ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ವಿಜಯೇಂದ್ರನನ್ನು ಮುಖ್ಯಮಂತ್ರಿ ಮಾಡೋಕೆ
ಕಾರವಾರ, ಜುಲೈ 28: "ಬಸವರಾಜ ಬೊಮ್ಮಾಯಿಯವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿರುವುದು ಭವಿಷ್ಯದಲ್ಲಿ ಬಿ.ವೈ. ವಿಜಯೇಂದ್ರರನ್ನು ಸಿಎಂ ಮಾಡುವುದಕ್ಕಾಗಿ,'' ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆನಂದ್ ಅಸ್ನೋಟಿಕರ್, "ಬಸವರಾಜ ಬೊಮ್ಮಾಯಿ ಆಯ್ಕೆಯಿಂದ ಬಿ.ಎಸ್. ಯಡಿಯೂರಪ್ಪನವರು ಹಿಡಿತ ಸಾಧಿಸಿದ್ದಾರೆ. ಸೂಪರ್ ಸಿಎಂ ಆಗಿ ಯಡಿಯೂರಪ್ಪ ಇನ್ನು ಮುಂದೆ ರಾಜ್ಯದಲ್ಲಿ ಅಧಿಕಾರ ಚಲಾಯಿಸುತ್ತಾರೆ. 2023ಕ್ಕೆ ಬಿಎಸ್ವೈ ಪುತ್ರ ವಿಜಯೇಂದ್ರನನ್ನು ಮುಖ್ಯಮಂತ್ರಿ ಮಾಡಲು ಬೊಮ್ಮಾಯಿಯನ್ನು ಈಗ ಸಿಎಂ ಮಾಡಿದ್ದಾರೆ,'' ಎಂದಿದ್ದಾರೆ.

"ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿ.ಪಿ. ಯೋಗೇಶ್ವರ್ ಕಳೆದ ಐದಾರು ತಿಂಗಳಿನಿಂದ ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದರು. ಯತ್ನಾಳ್ ಬೋನಿನಲ್ಲಿ ಇದ್ದ ಮಂಗನ ರೀತಿ ಕೂಗಾಟ ಮಾಡಿದರೂ ಏನೂ ಮಾಡಿಕೊಳ್ಳಲಾಗಲಿಲ್ಲ. ಬಿಜೆಪಿ ಶಿಸ್ತಿನ ಪಕ್ಷ ಆಗಿದ್ದರೆ ಅವರಿಬ್ಬರನ್ನು ಮಂತ್ರಿ ಮಾಡಬಾರದು,'' ಎಂದು ಅಸ್ನೋಟಿಕರ್ ತಿಳಿಸಿದರು.

"ಬಿಜೆಪಿ ಬಸವರಾಜ ಬೊಮ್ಮಾಯಿಯನ್ನು ಸಿಎಂ ಆಗಿ ಮಾಡಿರುವುದು ಒಳ್ಳೆಯ ಆಯ್ಕೆ. ಇದರಿಂದ ಬಿಜೆಪಿಗೆ ಭವಿಷ್ಯದಲ್ಲಿ ಲಾಭವಾಗಲಿದೆ. ರಾಜ್ಯಕ್ಕೆ ಒಳ್ಳೆಯ ದಿನ ಬರುತ್ತದೆ. ಈಗಿನ ಸರ್ಕಾರ ಬೆಳವಣಿಗೆ ಮುಂದೆ ಜೆಡಿಎಸ್ಗೆ ಒಳ್ಳೆಯದಾಗಲಿದ್ದು, ಮುಂದಿನ ಬಾರಿ ಸರ್ಕಾರ ರಚನೆ ವೇಳೆ ಎಚ್.ಡಿ. ಕುಮಾರಸ್ವಾಮಿ ದೊಡ್ಡ ರೋಲ್ ತೆಗೆದುಕೊಳ್ಳುತ್ತಾರೆ,'' ಎಂದಿದ್ದಾರೆ.
Recommended Video
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications