ಅಂಕೋಲಾ: ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್ನಿಂದ 12 ಮೀನುಗಾರರ ರಕ್ಷಣೆ
ಕಾರವಾರ, ಮೇ, 23: ಗಾಳಿಯ ಅಬ್ಬರಕ್ಕೆ ಮುಳುಗುತ್ತಿದ್ದ ಬೋಟ್ನಿಂದ 12 ಮೀನುಗಾರರನ್ನು ಇನ್ನೊಂದು ಬೋಟ್ ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಬೆಳಾಂಬರ ಬಳಿ ಸಮುದ್ರಲ್ಲಿ ಮಂಗಳವಾರ ನಡೆದಿದೆ.
ಅಂಕೋಲಾ ತಾಲೂಕಿನ ಚಂದ್ರಾವತಿ ಸುಭಾಸ್ ಖಾರ್ವಿ ಎಂಬುವವರಿಗೆ ಸೇರಿದ ಪರ್ಸಿಯನ್ ಬೋಟ್ ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿತ್ತು. ಆದರೆ ಬೋಟ್ ಮೀನುಗಾರಿಕೆಗೆ ತೆರಳಿದ ಬಳಿಕ ಗಾಳಿ, ಮಳೆ ಆರ್ಭಟ ಜೋರಾಗಿ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಅಲೆಗಳ ಹೊಡೆತಕ್ಕೆ ಬೋಟ್ನ ತಳಭಾಗದ ಫೈಬರ್ಗೆ ಹಾನಿಯಾಗಿ ಬೋಟ್ನೊಳಗೆ ನೀರು ನುಗ್ಗಲಾರಂಭಿಸಿತ್ತು. ತಕ್ಷಣ ಮೀನುಗಾರರು ಸಮೀಪದಲ್ಲಿದ್ದ ಜೈಶ್ರೀರಾಮ್ ಹೆಸರಿನ ಬೋಟ್ಗೆ ಮಾಹಿತಿ ರವಾನಿಸಿದ್ದು, ಆ ಬೋಟ್ನಲ್ಲಿದ್ದ ಮೀನುಗಾರರು ಅಪಾಯದಲ್ಲಿ 12 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

ಬೋಟ್ನಲ್ಲಿ ನೀರು ತುಂಬಿಕೊಂಡ ಕಾರಣ ಮೀನು ಬಲೆ, ಎಂಜಿನ್ ಸೇರಿದಂತೆ ಒಂದು ಕೋಟಿಗೂ ಹೆಚ್ಚು ಹಾನಿಯಾಗಿದೆ ಎಂದು ಮೀನುಗಾರರು ಮಾಹಿತಿ ನೀಡಿದ್ದಾರೆ. ಬಳಿಕ ನೀರಿನಲ್ಲು ಮುಳುಗುತ್ತಿದ್ದ ಬೋಟ್ ಅನ್ನು ಇನ್ನೊಂದು ಬೋಟ್ ಸಹಾಯದಿಂದ ಎಳೆದು ತರಲಾಗಿದೆ.
ಹೊನ್ನಾವರದಲ್ಲಿ ಗ್ಯಾಸ್ ಟ್ಯಾಂಕರ್ ಫಲ್ಟಿ
ಮತ್ತೊಂದೆಡೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಘಟನೆ ಹೊನ್ನಾವರ ಪಟ್ಟಣದ ಶರಾವತಿ ಸರ್ಕಲ್ ಬಳಿ ನಡೆದಿದೆ.
ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಎದುರಿಗೆ ಬಂದ ಬೈಕ್ ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಅಲ್ಲದೆ ಅನಿಲ ತುಂಬಿದ್ದ ಕಾರಣ ಫಲ್ಟಿಯಾದಾಗ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗತೊಡಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸದ್ಯ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಹಾಗೂ ಪೊಲೀಸರು ಆಗಮಿಸಿ ಮುನ್ನೆಚ್ಚರಿಕೆ ವಹಿಸಿದ್ದಾರೆ. ಸುತ್ತಮುತ್ತಲಿನ ಮನೆಗಳಿಗೆ ಬೆಂಕಿ ಉರಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಅನಿಲ ಸೋರಿಕೆ ತಡೆಗಟ್ಟಲು ಪ್ರಯತ್ನಿಸಲಾಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಇನ್ನು ಈ ಘಟನೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗುವಂತೆ ಆಗಿದೆ.
ಅನುಮಾನಸ್ಪದವಾಗಿ ಸಾವನ್ನಪ್ಪಿದ ಜಿಂಕೆ
ಇನ್ನು ನೀರು ಅರಸಿ ಬಂದ ಜಿಂಕೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮುಂಡಗೋಡದ ಸನವಳ್ಳಿ ಜಲಾಶಯದ ಬಳಿ ನಡೆದಿದೆ. ಬೀರು ಬೇಸಿಗೆಯಿಂದಾಗಿ ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಅದರಲ್ಲಿಯೂ ಕಾಡು ಪ್ರಾಣಿಗಳಿಗೆ ಇದ್ದ ಜಲಮೂಲಗಳು ಭತ್ತಿದ ಕಾರಣ ನೀರು ಅರಸಿ ನಾಡಿನ ಕಡೆ ಹೆಜ್ಜೆ ಹಾಕುವಂತಾಗಿದೆ.
ಇದೇ ರಿತಿ ಮುಂಡಗೋಡದ ಸನವಳ್ಳಿ ಜಲಾಶಯಕ್ಕೆ ಆಗಮಿಸಿದ ಜಿಂಕೆಯೊಂದು ಕೆಲ ದಿನಗಳ ಹಿಂದೆ ಮೃತಪಟ್ಟಿದೆ. ಜಿಂಕೆ ಹೂಳಿನಲ್ಲಿ ಸಿಲುಕಿ ಸಾವನ್ನಪ್ಪಿದೆಯೋ ಅಥವಾ ಇನ್ನಾವುದೇ ಕಾರಣದಿಂದ ಸಾವನ್ನಪ್ಪಿದೆಯೋ ಇನ್ನು ಗೊತ್ತಾಗಬೇಕಿದೆ.
ಆದರೆ ಮೃತದೇಹ ಕಂಡ ಸ್ಥಳೀಯರಾದ ರಾಜು ಗುಬ್ಬಕ್ಕನವರ ಜಿಂಕೆ ಮೃತಪಟ್ಟಿರುವ ಬಗ್ಗೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಜಿಂಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಅರಣ್ಯ ರಕ್ಷಕ ರಾಜು, ಸಿಬ್ಬಂದಿಗಳಾದ ಕೃಷ್ಣಾ ದೊಡ್ಡಮನಿ, ಫಕೀರಪ್ಪ ಬಾಳೆಗಡ್ಡಿ ಮಠ ಸೇರಿದಂತೆ ಮತ್ತತರು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications