‘ನೆರೆ ಪರಿಹಾರದ ಅನುದಾನದಲ್ಲಿ ಶಾಸಕಿಗೆ ಕಮಿಷನ್’; ಆನಂದ್ ಅಸ್ನೋಟಿಕರ್ ಆರೋಪ
ಕಾರವಾರ, ನವೆಂಬರ್ 19: 'ಕ್ಷೇತ್ರದಲ್ಲಿ ನೆರೆ ಪ್ರವಾಹದಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ನೆಲೆ ಕಲ್ಪಿಸಲು ಸರ್ಕಾರದಿಂದ ಬಂದ ಪ್ರವಾಹ ಪರಿಹಾರದ ಅನುದಾನದಲ್ಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಅವರ ಬೆಂಬಲಿಗರು ಗುತ್ತಿಗೆದಾರರಿಂದ ಶೇ 25ರಷ್ಟು ಕಮಿಷನ್ ಪಡೆಯುತ್ತಿದ್ದಾರೆ' ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಗಂಭೀರ ಆರೋಪ ಮಾಡಿದ್ದಾರೆ.
ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ನೆರೆ ಪ್ರವಾಹದಲ್ಲಿ ಹಾನಿಗೊಳಗಾದ ಮನೆ, ಸೇತುವೆ, ರಸ್ತೆ, ಕಟ್ಟಡ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಅನುದಾನ ಬಂದಿದೆ. ಅದನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ರೀತಿ ನೆರೆ ಸಂತ್ರಸ್ತರ ಅನುದಾನದಲ್ಲಿ ಕಮಿಷನ್ ಪಡೆದು ಶಾಸಕಿ ಭ್ರಷ್ಟಾಚಾರ ನಡೆಸುತಿರುವುದು ಖಂಡನೀಯ' ಎಂದರು.
'ಸರಕಾರದಿಂದ ಸಂತ್ರಸ್ತರಿಗೆ ಮೂರೂವರೆ ಕೋಟಿ ರೂ.ನಷ್ಟು ಅನುದಾನ ಬಂದಿದ್ದು, ಅದು ಜಿಲ್ಲಾ ಪಂಚಾಯತ್ ಗೆ ನೀಡಲಾಗಿದೆ. ಇನ್ನೂ ಟೆಂಡರ್ ಕರೆಯದೆ ನೆರೆ ಪ್ರವಾಹದ ಕಾಮಗಾರಿಯನ್ನು ಲ್ಯಾಂಡ್ ಆರ್ಮಿಗೆ ನೀಡಿದ್ದು, ಈ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ. ಇದರ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು. ಈ ಅನುದಾನ ಸದ್ಬಳಕೆಯಾಗದೇ ಇದ್ದರೆ ಹೋರಾಟ ನಡೆಸಬೇಕಾಗುವುದು' ಎಂದು ಎಚ್ಚರಿಸಿದರು.

'ಶಾಸಕಿ ನಿಲುವು ಸ್ಪಷ್ಟಪಡಿಸಲಿ': ಕೈಗಾ ಅಣುವಿದ್ಯುತ್ ಸ್ಥಾವರ 5 ಮತ್ತು 6ನೇ ಘಟಕ ವಿಸ್ತರಣೆ ವಿರೋಧಿಸಿ ನಡೆದ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಸ್ಥಳೀಯ ಶಾಸಕಿ ಭಾಗವಹಿಸದೇ, ಕ್ಷೇತ್ರದ ಜನರ ಬಗ್ಗೆ ನಿಷ್ಕಾಳಜಿ ತೋರಿದ್ದಾರೆ. ಕೈಗಾದ ಬಗ್ಗೆ ಕೂಡಲೇ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆನಂದ್ ಅಸ್ನೋಟಿಕರ್ ಒತ್ತಾಯಿಸಿದರು. 'ಸಂಸದ ಅನಂತಕುಮಾರ ಹೆಗೆಡೆ ಭಾಷಣ ಬಿಗಿದು, ಯುವಕರ ಕೈಯಲ್ಲಿ ಕತ್ತಿ ನೀಡುವುದ ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಜಿಲ್ಲೆಯ ಯುವಕರಿಗೆ ಉದ್ಯೋಗವಕಾವಿಲ್ಲ. ಈ ಬಗ್ಗೆ ಸಂಸದರು ಗಮನ ಹರಿಸಲಿ' ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications