Get Updates
Get notified of breaking news, exclusive insights, and must-see stories!

ಹೆಗಡೆ ಬಗ್ಗೆ ಹೇಳಿಕೆ; ಸ್ಪಷ್ಟನೆ ಕೊಟ್ಟ ಆನಂದ್ ಅಸ್ನೋಟಿಕರ್

ಕಾರವಾರ, ಏಪ್ರಿಲ್ 07; "ನಾನು ಸಂಸದ ಅನಂತಕುಮಾರ್ ಹೆಗಡೆ ಸಾಯಲಿ ಎಂಬ ಅರ್ಥದಲ್ಲಿ ಹೇಳಿಲ್ಲ. ಕೆಲವರು ಇದನ್ನ ತಪ್ಪಾಗಿ ತಿಳಿದುಕೊಂಡಿದ್ದಾರೆ" ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳಿದರು.

ಬುಧವಾರ ಕಾರವಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಆರು ಬಾರಿ ಸಂಸದರಾಗಿ ಆಯ್ಕೆಯಾದ ಅನಂತಕುಮಾರ್ ಹೆಗಡೆ ಜಿಲ್ಲೆಯಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ಅದಕ್ಕಾಗಿ ಅವರು ಇದ್ದರೇನು, ಹೋದರೇನು ಅಂದಿದ್ದೆ. ನನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ. ಆದರೆ ಅವರು ಸಾಯಲಿ ಎಂದು ನಾನು ಬಯಸಿಲ್ಲ" ಎಂದರು.

"ನಾನು ಮೋದಿ ಅಭಿಮಾನಿ, ಸಂಸತ್ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕೆ ಇಳಿದಾಗ ಮೋದಿ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಿರಲಿಲ್ಲ. ಅನಂತಕುಮಾರ್ ಬಾಯಿಗೆ ಬಂದಂತೆ ಮಾತನಾಡಿ ಮೋದಿಯವರಿಗೆ ಮುಜುಗರ ತಂದಿದ್ದಾರೆ" ಎಂದು ತಿಳಿಸಿದರು.

Anand Asnotikar Clarification On Comment On Anant Kumar Hegde

"ಈ ಹಿಂದೆ ಹಾಲಿ ವಿಧಾನಸಭಾಧ್ಯಕ್ಷ ವಿಶ್ವೇಶರ ಹೆಗಡೆ ಕಾಗೇರಿ, ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕಾರವಾರದ ಜಗದೀಶ್ ಬಿರ್ಕೋಡಿಕರ್ ಎನ್ನುವವರ ಮೇಲೂ ಅನಂತಕುಮಾರ್ ಹೆಗಡೆ ಹಲ್ಲೆ ಮಾಡಿದ್ದರು" ಎಂದರು.

"ಅನಂತಕುಮಾರ್ ಬಗ್ಗೆ ಮಾತನಾಡಿದೆ ಎಂದು ನನ್ನ ನಡತೆ ಬಗ್ಗೆ ಬಿಜೆಪಿಯ ಕೆಲವು ಮರಿ ಪುಢಾರಿಗಳು ಮಾತನಾಡುತ್ತಾರೆ. ಈ ಮೂವರು ಅನಂತಕುಮಾರ್ ನಮ್ಮ ಮೇಲೆ ಹಲ್ಲೆ ಮಾಡಿಲ್ಲವೆಂದು ದೇವರ ಬಳಿ ಬಂದು ಪ್ರಮಾಣ ಮಾಡಲಿ. ಅವಾಗ ಯಾರ ನಡತೆ ಏನು ಎಂದು ಎಲ್ಲರಿಗೂ ಗೊತ್ತಾಗಲಿದೆ" ಎಂದು ಸವಾಲು ಹಾಕಿದರು.

"ತನ್ನ ತಾಯಿಯ ಚಿಕಿತ್ಸೆಗೆ ಒಂದೈದು ನಿಮಿಷ ತಡವಾಯಿತೆಂದು ಶಿರಸಿ ಟಿಎಸ್‌ಎಸ್ ಆಸ್ಪತ್ರೆಯ ವೈದ್ಯರಿಗೇ ಅನಂತಕುಮಾರ್ ಹಿಗ್ಗಾಮುಗ್ಗ ಹೊಡೆದಿದ್ದರು. ಇದು ಅವರ ಸಂಸ್ಕೃತಿಯನ್ನು ತಿಳಿಸುತ್ತದೆ. ನಾನು ಯಾರಿಗೂ ಹೆದರುವ ಮನುಷ್ಯನಲ್ಲ" ಎಂದು ವಿವರಣೆ ನೀಡಿದರು.

"ಒಂದು ಕಾಲದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧವೇ ಹೋರಾಟ ಮಾಡಿದವನು ನಾನು. ನನ್ನ ಜಿಲ್ಲೆಗಾಗಿ ನಾನು ಹೋರಾಟ ಮಾಡುತ್ತೇನೆ. ನಾನು ಹಾಗೂ ನನ್ನ ಮಾನಸಿಕ ಸ್ಥಿತಿ ಸರಿಯಾಗಿಯೇ ಇದೆ" ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+