ಕಾರವಾರ: ಅಂಗನವಾಡಿ ಕೇಂದ್ರ ಕಟ್ಟಡದ ಸಿಮೆಂಟ್ ಕುಸಿತ; ಅಧೃಷ್ಟಕ್ಕೆ ತಪ್ಪಿದ ಪ್ರಾಣಾಪಾಯ
ಕಾರವಾರ, ಜೂ. 15: ಇದ್ದಕ್ಕಿದ್ದಂತೆ ಅಂಗನವಾಡಿ ಗೋಡೆಯ ಸಿಮೆಂಟ್ ಪ್ಲಾಸ್ಟರ್ ಕುಸಿತಗೊಂಡು ಕೂದಲೆಳೆ ಅಂತರದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಪಾರಾಗಿರುವ ಘಟನೆ ಹೊನ್ನಾವರ ತಾಲ್ಲೂಕಿನ ಚಂದಾವರ ಗ್ರಾ.ಪಂ. ವ್ಯಾಪ್ತಿಯ ಕಡ್ನೀರಿನಲ್ಲಿ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹೊರತಾಗಿ ಕಾರ್ಯಕರ್ತೆ ಹಾಗೂ ಸಹಾಯಕಿ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು. ಈ ವೇಳೆ ಗೋಡೆ ಮಧ್ಯಭಾಗದಲ್ಲಿ ಸದ್ದು ಕೇಳಿಸಿದ್ದು, ಕ್ಷಣಾರ್ಧದಲ್ಲಿ ಸಿಮೆಂಟ್ ಪ್ಲಾಸ್ಟರಿನ ದೊಡ್ಡ ಭಾಗವೇ ನೆಲಕ್ಕಪ್ಪಳಿಸಿದೆ. ಪ್ಲಾಸ್ಟರ್ ಬಿದ್ದ ಹೊಡೆತಕ್ಕೆ ಕಾರ್ಯಕರ್ತೆ, ಸಹಾಯಕಿ ಹಾಗೂ ಅಂಗನವಾಡಿ ಕೇಂದ್ರಕ್ಕೆ ಬಂದಿದ್ದ ಆಶಾ ಕಾರ್ಯಕರ್ತೆ ಕಿರುಚಾಡಿಕೊಂಡು ಓಡಿದ್ದಾರೆ. ಕೂಡಲೇ ಪಕ್ಕದ ಶಾಲೆಯ ಶಿಕ್ಷಕರು, ಊರಿನ ಕೆಲವರು ಬಂದು ನೋಡುತ್ತಿದ್ದಂತೆ ಗೋಡೆ ಕುಸಿದು ಬಿದ್ದಿರುವುದು ತಿಳಿದಿದೆ.

ನಾಲ್ಕು ಗೋಡೆಗಳು ಬಿರುಕು
ಕಳೆದ ನಾಲ್ಕು ವರ್ಷಗಳಿಂದ ಕಡ್ನೀರು ಅಂಗನವಾಡಿ ಕಟ್ಟಡದ ನಾಲ್ಕು ಗೋಡೆಗಳು ಬಿರುಕು ಬಿಟ್ಟಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿರುವುದು ಸಾಬೀತಾಗಿದೆ. ಅಂಗನವಾಡಿ ಶಿಥಿಲವಾದ ಬಗ್ಗೆ ಸ್ಥಳೀಯ ಶಾಸಕರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದು ಪಾಲಕರ ಆರೋಪವಾಗಿದೆ.

ರಂಗಮಂದಿರದಲ್ಲಿ ಪಾಠ
ಇನ್ನು ಗೋಡೆ ಭಯಾನಕ ರೀತಿಯಲ್ಲಿ ಬಿರುಕು ಬಿಟ್ಟಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ನಾಲ್ಕು ವರ್ಷಗಳಿಂದ ಅಂಗನವಾಡಿಗೆ ಬರುವ ಪುಟಾಣಿಗಳಿಗೆ ರಂಗಮಂದಿರಲ್ಲಿ ಪಾಠ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರದಲ್ಲಿ 24 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಅಂಗನವಾಡಿ ಕಾರ್ಯಕರ್ತೆ ಚಂದ್ರಕಲಾ ನಾಯ್ಕ ಅಂಗನವಾಡಿ ಸ್ಥಿತಿಗತಿಗಳ ಬಗ್ಗೆ ಪಾಲಕರ ಸಭೆ ನಡೆಸಿ ಸಾಕಷ್ಟು ಬಾರಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿದ್ದು, ಈವರೆಗೂ ಯಾವುದೇ ಬೆಳವಣಿಗೆ ಕಂಡಿರಲಿಲ್ಲ. ಆದರೆ ಇದೀಗ ಅನಾಹುತ ನಡೆದಿದ್ದು ಅದೃಷ್ಟವಸಾತ್ ಪಾರಾಗಿದ್ದಾರೆ.

ಒಟ್ಟಾರೆ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸುವಷ್ಟರಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಮುಂದಾಗಬೇಕಿದೆ.
Recommended Video
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications