ಮಸೀದಿಗೆ ತೆರಳಿ ಪ್ರಾರ್ಥನೆ ವೀಕ್ಷಿಸಿದ ಸ್ವಾಮೀಜಿ: ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಸಹಸ್ರಮಾನೋತ್ಸವ
ಕಾರವಾರ, ಜನವರಿ 6: ಒಂದು ಸಾವಿರ ವರ್ಷಗಳನ್ನು ಪೂರೈಸಿದ ಜಮಾತುಲ್ ಮುಸ್ಲಿಮೀನ್ ಸಂಸ್ಥೆಯ ಸಹಸ್ರ ಶತಮಾನೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವು ಹಿಂದೂ ಮುಸ್ಲಿಮರ ಕೋಮು ಸೌಹಾರ್ದತೆಗೆ ಸಾಕ್ಷಿಯಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಲಸಂಗಮದ ಬಸವಧರ್ಮಪೀಠದ ಬಸವಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವು ಹಿಂದೂ ಮುಖಂಡರು ಸೌಹಾರ್ದತೆ ಭಾಗವಾಗಿ ಮಸೀದಿಗಳಿಗೆ ಭೇಟಿ ನೀಡಿ ಮುಸ್ಲಿಮರ ಪ್ರಾರ್ಥನೆ ವೀಕ್ಷಿಸಿದರು.
ವ್ಯಾಪಾರಕ್ಕಾಗಿ ಅರಬ್ ದೇಶದಿಂದ ಹಡಗುಗಳ ಮೂಲಕ ಆಗಮಿಸಿದ ಮುಸ್ಲಿಂ ಸಮುದಾಯದವರು ಭಟ್ಕಳದಲ್ಲಿ ನೆಲೆಸಿ ಬಳಿಕ ಆರಂಭಿಸಿದ್ದ ಜಮಾತುಲ್ಲಾ ಮುಸ್ಲಿಮೀನ್ ಭಟ್ಕಳ ಸಂಸ್ಥೆಯೂ ಇದೀಗ ಸಾವಿರ ವರ್ಷ ಪೂರೈಸಿದೆ.

ಕೂಡಲಸಂಗಮದ ಬಸವಧರ್ಮಪೀಠದ ಬಸವಪ್ರಕಾಶ ಸ್ವಾಮೀಜಿ ಭಾಗಿ
ಈ ಹಿನ್ನೆಲೆಯಲ್ಲಿ ಭಟ್ಕಳ ಪಟ್ಟಣದ ಚಿನ್ನದಪಳ್ಳಿಯ ಮಸೀದಿ ಬಳಿ ಆಯೋಜಿಸಿದ್ದ ಈ ಸಹಸ್ರಮಾನೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಸಮುದಾಯದ ಧಾರ್ಮಿಕ ಗುರುಗಳು ಹಾಗೂ ರಾಜಕೀಯ ಮುಖಂಡರುಗಳು ಭಾಗವಹಿಸಿದ್ದರು. ಅಲ್ಲದೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಲಸಂಗಮದ ಬಸವಧರ್ಮಪೀಠದ ಬಸವಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಜೆ.ಡಿ. ನಾಯ್ಕ ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಸಮುದಾಯದವರ ಪ್ರಾರ್ಥನೆ ವೀಕ್ಷಣೆ ನಡೆಸಿದರು.

ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ
ಬಳಿಕ ಮಾತನಾಡಿದ ಸ್ವಾಮೀಜಿ, ದೇಶ ವಿಶ್ವಗುರುವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನು ಕೂಡ ವಿಶ್ವಗುರು ಆಗಿಲ್ಲ. ಹಿಂದೂ ಮುಸ್ಲಿಂ ಸಮುದಾಯದವರು ಸೌಹಾರ್ಧಯುತವಾಗಿ ಬದುಕಿದಾಗ ಅದು ಸಾಧ್ಯವಾಗಲಿದೆ. ರಾಜಕೀಯ ನಾಯಕರುಗಳು ತಮ್ಮ ಲಾಭಕ್ಕೋಸ್ಕರ ಧರ್ಮ ಧರ್ಮಗಳ ನಡುವೆ ಸುಳ್ಳು ಪ್ರಚಾರ ಮಾಡುತ್ತಾರೆ. ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಇದೆಲ್ಲವನ್ನು ಬಿಟ್ಟು ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಿಸಬೇಕು ಎಂದು ಹೇಳಿದರು.

ಇನ್ನೊಬ್ಬರನ್ನು ಪೀತಿಸಬೇಕು
ಧರ್ಮವನ್ನು ಪ್ರೀತಿ ಮಾಡಬೇಕು. ಜೊತೆಗೆ ಇನ್ನೊಬ್ಬರನ್ನು ಪೀತಿಸಬೇಕು. ಕಾಣದ ದೇವರನ್ನು ಪ್ರೀತಿಸುವ ಮೊದಲು ಕಾಣುವ ಮನಸ್ಸರನ್ನು ಪ್ರೀತಿಸಬೇಕಾಗಿದೆ. ನಮ್ಮೆಲ್ಲರ ಮೈಯಲ್ಲಿ ಹರಿಯುವುದು ಒಂದೇ ರಕ್ತ ಎಂಬುದನ್ನು ನಾವೆಲ್ಲರು ತಿಳಿದುಕೊಳ್ಳಬೇಕು. ನಾವೆಲ್ಲರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೀಡಿರುವ ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದೇವೆ ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜನರಿಗೆ ಕಿವಿ ಮಾತು ಹೇಳಿದರು.

ಮುಸ್ಲಿಂ, ಕ್ರಿಶ್ಚಿಯನ್ ಭಾರತದ ದತ್ತು ಪುತ್ರರು
ಇನ್ನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲವನ್ನು ನಮ್ಮ ಮನೆಯಲ್ಲಿ ಮನಸ್ಸಿನಲ್ಲಿ ಇಟ್ಟುಕೊಂಡು ಹೊರಗಡೆ ಬಂದಾಗ ನಾವೆಲ್ಲರೂ ಭಾರತೀಯರು ಎಂದು ತಿಳಿಯಬೇಕಾಗಿದೆ. ಹಿಂದೂ, ಮುಸ್ಲಿಮರು ದ್ವೇಷ ಬಿಟ್ಟು ಸಹಬಾಳ್ವೆಯಿಂದ ಬದುಕಿದಾಗ ಭಾರತಾಂಭೆ ಕೂಡ ಸುಖವಾಗಿ ಇರುತ್ತಾಳೆ. ಮುಸ್ಲಿಂ, ಕ್ರಿಶ್ಚಿಯನ್ ಭಾರತದ ದತ್ತು ಪುತ್ರರಾಗಿದ್ದು, ಅವರೆಲ್ಲರೂ ನಮ್ಮ ಸಹೋದರರಾಗಿದ್ದಾರೆ ಎಂದು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications