ಭೂಕುಸಿತ: ಅಂಕೋಲಾ ಬಳಿಯ ಗಂಗಾವಳಿ ನದಿ ಬಳಿ ನಿಷೇಧಾಜ್ಞೆ ಜಾರಿ
ಉತ್ತರ ಕನ್ನಡ, ಜುಲೈ. 17: ಅಂಕೋಲಾ ಭೂಕುಸಿತ ಪ್ರಕರಣದಿಮದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಇದೇ ವೇಳೆ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ತೇಲುತ್ತಿರುವುದರಿಂದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಕೊಡ್ಲಣಿ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66 (NH-66) ಪಕ್ಕದ ಗುಡ್ಡ ಕುಸಿದಿದೆ. ಗುಡ್ಡದ ಬಳಿಯ ಹೋಟೆಲ್ ಹಾಗೂ ಮನೆಯ ಸದಸ್ಯರು ಹಾಗೂ ಜಿಲ್ಲೆಯೇ ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ ಅಡುಗೆ ಅನೀಲ ಟ್ಯಾಂಕರ ಕೂಡ ಭೂಕುಸಿತದಿಂದ ಉಂಟಾದ ರಭಸಕ್ಕೆ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ಬಿದ್ದಿದೆ.

ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗಬಹುದಾದ ಸಾಧ್ಯತೆ ಇರುವುದರಿಂದ ಅದನ್ನು ತಡೆಗಟ್ಟುವ ಬಗ್ಗೆ NDRF, Navy ಹಾಗೂ ಆಗ್ನಿಶಾಮಕ ತಂಡಗಳು ಜಂಟಿಯಾಗಿ NHAI, IRB ಜೊತೆಗುಡಿ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗದಂತೆ ಅನಿಲ ಸೋರಿಕೆಯಾದಲ್ಲಿ ಸಂಭವಿಸಬಹುದಾದ ದುರ್ಘಟನೆಯನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಕ್ರಮಗೊಳ್ಳುತ್ತಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಸದರಿ ಪ್ರದೇಶದಲ್ಲಿ ಸಾರ್ವಜನಿಕರ ಚಲನ ವಲನಗಳನ್ನು ನಿರ್ಬಂಧಿಸುವುದು ಸೂಕ್ತ ಎಂದು ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಪರಿಶೀಲನೆ ವೇಳೆಯಲ್ಲಿ ಕಂಡುಬಂದಿರುವುದರಿಂದ ಅಂಕೋಲಾ ತಾಲೂಕಿನ ಸಗಡಗೇರಿ ಗ್ರಾಮದ ಲಗ್ನ ಗಂಗಾವಳಿ ನದಿಯಲ್ಲಿ ಟ್ಯಾಂಕರ ತೇಲುತ್ತಿರುವುದರಿಂದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಬಿ)(ಸಿ) ರನ್ವಯ ಅಧಿಕಾರದ ಮೇರೆಗೆ ನಿಷೇದಾಜ್ಞೆ ಜಾರಿಗೊಳಿಸುವುದು ಸೂಕ್ತವೆಂದು ಮನಗಂಡು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಲಕ್ಷ್ಮೀಪ್ರಿಯಾ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಗಂಗಾವಳಿ ನದಿ ಪಾತ್ರದ ಸುತ್ತಮುತ್ತಲಿನ ಕಿ.ಮೀ ವ್ಯಾಪ್ತಿಯ ಸಾರ್ವಜನಿಕರು ಟ್ಯಾಂಕರ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡುವುದನ್ನು ಅಥವಾ ಇನ್ನಾವುದೇ ವಾಹನ ಬಳಸಿ ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದಾರೆ.
Government Officials, NDRF, Navy Bharath Petroleum, Hindustan Petroleum, Coast Guard ab ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆಯು ಕಾರ್ಯಾಚರಣೆ ಮುಕ್ತಾಯಗೊಳ್ಳುವವರೆಗೆ ಚಾಲ್ತಿಯಲ್ಲಿರುತ್ತದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications