ಅಂಡಮಾನ್-ನಿಕೋಬಾರ್‌ನಲ್ಲಿ ಅಂಕೋಲಾ ಮೂಲದ ನೌಕಾಸೇನಾ ಸಿಬ್ಬಂದಿ ಸಾವು

ಕಾರವಾರ, ಜನವರಿ, 04: ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿ ನೌಕಾಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕೋಲಾ ತಾಲೂಕಿನ ಲಕ್ಷ್ಮೀಶ್ವರ ಮೂಲದ ನೌಕಾಸೇನಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

ಅಂಕೋಲಾದ ನೌಕಾಸೇನಾ ಸಿಬ್ಬಂದಿ ಸಾವು

ನೌಕಾಸೇನಾ ಸಿಬ್ಬಂದಿ ನಾಗರಾಜ ಮುಕುಂದ ಕಳಸ (33) ಎನ್ನುವವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಕಳೆದ 4 ದಿನಗಳ ಹಿಂದೆ ಆಕಸ್ಮಿಕ ದುರಂತದಲ್ಲಿ ನಾಗರಾಜ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಾಗರಜ ಅವರ ಪಾರ್ಥಿವ ಶರೀರವನ್ನು ಗುರುವಾರ (ಜನವರಿ 5) ಹುಟ್ಟೂರಿಗೆ ತರಲಾಗುತ್ತಿದೆ.

ಅಧಿಕಾರಿಗಳ ಮಲತಾಯಿ ಧೋರಣೆ ಆರೋಪ: ಸಾಂಪ್ರದಾಯಿಕ ಮೀನುಗಾರಿಕೆಗೆ ಹೊಡೆತ
ಭುವನೇಶ್ವರದಲ್ಲಿರುವ ಐಎನ್ಎಸ್ ಚಿಲಕ ನೌಕಾದಳ ತರಬೇತಿ ಕೇಂದ್ರದಲ್ಲಿ 2010ರಲ್ಲಿ ತರಬೇತಿಯನ್ನು ಪಡೆದು, ಕಾರವಾರದ ಕದಂಬ ನೌಕಾನೆಲೆಯಲ್ಲಿ ಭಾರತೀಯ ನೌಕಾಸೇನೆಗೆ ಸೇರ್ಪಡೆ ಆಗಿದ್ದರು. ಬಳಿಕ ಮುಂಬೈನಲ್ಲಿ ಸೇವೆ ಸಲ್ಲಿಸಿ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಿದ್ದರು. ಸೇವಾ ನಿವೃತ್ತಿಗೆ ಎರಡು ವರ್ಷ ಬಾಕಿ ಇರುವಾಗಲೇ ದುರ್ದೈವವಶಾತ್ ಅಸುನೀಗಿದ್ದಾರೆ.

Ankola based naval personnel death in andaman and nicobar

ಪಾರ್ಥಿವ ಶರೀರವನ್ನು ಗುರುವಾರ ಬೆಳಗಿನ ಜಾವ ಅಂಕೋಲಾಕ್ಕೆ ತಲುಪಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀಶ್ವರದ ಮೂಲ ಮನೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 2 ಗಂಟೆಗಳ ಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದರ. ಬಳಿಕ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+