ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ವಿಜಯೇಂದ್ರನನ್ನು ಮುಖ್ಯಮಂತ್ರಿ ಮಾಡೋಕೆ
ಕಾರವಾರ, ಜುಲೈ 28: "ಬಸವರಾಜ ಬೊಮ್ಮಾಯಿಯವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿರುವುದು ಭವಿಷ್ಯದಲ್ಲಿ ಬಿ.ವೈ. ವಿಜಯೇಂದ್ರರನ್ನು ಸಿಎಂ ಮಾಡುವುದಕ್ಕಾಗಿ,'' ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆನಂದ್ ಅಸ್ನೋಟಿಕರ್, "ಬಸವರಾಜ ಬೊಮ್ಮಾಯಿ ಆಯ್ಕೆಯಿಂದ ಬಿ.ಎಸ್. ಯಡಿಯೂರಪ್ಪನವರು ಹಿಡಿತ ಸಾಧಿಸಿದ್ದಾರೆ. ಸೂಪರ್ ಸಿಎಂ ಆಗಿ ಯಡಿಯೂರಪ್ಪ ಇನ್ನು ಮುಂದೆ ರಾಜ್ಯದಲ್ಲಿ ಅಧಿಕಾರ ಚಲಾಯಿಸುತ್ತಾರೆ. 2023ಕ್ಕೆ ಬಿಎಸ್ವೈ ಪುತ್ರ ವಿಜಯೇಂದ್ರನನ್ನು ಮುಖ್ಯಮಂತ್ರಿ ಮಾಡಲು ಬೊಮ್ಮಾಯಿಯನ್ನು ಈಗ ಸಿಎಂ ಮಾಡಿದ್ದಾರೆ,'' ಎಂದಿದ್ದಾರೆ.

"ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿ.ಪಿ. ಯೋಗೇಶ್ವರ್ ಕಳೆದ ಐದಾರು ತಿಂಗಳಿನಿಂದ ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದರು. ಯತ್ನಾಳ್ ಬೋನಿನಲ್ಲಿ ಇದ್ದ ಮಂಗನ ರೀತಿ ಕೂಗಾಟ ಮಾಡಿದರೂ ಏನೂ ಮಾಡಿಕೊಳ್ಳಲಾಗಲಿಲ್ಲ. ಬಿಜೆಪಿ ಶಿಸ್ತಿನ ಪಕ್ಷ ಆಗಿದ್ದರೆ ಅವರಿಬ್ಬರನ್ನು ಮಂತ್ರಿ ಮಾಡಬಾರದು,'' ಎಂದು ಅಸ್ನೋಟಿಕರ್ ತಿಳಿಸಿದರು.

"ಬಿಜೆಪಿ ಬಸವರಾಜ ಬೊಮ್ಮಾಯಿಯನ್ನು ಸಿಎಂ ಆಗಿ ಮಾಡಿರುವುದು ಒಳ್ಳೆಯ ಆಯ್ಕೆ. ಇದರಿಂದ ಬಿಜೆಪಿಗೆ ಭವಿಷ್ಯದಲ್ಲಿ ಲಾಭವಾಗಲಿದೆ. ರಾಜ್ಯಕ್ಕೆ ಒಳ್ಳೆಯ ದಿನ ಬರುತ್ತದೆ. ಈಗಿನ ಸರ್ಕಾರ ಬೆಳವಣಿಗೆ ಮುಂದೆ ಜೆಡಿಎಸ್ಗೆ ಒಳ್ಳೆಯದಾಗಲಿದ್ದು, ಮುಂದಿನ ಬಾರಿ ಸರ್ಕಾರ ರಚನೆ ವೇಳೆ ಎಚ್.ಡಿ. ಕುಮಾರಸ್ವಾಮಿ ದೊಡ್ಡ ರೋಲ್ ತೆಗೆದುಕೊಳ್ಳುತ್ತಾರೆ,'' ಎಂದಿದ್ದಾರೆ.
Recommended Video
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications