ಅನಂತಕುಮಾರ ಹೆಗಡೆಗೆ ಸ್ವಪಕ್ಷದಲ್ಲೇ ವಿರೋಧವಿದೆ: ಆನಂದ್ ಅಸ್ನೋಟಿಕರ್
ಕಾರವಾರ, ಮಾರ್ಚ್ 17: ಗುಪ್ತಚರ ಮಾಹಿತಿಯ ಪ್ರಕಾರ, ಅನಂತಕುಮಾರ ಹೆಗಡೆಯವರು ಈವರೆಗೂ ತಮಗೆ ಮತ ಹಾಕಿ ಎಂದು ಎಲ್ಲೂ ಕೇಳಿಲ್ಲ. ಮೋದಿಯವರನ್ನ ನೋಡಿ ಮತ ಹಾಕಿ, ಅವರಿಗಾಗಿ ಮತ ಹಾಕಿ ಎಂದಿದ್ದಾರೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.
ತಮ್ಮ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಭಾನುವಾರ ಮಾತನಾಡಿದ ಅವರು, ಅನಂತಕುಮಾರ ಅಭಿವೃದ್ಧಿ ಮಾಡಲು ಬಂದಿಲ್ಲ. ಅವರು ಬಂದಿರೋದು ಕೇವಲ ರಾಜಕಾರಣ ಮಾಡೋದಿಕ್ಕೆ. ಹೀಗಾಗಿ ಅವರು ರಾಜಕೀಯವಾಗಿ ಮಾತನಾಡುತ್ತಾರೆ. ಹಿಂದೂ ಧರ್ಮವನ್ನೂ ಇಬ್ಭಾಗ ಮಾಡಲಿಕ್ಕೆ ಬಂದಿದ್ದಾರೆ. ಮತಕ್ಕಾಗಿ ಧರ್ಮ ಅಷ್ಟೇ ಅಲ್ಲ, ಜಾತಿಯನ್ನೂ ಒಡೆಯುತ್ತಿದ್ದಾರೆ ಎಂದು ದೂರಿದರು.
ಕಿತ್ತೂರು, ಖಾನಾಪುರ ಅಂದರೆ ಅನಂತಕುಮಾರ ಆಸ್ತಿ ಎಂಬ ಮನೋಭಾವ ನಮ್ಮ ಜನರಲ್ಲಿದೆ. ನನಗೆ ಜೆಡಿಎಸ್ ನಿಂದ ಟಿಕೆಟ್ ಸಿಕ್ಕರೆ, ಅಲ್ಲೇ ಒಂದು ಲಕ್ಷಕ್ಕಿಂತ ಹೆಚ್ಚು ಲೀಡ್ ನಲ್ಲಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಂತಕುಮಾರ ಹೆಗಡೆಗೆ ಸ್ವಪಕ್ಷದಲ್ಲೇ ವಿರೋಧವಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ನಮ್ಮ ನಾಯಕರು. ಅವರ ನೇತೃತ್ವದಲ್ಲಿ ಈ ಬಾರಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಮತ ಹಾಕುವಾಗ ಯೋಚನೆ ಮಾಡ್ಬೇಕು
ಅನಂತಕುಮಾರದ್ದು ನಾಲಿಗೆ ಚುನಾವಣೆ. ತಂದೆನೇ ಅವರ ಮೇಲೆ ವಿಶ್ವಾಸ ಇಡಲ್ಲ ಅಂದಮೇಲೆ, ಜನರು ಅವರಿಗೆ ಮತ ಹಾಕುವಾಗ ಯೋಚನೆ ಮಾಡ್ಬೇಕು. ಅವರು ನಮ್ಮ ಭಾವನೆಗಳ ಜೊತೆ ಆಟ ಆಡುತ್ತಿದ್ದಾರೆ. ಅತೃಪ್ತ ಬಿಜೆಪಿಗರೇ ಈ ಬಾರಿ ನಮ್ಮ ಶಕ್ತಿ ಎಂದು ಆನಂದ್ ಅಸ್ನೋಟಿಕರ್ ತಿಳಿಸಿದರು.

