ಮಂಗನ ಕಾಯಿಲೆ ಹಿನ್ನೆಲೆ ಬನವಾಸಿ ಕದಂಬೋತ್ಸವ ಮುಂದೂಡಿಕೆ
ಕಾರವಾರ, ಫೆಬ್ರವರಿ, 04: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಫೆಬ್ರವರಿ 9 ಮತ್ತು 10ರಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಫೆಬ್ರವರಿ 9 ಮತ್ತು 10ರಂದು ಕದಂಬೋತ್ಸವನ್ನು ನಡೆಸಲು ಜಿಲ್ಲಾಡಳಿತ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿತ್ತು. ಬನವಾಸಿ ಮತ್ತು ಸಮೀಪದಲ್ಲಿ ಮಂಗಗಳು ಶಂಕಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ರೋಗ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಈ ದಿನಾಂಕಗಳಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಶಂಕಿತ ಪ್ರದೇಶಗಳಲ್ಲಿ ಲಸಿಕೆಗಳನ್ನು ಹಾಕಲಾಗಿದೆ. ಕಾಡಿನ ಸಂಪರ್ಕದಲ್ಲಿರುವ ಗ್ರಾಮಗಳ ಜನರಿಗೆ ಔಷಧಗಳ ವಿತರಣೆ, ಡಿಎಂಪಿ ತೈಲ ಲೇಪನ ಹಾಗೂ ದನ-ಕುರಿ ಕೊಟ್ಟಿಗೆಗಳಿಗೆ ಹುಣ್ಣೆ ನಿಯಂತ್ರಣ ಔಷಧಗಳ ಸಿಂಪಡಣೆ ಸೇರಿದಂತೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಜಿಲ್ಲೆಗೆ ಹೆಚ್ಚುವರಿ ಔಷಧಗಳನ್ನು ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಆದಾಗ್ಯೂ ಕದಂಬೋತ್ಸವ ನಡೆಯಬೇಕಿದ್ದ ಬನವಾಸಿಯಲ್ಲಿ ಇತ್ತೀಚೆಗೆ ಮಂಗವೊಂದು ಮೃತಪಟ್ಟು, ಅದರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿ ಅದು ಋಣಾತ್ಮಕವಾಗಿರುವುದು ಸ್ಪಷ್ಟವಾಗಿದೆ. ಆದರೆ ಬನವಾಸಿಯಿಂದ 10 ಕಿಲೋ ಮೀಟರ್ ದೂರದಲ್ಲಿ ಮೃತಪಟ್ಟಿರುವ ಮಂಗದ ಮಾದರಿಯಲ್ಲಿ ಧನಾತ್ಮಕ ಫಲಿತಾಂಶ ವ್ಯಕ್ತವಾಗಿದೆ.

ಇದರಿಂದಾಗಿ ಜಿಲ್ಲಾಡಳಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣವಾಗದಂತೆ ತಡೆಗಟ್ಟುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಈ ಸಂದರ್ಭದಲ್ಲಿ ಕದಂಬೋತ್ಸವ ಆಚರಿಸುವುದು ಕಷ್ಟಸಾಧ್ಯವಿರುವ ಕಾರಣ ಸದ್ಯಕ್ಕೆ ಕದಂಬೋತ್ಸವನ್ನು ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications