ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶರಾವತಿ ನದಿ ಉಳಿವಿಗೆ ಆಗ್ರಹಿಸಿ ಹೊನ್ನಾವರದಲ್ಲಿ ಬಂದ್

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜುಲೈ 10: ಶರಾವತಿ ನದಿ ಉಳಿವಿಗೆ ಆಗ್ರಹಿಸಿ ಹೊನ್ನಾವರ ತಾಲ್ಲೂಕಿನಲ್ಲಿ ಇಂದು ಬಂದ್ ಆಚರಿಸಲಾಗುತ್ತಿದೆ. ಜೀವನದಿ ಶರಾವತಿ ಉಳಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದ್ದು, ಶರಾವತಿ ನದಿ ನೀರನ್ನು ಬೆಂಗಳೂರಿಗೆ ತರುವ ಯೋಜನೆಯನ್ನು ವಿರೋಧಿಸಿ ಬಂದ್ ಕೈಗೊಳ್ಳಲಾಗಿದೆ.

 ಬೆಂಗಳೂರಿಗೆ ಶರಾವತಿ ನೀರು : ಜುಲೈ 10ರಂದು ಶಿವಮೊಗ್ಗ ಬಂದ್ ಬೆಂಗಳೂರಿಗೆ ಶರಾವತಿ ನೀರು : ಜುಲೈ 10ರಂದು ಶಿವಮೊಗ್ಗ ಬಂದ್

ಬಂದ್‌ಗೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವರ್ತಕರೂ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ನಗರದ ಶರಾವತಿ ಸರ್ಕಲ್ ಬಳಿ ಪ್ರತಿಭಟನಾಕಾರರು ಸೇರಿದ್ದು, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

Bandh at Honnavar seeking the survival of the Sharavati River

ಬಸ್, ಟೆಂಪೋ, ಆಟೋ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ಬಂದ್ ಹಿನ್ನಲೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

English summary
The Band is being called today in the Honnavar taluk for the survival of the Sharavati River. The bandh has been summoned by the committee to Save the Sharavathi, in protest against the plan to bring Sharavati river water to Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X