ಹೆಗಡೆ ಬಗ್ಗೆ ಹೇಳಿಕೆ; ಸ್ಪಷ್ಟನೆ ಕೊಟ್ಟ ಆನಂದ್ ಅಸ್ನೋಟಿಕರ್
ಕಾರವಾರ, ಏಪ್ರಿಲ್ 07; "ನಾನು ಸಂಸದ ಅನಂತಕುಮಾರ್ ಹೆಗಡೆ ಸಾಯಲಿ ಎಂಬ ಅರ್ಥದಲ್ಲಿ ಹೇಳಿಲ್ಲ. ಕೆಲವರು ಇದನ್ನ ತಪ್ಪಾಗಿ ತಿಳಿದುಕೊಂಡಿದ್ದಾರೆ" ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳಿದರು.
ಬುಧವಾರ ಕಾರವಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಆರು ಬಾರಿ ಸಂಸದರಾಗಿ ಆಯ್ಕೆಯಾದ ಅನಂತಕುಮಾರ್ ಹೆಗಡೆ ಜಿಲ್ಲೆಯಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ಅದಕ್ಕಾಗಿ ಅವರು ಇದ್ದರೇನು, ಹೋದರೇನು ಅಂದಿದ್ದೆ. ನನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ. ಆದರೆ ಅವರು ಸಾಯಲಿ ಎಂದು ನಾನು ಬಯಸಿಲ್ಲ" ಎಂದರು.
"ನಾನು ಮೋದಿ ಅಭಿಮಾನಿ, ಸಂಸತ್ ಚುನಾವಣೆಯಲ್ಲಿ ಜೆಡಿಎಸ್ನಿಂದ ಕಣಕ್ಕೆ ಇಳಿದಾಗ ಮೋದಿ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಿರಲಿಲ್ಲ. ಅನಂತಕುಮಾರ್ ಬಾಯಿಗೆ ಬಂದಂತೆ ಮಾತನಾಡಿ ಮೋದಿಯವರಿಗೆ ಮುಜುಗರ ತಂದಿದ್ದಾರೆ" ಎಂದು ತಿಳಿಸಿದರು.

"ಈ ಹಿಂದೆ ಹಾಲಿ ವಿಧಾನಸಭಾಧ್ಯಕ್ಷ ವಿಶ್ವೇಶರ ಹೆಗಡೆ ಕಾಗೇರಿ, ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕಾರವಾರದ ಜಗದೀಶ್ ಬಿರ್ಕೋಡಿಕರ್ ಎನ್ನುವವರ ಮೇಲೂ ಅನಂತಕುಮಾರ್ ಹೆಗಡೆ ಹಲ್ಲೆ ಮಾಡಿದ್ದರು" ಎಂದರು.
"ಅನಂತಕುಮಾರ್ ಬಗ್ಗೆ ಮಾತನಾಡಿದೆ ಎಂದು ನನ್ನ ನಡತೆ ಬಗ್ಗೆ ಬಿಜೆಪಿಯ ಕೆಲವು ಮರಿ ಪುಢಾರಿಗಳು ಮಾತನಾಡುತ್ತಾರೆ. ಈ ಮೂವರು ಅನಂತಕುಮಾರ್ ನಮ್ಮ ಮೇಲೆ ಹಲ್ಲೆ ಮಾಡಿಲ್ಲವೆಂದು ದೇವರ ಬಳಿ ಬಂದು ಪ್ರಮಾಣ ಮಾಡಲಿ. ಅವಾಗ ಯಾರ ನಡತೆ ಏನು ಎಂದು ಎಲ್ಲರಿಗೂ ಗೊತ್ತಾಗಲಿದೆ" ಎಂದು ಸವಾಲು ಹಾಕಿದರು.
"ತನ್ನ ತಾಯಿಯ ಚಿಕಿತ್ಸೆಗೆ ಒಂದೈದು ನಿಮಿಷ ತಡವಾಯಿತೆಂದು ಶಿರಸಿ ಟಿಎಸ್ಎಸ್ ಆಸ್ಪತ್ರೆಯ ವೈದ್ಯರಿಗೇ ಅನಂತಕುಮಾರ್ ಹಿಗ್ಗಾಮುಗ್ಗ ಹೊಡೆದಿದ್ದರು. ಇದು ಅವರ ಸಂಸ್ಕೃತಿಯನ್ನು ತಿಳಿಸುತ್ತದೆ. ನಾನು ಯಾರಿಗೂ ಹೆದರುವ ಮನುಷ್ಯನಲ್ಲ" ಎಂದು ವಿವರಣೆ ನೀಡಿದರು.
"ಒಂದು ಕಾಲದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧವೇ ಹೋರಾಟ ಮಾಡಿದವನು ನಾನು. ನನ್ನ ಜಿಲ್ಲೆಗಾಗಿ ನಾನು ಹೋರಾಟ ಮಾಡುತ್ತೇನೆ. ನಾನು ಹಾಗೂ ನನ್ನ ಮಾನಸಿಕ ಸ್ಥಿತಿ ಸರಿಯಾಗಿಯೇ ಇದೆ" ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications