ಆಶ್ರಯ ಯೋಜನೆ ಫಲಾನುಭವಿ ಆಯ್ಕೆ; ದೇಶಪಾಂಡೆ ವಿರುದ್ಧ ಪ್ರತಿಭಟನೆ
ಉತ್ತರ ಕನ್ನಡ, ಫೆಬ್ರವರಿ 09; ಚೀಟಿ ಎತ್ತುವುದರ ಮೂಲಕ ನೆಡೆದ ಆಶ್ರಯ ನಿವೇಶನ ಫಲಾನುಭವಿಗಳ ಆಯ್ಕೆ ಗೊಂದಲಕ್ಕೆ ಕಾರಣವಾಯಿತು. ಅರ್ಜಿದಾರರ ಅಸಹನೆ ಮತ್ತು ಬಿಜೆಪಿಯ ವಿರೋಧದ ಕಾರಣಗಳಿಂದಾಗಿ ಹಳಿಯಾಳ ಕಾಂಗ್ರೆಸ್ ಶಾಸಕ ಆರ್. ವಿ. ದೇಶಪಾಂಡೆ ದಿಡೀರ್ ಪ್ರತಿಭಟನೆ ಎದುರಿಸುವಂತಾಯಿತು.
ಹಳಿಯಾಳ ಪುರಸಭೆಯ ಆವರಣದಲ್ಲಿ ಸೋಮವಾರ ಆಶ್ರಯ ನಿವೇಶನಗಳ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆಯ್ಕೆ ಪ್ರಕ್ರಿಯೆಯಲ್ಲಿ ಗಣನೆಗೆ ಬಾರದ ಮತ್ತು ತಿರಸ್ಕೃತಗೊಂಡವರ ವಿರುದ್ಧ, ಮತ್ತೊಂದು ಕಡೆ ಬಿಜೆಪಿಗರ ಲೆಕ್ಕಾಚಾರದ ವಿರೋಧಗಳಿಂದಾಗಿ ಪುರಸಭೆಯ ಎದುರು ಗೊಂದಲದ ವಾತಾವರಣ ನಿರ್ಮಾಣಗೊಂಡಿತು.
ಶಾಸಕ ಆರ್. ವಿ. ದೇಶಪಾಂಡೆ ತಮ್ಮ ರಾಜಕೀಯ ಬದುಕಿನಲ್ಲಿ ಯಾವತ್ತೂ ಬಹುಶಃ ಇಂತಹ ಪ್ರತಿಕೂಲ ಸ್ಥಿತಿಯನ್ನು ಎದುರಿಸಿರಲಿಕ್ಕಿಲ್ಲ ಎಂಬಂತಹ ಸ್ಥಿತಿ ಅಲ್ಲಿ ನಿರ್ಮಾಣವಾಗಿತ್ತು. ಪುರಸಭೆಯ ಮುಂದೆ ದೇಶಪಾಂಡೆಯವರ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕೊನೆಗೆ ಅವರ ನಿವಾಸದ ಎದುರೂ ಘೋಷಣೆ ಕೂಗಿ ಅಸಹನೆ ಹೊರ ಹಾಕಿದರು.
ಬಿಜೆಪಿ ಕಾರ್ಯಕರ್ತರ ಜೊತೆಗೆ ಅರ್ಜಿ ತಿರಸ್ಕೃತಗೊಂಡಿದ್ದ ಬಹುತೇಕರೂ ಧ್ವನಿಗೂಡಿಸಿದ್ದರಿಂದ ಭಾರಿ ವಿರೋಧವೇ ಎದುರಾಯಿತು. ಈ ಘಟನೆಯಿಂದ ಶಾಸಕ ಆರ್. ವಿ. ದೇಶಪಾಂಡೆಯವರು ಸ್ವಲ್ಪ ಹೊತ್ತು ಗಲಿಬಿಲಿಗೊಂಡಂತೆ ಕಂಡು ಬಂದಿತು.

ಘಟನೆಯ ವಿವರಗಳು
ಹಳಿಯಾಳದ ಆಶ್ರಯ ನಗರ ಗುಡ್ನಾಪುರ ಕಾಲೋನಿಯ ವ್ಯಾಪ್ತಿಯಲ್ಲಿರುವ ಕೈಗಾರಿಕಾ ವಸಾಹತು ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ 1.9 ಎಕರೆ ಜಾಗವನ್ನು ಆಶ್ರಯ ಯೋಜನೆಗಾಗಿಯೇ ಮಂಜೂರು ಮಾಡಲಾಗಿತ್ತು. ಜಾಗದಲ್ಲಿದ್ದ ಸುಮಾರು 37 ನಿವೇಶನಗಳಿಗಾಗಿ ಸಾವಿರಾರು ಆಸಕ್ತರು ಅರ್ಜಿ ಹಾಕಿದ್ದರು.

ಚೀಟಿ ಮೂಲಕ ಆಯ್ಕೆ
37 ನಿವೇಶನಗಳಲ್ಲಿ 6 ಕಾರ್ನರ್ ಸೈಟ್ ಗಳನ್ನು ಪುರಸಭೆ ವಾಣಿಜ್ಯ ಉದ್ದೇಶಗಳಿಗಾಗಿ ಮೀಸಲಿರಿಸಲು ನಿರ್ಧರಿಸಲಾಗಿತ್ತು. ಮೊದಲ ಹಂತದಲ್ಲಿ ಕೇವಲ 28 ಅದೃಷ್ಟವಂತ ಫಲಾನುಭವಿಗಳನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ಚೀಟಿ ಎತ್ತಿದಾಗ 23 ಜನ ಮಾತ್ರ ಅರ್ಹ ಹಾಗೂ ಅದೃಷ್ಟವಂತ ಫಲಾನುಭವಿಗಳು ಆಯ್ಕೆಯಾದರು.

ಬಿಜೆಪಿ ವಿರೋಧ ಏಕೆ
ಚೀಟಿ ಎತ್ತಿದಾಗ ನಿವೇಶನ ಕೈತಪ್ಪಿದ ಜನರು ಅಸಮಾಧಾನಗೊಂಡರು. ಮತ್ತೊಂದು ಕಡೆ ಬಿಜೆಪಿ ಪ್ರಸ್ತುತ ನೀಡಲಾಗುತ್ತಿರುವ ನಿವೇಶನಗಳ ಜಾಗದ ಒಂದು ಕಡೆ ಸಬ್ ಜೈಲಿಗೂ, ಮತ್ತೊಂದು ಕಡೆ ಕೆಎಸ್ಆರ್ಟಿಸಿ ಡಿಪೋಗೂ ಹೊಂದಿಕೊಂಡಂತೆಯೇ ಇದೇ. ಮುಂಬರುವ ದಿನಗಳಲ್ಲಿ ಪುರಸಭೆ ಜಾಗವನ್ನು ಪ್ರಮುಖ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳಬಹುದು. ಆದ್ದರಿಂದ, ಆ ಜಾಗವನ್ನು ಆಶ್ರಯ ನಿವೇಶನಗಳಿಗೆ ಒದಗಿಸಬಾರದು ಎಂದು ಬಿಜೆಪಿ ಆಗ್ರಹಿಸಿತು.

ಪ್ರತಿಭಟನೆ ಆರಂಭ
ಹಳಿಯಾಳ ತಾಲೂಕಾ ಬಿಜೆಪಿ ಘಟಕ ಈ ಜಾಗದ ಕುರಿತು ಪುರಸಭೆಗೂ ಮನವಿ ಸಲ್ಲಿಸಿತ್ತು. ಸದರಿ ಜಾಗವನ್ನು ಆಶ್ರಯ ನಿವೇಶನಗಳ ಹಂಚಿಕೆಗಾಗಿಯೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಖರೀದಿಸಲಾಗಿದೆ. ವಾಣಿಜ್ಯ ಉದ್ದೇಶವೂ ಸೇರಿದಂತೆ, ಬೇರೆ ಯಾವುದೇ ಕಾರಣಕ್ಕೆ ಬಳಕೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಹಾಗೇನಾದರು ಮಾಡಿದರೆ, ಸರಕಾರ ಸದರಿ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ ಎಂಬುದು ಕಾಂಗ್ರೆಸ್ ವಾದವಾಗಿದೆ. ಇದರಿಂದಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆದಿತ್ತು, ಇದರ ಜೊತೆಗೆ ಆಕಾಂಕ್ಷಿಗಳ ಅಸಮಾಧಾನವೂ ಸೇರಿತು.
Recommended Video

ಶಾಸಕರು ಹೇಳುವುದೇನು
ಘಟನೆ ಕುರಿತು ಶಾಸಕ ಆರ್. ವಿ. ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ. "ಕ್ಷೇತ್ರದ ನನ್ನ ರಾಜಕೀಯ ಜೀವನದಲ್ಲಿ ನಾನು ಅದೆಷ್ಟೋ ಬಾರಿ ಸಾವಿರಾರು ಕೋಟಿಗಳ ಅನುದಾನ ತಂದಿದ್ದೇನೆ. ಅದೆಷ್ಟೋ ಬಾರಿ ಸುರಿಲ್ಲದವರಿಗೆ ಸಾವಿರ ಸಾವಿರ ನಿವೇಶನ ಮತ್ತು ಮನೆಗಳನ್ನು ಒದಗಿಸಿಕೊಟ್ಟಿದ್ದೇನೆ. ಆದರೆ, ಇಂದು ವಿನಾಕಾರಣ ಇಂತಹ ಸ್ಥಿತಿ ಎದುರಿಸಬೇಕಾಗಿ ಬಂದಿದೆ. ಇದು ಬೇಸರದ ವಿಷಯ" ಎಂದು ಹೇಳಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications