ಡಿ.9 ರಂದು ಕುಮಟಾದಲ್ಲಿ ಸ್ವಸ್ತಿ ಸಂಭ್ರಮ 2018 ಕಾರ್ಯಕ್ರಮ
ಸ್ವಸ್ತಿ ಪ್ರಕಾಶನ ಹಾಗೂ ಸ್ವಸ್ತಿ ಬಳಗ ಕುಮಟಾದ ಸಹಯೋಗದಲ್ಲಿ ಐದನೇ ವರ್ಷದ ಕಾರ್ಯಕ್ರಮದ ನಿಮಿತ್ತ " ಸ್ವಸ್ತಿ ಸಂಭ್ರಮ- 2018" ಎನ್ನುವ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಿಸೆಂಬರ್ 9 ಭಾನುವಾರದದಂದು ಕುಮಟಾದ ಗಿಬ್ ಪ್ರೌಢಶಾಲೆಯ ಆವರಣದಲ್ಲಿರುವ ರಾಜೇಂದ್ರ ಪ್ರಸಾದ್ ಸಭಾ ಭವನ ದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ನಿಮಿತ್ತ ಕರಕುಶಲ ವಸ್ತು ಪ್ರದರ್ಶನ, ಕವಿ ಸಮಯ ಹಾಗೂ ಶ್ರೀಮತಿ ಪ್ರಿಯಾ ಭಟ್ ಅವರ " ನಾನೊಂದು ಹುಚ್ಚು ಹೊಳೆ" ಕಥಾಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ಸೇರಿದಂತೆ ಬೆಳಿಗ್ಗೆ ಹತ್ತರಿಂದ ಸಂಜೆ ಐದರ ವರೆಗೂ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಜಿ.ಡಿ. ಭಟ್ ಕೆಕ್ಕಾರು(ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು) ಡಾ. ಶ್ರೀಧರ್ ಬಳಗಾರ್(ಉಪನ್ಯಾಸಕರು,ಕಮಲಾ ಬಾಳಿಗಾ ಮಹಾ ವಿದ್ಯಾಲಯ ಕುಮಟಾ)ಕೆ.ಎನ್. ವೆಂಕಟಗಿರಿ(ಪತ್ರಕರ್ತರು ಸಾಗರ) ಹಾಗೂ ಶ್ರೀ ಉಮೇಶ್ ಮುಂಡಳ್ಳಿ(ಗೌರವ ಕೋಶಾಧ್ಯಕ್ಷರು ಜಿ.ಕ.ಸ.ಪ. ಉತ್ತರ ಕನ್ನಡ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಅನೇಕ ಕರ ಕುಶಲ ಕಲಾವಿದರು ಹಾಗೂ ಕವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

"ಸ್ವಸ್ತಿ ಪ್ರಕಾಶನ"ವು ಕಲೆ ಸಂಸ್ಕೃತಿ, ಸಾಹಿತ್ಯವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಈಗ ಐದು ವರುಷಗಳಿಂದ ಪ್ರತೀ ವರ್ಷವೂ " ನಮ್ಮಿಂದ ನಿಮಗೆ ಕನ್ನಡವು ಮನೆಮನೆಗೆ" ಎಂಬ ಧ್ಯೇಯದೊಂದಿಗೆ ಕನ್ನಡ ಸಾಹಿತ್ಯದ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ರಾಜ್ಯ ಮಟ್ಟದ ಕಥಾ ಸಂಕಲನ ಸ್ಪರ್ಧೆ ಕಾದಂಬರಿ ಸ್ಪರ್ಧೆಗಳನ್ನು ನಡೆಸಿ ಬಹುಮಾನಿತ ಕೃತಿಗಳನ್ನು ಪ್ರಕಟಿಸಿದೆ. ಈ ವರ್ಷ ಪ್ರಿಯಾ ಭಟ್ ಅವರ "ನಾನೊಂದು ಹುಚ್ಚು ಹೊಳೆ" ಕಥಾ ಸಂಕಲನವೂ ಇದೇ ದಿನ ಮಧ್ಯಾಹ್ನ 2.30 ಕ್ಕೆ ಲೋಕಾರ್ಪಣೆಗೊಳ್ಳಲಿದ್ದು ಸಾಹಿತ್ಯಾಸಕ್ತರು ಕಲಾವಿದರು ಕವಿಗಳು ಎಲ್ಲರೂ ಸೇರುವ ಕನ್ನಡದ ಹಬ್ಬ ಇದಾಗಿದ್ದು ಸಾರ್ವಜನಿಕರು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಆಯೋಜಕರು ಮನವಿ ಮಾಡಿಕೊಂಡಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications