ಅಂಡಮಾನ್-ನಿಕೋಬಾರ್ನಲ್ಲಿ ಅಂಕೋಲಾ ಮೂಲದ ನೌಕಾಸೇನಾ ಸಿಬ್ಬಂದಿ ಸಾವು
ಕಾರವಾರ, ಜನವರಿ, 04: ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿ ನೌಕಾಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕೋಲಾ ತಾಲೂಕಿನ ಲಕ್ಷ್ಮೀಶ್ವರ ಮೂಲದ ನೌಕಾಸೇನಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಅಂಕೋಲಾದ ನೌಕಾಸೇನಾ ಸಿಬ್ಬಂದಿ ಸಾವು
ನೌಕಾಸೇನಾ ಸಿಬ್ಬಂದಿ ನಾಗರಾಜ ಮುಕುಂದ ಕಳಸ (33) ಎನ್ನುವವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಕಳೆದ 4 ದಿನಗಳ ಹಿಂದೆ ಆಕಸ್ಮಿಕ ದುರಂತದಲ್ಲಿ ನಾಗರಾಜ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಾಗರಜ ಅವರ ಪಾರ್ಥಿವ ಶರೀರವನ್ನು ಗುರುವಾರ (ಜನವರಿ 5) ಹುಟ್ಟೂರಿಗೆ ತರಲಾಗುತ್ತಿದೆ.
ಅಧಿಕಾರಿಗಳ ಮಲತಾಯಿ ಧೋರಣೆ ಆರೋಪ: ಸಾಂಪ್ರದಾಯಿಕ ಮೀನುಗಾರಿಕೆಗೆ ಹೊಡೆತ
ಭುವನೇಶ್ವರದಲ್ಲಿರುವ ಐಎನ್ಎಸ್ ಚಿಲಕ ನೌಕಾದಳ ತರಬೇತಿ ಕೇಂದ್ರದಲ್ಲಿ 2010ರಲ್ಲಿ ತರಬೇತಿಯನ್ನು ಪಡೆದು, ಕಾರವಾರದ ಕದಂಬ ನೌಕಾನೆಲೆಯಲ್ಲಿ ಭಾರತೀಯ ನೌಕಾಸೇನೆಗೆ ಸೇರ್ಪಡೆ ಆಗಿದ್ದರು. ಬಳಿಕ ಮುಂಬೈನಲ್ಲಿ ಸೇವೆ ಸಲ್ಲಿಸಿ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಿದ್ದರು. ಸೇವಾ ನಿವೃತ್ತಿಗೆ ಎರಡು ವರ್ಷ ಬಾಕಿ ಇರುವಾಗಲೇ ದುರ್ದೈವವಶಾತ್ ಅಸುನೀಗಿದ್ದಾರೆ.

ಪಾರ್ಥಿವ ಶರೀರವನ್ನು ಗುರುವಾರ ಬೆಳಗಿನ ಜಾವ ಅಂಕೋಲಾಕ್ಕೆ ತಲುಪಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀಶ್ವರದ ಮೂಲ ಮನೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 2 ಗಂಟೆಗಳ ಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದರ. ಬಳಿಕ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications