಲೆಗೆ ರಾಡ್ ನಿಂದ ಹೊಡೆದು, ಇರಿಯಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಲ್ಲಿ ಕಬ್ಬಿಣದ ರಾಡ್ ಕೂಡ ಪತ್ತೆಯಾಗಿದೆ.ಘಟನೆ ಸಂಬಂಧ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
After the voting in Sirsi,there was a dispute between the two groups. Dead body of a person is now found in an dispute place. Case was registered at Sirsi Market Station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X