ದೇಶವನ್ನು ಇಬ್ಭಾಗ ಮಾಡುತ್ತಾರೆ
ಪರೇಶ್ ಮೇಸ್ತನ ತಂದೆಯನ್ನು ಕೇಳಿ. ಯಾವ ದೇವಸ್ಥಾನದಲ್ಲಿಯಾದರೂ ಪ್ರಮಾಣ ಮಾಡಿಸಿ ಕೇಳಿ. ಅವರ ಮಗನ ಸಾವನ್ನು ರಾಜಕೀಯವಾಗಿ ಅನಂತಕುಮಾರ ಬಳಸಿಕೊಂಡಿದ್ದಾರೆ ಎಂದ ಆನಂದ್ ಅಸ್ನೋಟಿಕರ್, ನರೇಂದ್ರ ಮೋದಿ ಒಬ್ಬರ ಬಗ್ಗೆಯೂ ಈವರೆಗೆ ಕೆಳ ಮಟ್ಟದಲ್ಲಿ ಮಾತನಾಡಿಲ್ಲ. ನನ್ನ ದೇಶದ ಜನ ಅಂತ ಪ್ರತಿ ಭಾಷಣ ಆರಂಭಿಸುತ್ತಾರೆ. ಆದರೆ, ಅನಂತಕುಮಾರ ದೇಶವನ್ನು ಇಬ್ಭಾಗ ಮಾಡುತ್ತಾರೆ ಎಂದು ಆರೋಪಿಸಿದರು.

ಮೋದಿ ಹೆಸರಲ್ಲಿ ಮತ ಕೇಳಿ ಗೆಲುವು
ಅನಂತಕುಮಾರ ಹೆಗಡೆ, ಈದ್ಗಾ ಮೈದಾನದಲ್ಲಿ ಬಾವುಟ ಹಾರಿಸಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ಇನ್ನೊಂದು ಸಾರಿ ವಾಜಪೇಯಿ ಅವರಿಂದ ಆಯ್ಕೆ ಆದರು. ಮೂರನೇ ಬಾರಿ ಮೋದಿ ಹೆಸರಲ್ಲಿ ಮತ ಕೇಳಿ ಗೆಲುವು ಕಂಡರು ವಿನಾ ತಮ್ಮ ಸಾಧನೆಗಳಿಂದ ಅಲ್ಲ ಎಂದು ಆನಂದ್ ಅಸ್ನೋಟಿಕರ್ ವಾಗ್ದಾಳಿ ಮಾಡಿದರು.

ಯುವಕರ ಕೈಗೆ ಕತ್ತಿ ಕೊಡುತ್ತಿದ್ದಾರೆ
ಮಾತೆತ್ತಿದರೆ ಹಿಂದುತ್ವ ಎಂದು ಬೊಬ್ಬಿರಿಯುವ ಅನಂತಕುಮಾರ್, ಹಿಂದೂ ಮಕ್ಕಳಿಗಾಗಿ ಏನು ಮಾಡಿದ್ದಾರೆ. ಅವರೀಗ ಕೌಶಲ್ಯ ಅಭಿವೃದ್ಧಿ ಸಚಿವರಾಗಿದ್ದಾರೆ. ಆದರೆ, ಕೌಶಲ್ಯ ಅಂದ್ರೆ ಏನು ಎಂದು ಗೊತ್ತಿದೆಯಾ? ಧರ್ಮ, ಜಾತಿಯ ಆಧಾರದ ಮೇಲೆ ನಮ್ಮ ಯುವಕರ ಕೈಗೆ ಕತ್ತಿ ಕೊಡುತ್ತಿದ್ದಾರೆ. ಹಿಂದುಳಿದ ವರ್ಗದ ಯುವಕರನ್ನು ಕೆಟ್ಟ ಮಾರ್ಗಕ್ಕೆ ಕೊಂಡೊಯ್ಯುತ್ತಿದ್ದಾರೆ. ಜಿಲ್ಲೆಯ ಮತದಾರರು ರಾಷ್ಟ್ರದಲ್ಲಿ ನೋಡ್ಬೇಡಿ. ಸ್ಥಳೀಯವಾಗಿ ನೋಡಿ ಮತ ಹಾಕಿ ಎಂದು ಆನಂದ್ ಅಸ್ನೋಟಿಕರ್ ಮನವಿ ಮಾಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications