ಶಿರ್ಲೇ ಜಲಪಾತಕ್ಕೆ ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 6 ಜನ ಸುರಕ್ಷಿತವಾಗಿ ಪತ್ತೆ
ಕಾರವಾರ, ಜುಲೈ 23: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಶಿರ್ಲೇ ಜಲಪಾತಕ್ಕೆ ಗುರುವಾರ ಮಧ್ಯಾಹ್ನ ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ ಆರು ಜನ ಯುವಕರು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಪತ್ತೆಯಾಗಿದ್ದಾರೆ.
ಶಿರ್ಲೇ ಜಲಪಾತದ ಪಕ್ಕದ ಗ್ರಾಮ ಸುಣಜೋಗದ ರಾಘವೇಂದ್ರ ಭಟ್ಟ ಎಂಬುವವರ ತೋಟದಲ್ಲಿ ಗುರುವಾರ ರಾತ್ರಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ ಮನೆಯಿಂದ ತೋಟದ ಕಡೆಗೆ ತೆರಳಿದಾಗ ಚಳಿಯಲ್ಲಿ ನಡುಗುತ್ತಾ ನಿಂತಿದ್ದ ಆರು ಜನರನ್ನು ಕಂಡ ರಾಘವೇಂದ್ರ ಭಟ್, ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಒಪ್ಪಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಆರು ಜನ ಯುವಕರು ಮೂರು ಸ್ಕೂಟರ್ ಮೇಲೆ ಶಿರ್ಲೇ ಪ್ರವಾಸಕ್ಕೆ ಬಂದಿದ್ದರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಲಪಾತ ಮತ್ತು ಹಳ್ಳಕೊಳ್ಳಗಳಲ್ಲಿ ಭಾರೀ ಮಳೆಯಿಂದಾಗಿ ನೀರು ತುಂಬಿ ಹರಿಯುತ್ತಿದ್ದು, ಪ್ರವಾಸಿಗರು ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಲವಾರು ಜನ ಶಿರ್ಲೇ ಪ್ರವಾಸಿಗರನ್ನು ತಡೆದಿದ್ದರು.

ಕೆಲವು ಜನ ಪ್ರವಾಸಿಗರು ಮರಳಿ ತಮ್ಮ ಊರುಗಳಿಗೆ ತೆರಳಿದ್ದರು. ಇನ್ನು ಕೆಲವರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಕ್ಯಾತೆ ತೆಗೆದು ಶಿರ್ಲೇ ಜಲಪಾತಕ್ಕೆ ತೆರಳಿದ್ದರು. ಅವರಲ್ಲಿ ಕೆಲವು ಗುಂಪಿನವರು ಸಮಯ ಇರುವಾಗಲೇ ಮರಳಿ ಬಂದಿದ್ದು, ಆರು ಜನರ ಒಂದು ತಂಡ ಮಾತ್ರ ಶೀರ್ಲೆ ಫಾಲ್ಸ್ ಬಳಿ ಸಿಲುಕಿಕೊಂಡಿತ್ತು.
ಹುಬ್ಬಳ್ಳಿಯ ನಾಪತ್ತೆಯಾದ ಈ ಆರು ಜನ ಶಿರ್ಲೇ ಜಲಪಾತಕ್ಕೆ ತೆರಳುವಾಗ ಇದ್ದ ಕಾಲು ಸಂಕ ಮರಳಿ ಬರುವಾಗ ನೀರಿಗೆ ಕೊಚ್ಚಿ ಹೋಗಿತ್ತು. ಹೀಗಾಗಿ ಹಳ್ಳವನ್ನು ದಾಟಿ ಸ್ಕೂಟರ್ ಇಟ್ಟಿರುವ ಎರಡು ಕಿ.ಮೀ ದೂರದ ಸ್ಥಳಕ್ಕೆ ಬರುವುದು ಇವರಿಗೆ ಕಷ್ಟಕರವಾಗಿದ್ದು, ಸಿಕ್ಕಿರುವ ದಾರಿಯನ್ನು ಹುಡುಕಿಕೊಂಡು ಇರುವ ಏಕೈಕ ಕಾಲು ಸಂಕವನ್ನು ದಾಟಿ ರಾಘವೇಂದ್ರ ಭಟ್ರವರ ತೋಟಕ್ಕೆ ತೆರಳಿ ಮತ್ತೆ ತೋಟದಲ್ಲಿ ಚಳಿಯಲ್ಲಿ ನಡುಗುತ್ತ ಕುಳಿತಿದ್ದರು.

ಹುಬ್ಬಳ್ಳಿಯ ಕುಟುಂಬಸ್ಥರಿಗೆ ವಿಷಯ ತಿಳಿದು ನಸೂಕಿನಲ್ಲಿಯೇ ಜಲಪಾತಕ್ಕೆ ಆಗಮಿಸಿದ್ದರು. ನಾಪತ್ತೆಯಾದವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಶುಕ್ರವಾರ ಬೆಳಿಗ್ಗೆ ಸುಮಾರು 9.15 ಗಂಟೆಗೆ ನಾಪತ್ತೆಯಾಗಿರುವ ಆರು ಜನ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ಸಿಕ್ಕ ನಂತರ ಕುಟುಂಬಸ್ಥರು ನಿರಾಳರಾದರು.
ನಾಪತ್ತೆಯಾಗಿರುವ ಆರು ಜನ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಹಶೀಲ್ದಾರ ಶ್ರೀಕೃಷ್ಣ ಕಾಮಕರ್ ಹಾಗೂ ಇಡಗುಂಡಿ ವಲಯ ಅರಣ್ಯಾಧಿಕಾರಿ ಪ್ರಸಾದ್ ಪೆಡ್ನೇಕರ್ ತಿಳಿಸಿದ್ದಾರೆ.

ಗುರುವಾರ ರೇನ್ಕೋಟ್ ಹಾಗೂ ಮಾಸ್ಕ್ ಧರಿಸಿರುವ ಕಾರಣಕ್ಕೆ ಪ್ರವಾಸಿಗರು ಪುರುಷರು ಅಥವಾ ಮಹಿಳೆಯರು ಅನ್ನುವುದು ಅಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೊಂದಲ ಉಂಟಾಗಿತ್ತು. ಪತ್ತೆಯಾಗಿರುವ ನಾಲ್ವರು 20ರಿಂದ 25 ವರ್ಷದ ಯುವಕರಾಗಿದ್ದಾರೆ. ಪೊಲೀಸ್ ಮಾಹಿತಿಗಾಗಿ ಯುವಕರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications