ಡಿ.9 ರಂದು ಕುಮಟಾದಲ್ಲಿ ಸ್ವಸ್ತಿ ಸಂಭ್ರಮ 2018 ಕಾರ್ಯಕ್ರಮ
ಸ್ವಸ್ತಿ ಪ್ರಕಾಶನ ಹಾಗೂ ಸ್ವಸ್ತಿ ಬಳಗ ಕುಮಟಾದ ಸಹಯೋಗದಲ್ಲಿ ಐದನೇ ವರ್ಷದ ಕಾರ್ಯಕ್ರಮದ ನಿಮಿತ್ತ " ಸ್ವಸ್ತಿ ಸಂಭ್ರಮ- 2018" ಎನ್ನುವ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಿಸೆಂಬರ್ 9 ಭಾನುವಾರದದಂದು ಕುಮಟಾದ ಗಿಬ್ ಪ್ರೌಢಶಾಲೆಯ ಆವರಣದಲ್ಲಿರುವ ರಾಜೇಂದ್ರ ಪ್ರಸಾದ್ ಸಭಾ ಭವನ ದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ನಿಮಿತ್ತ ಕರಕುಶಲ ವಸ್ತು ಪ್ರದರ್ಶನ, ಕವಿ ಸಮಯ ಹಾಗೂ ಶ್ರೀಮತಿ ಪ್ರಿಯಾ ಭಟ್ ಅವರ " ನಾನೊಂದು ಹುಚ್ಚು ಹೊಳೆ" ಕಥಾಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ಸೇರಿದಂತೆ ಬೆಳಿಗ್ಗೆ ಹತ್ತರಿಂದ ಸಂಜೆ ಐದರ ವರೆಗೂ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಜಿ.ಡಿ. ಭಟ್ ಕೆಕ್ಕಾರು(ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು) ಡಾ. ಶ್ರೀಧರ್ ಬಳಗಾರ್(ಉಪನ್ಯಾಸಕರು,ಕಮಲಾ ಬಾಳಿಗಾ ಮಹಾ ವಿದ್ಯಾಲಯ ಕುಮಟಾ)ಕೆ.ಎನ್. ವೆಂಕಟಗಿರಿ(ಪತ್ರಕರ್ತರು ಸಾಗರ) ಹಾಗೂ ಶ್ರೀ ಉಮೇಶ್ ಮುಂಡಳ್ಳಿ(ಗೌರವ ಕೋಶಾಧ್ಯಕ್ಷರು ಜಿ.ಕ.ಸ.ಪ. ಉತ್ತರ ಕನ್ನಡ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಅನೇಕ ಕರ ಕುಶಲ ಕಲಾವಿದರು ಹಾಗೂ ಕವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

"ಸ್ವಸ್ತಿ ಪ್ರಕಾಶನ"ವು ಕಲೆ ಸಂಸ್ಕೃತಿ, ಸಾಹಿತ್ಯವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಈಗ ಐದು ವರುಷಗಳಿಂದ ಪ್ರತೀ ವರ್ಷವೂ " ನಮ್ಮಿಂದ ನಿಮಗೆ ಕನ್ನಡವು ಮನೆಮನೆಗೆ" ಎಂಬ ಧ್ಯೇಯದೊಂದಿಗೆ ಕನ್ನಡ ಸಾಹಿತ್ಯದ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ರಾಜ್ಯ ಮಟ್ಟದ ಕಥಾ ಸಂಕಲನ ಸ್ಪರ್ಧೆ ಕಾದಂಬರಿ ಸ್ಪರ್ಧೆಗಳನ್ನು ನಡೆಸಿ ಬಹುಮಾನಿತ ಕೃತಿಗಳನ್ನು ಪ್ರಕಟಿಸಿದೆ. ಈ ವರ್ಷ ಪ್ರಿಯಾ ಭಟ್ ಅವರ "ನಾನೊಂದು ಹುಚ್ಚು ಹೊಳೆ" ಕಥಾ ಸಂಕಲನವೂ ಇದೇ ದಿನ ಮಧ್ಯಾಹ್ನ 2.30 ಕ್ಕೆ ಲೋಕಾರ್ಪಣೆಗೊಳ್ಳಲಿದ್ದು ಸಾಹಿತ್ಯಾಸಕ್ತರು ಕಲಾವಿದರು ಕವಿಗಳು ಎಲ್ಲರೂ ಸೇರುವ ಕನ್ನಡದ ಹಬ್ಬ ಇದಾಗಿದ್ದು ಸಾರ್ವಜನಿಕರು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಆಯೋಜಕರು ಮನವಿ ಮಾಡಿಕೊಂಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications