ಶಿರಸಿ ಮಾರಿಕಾಂಬ ಜಾತ್ರೆ ಘೋಷಣೆ ಬೆನ್ನಲ್ಲೇ ದೇಗುಲ ಅಧ್ಯಕ್ಷರ ಮನೆ ಮುಂದೆ ಮಾಟ
ಕಾರವಾರ, ಜನವರಿ 03: ಈಚೆಗಷ್ಟೇ ಶಿರಸಿ ಮಾರಿಕಾಂಬ ಜಾತ್ರೆಯ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಶಿರಸಿ ದೇಗುಲದ ಅಧ್ಯಕ್ಷ ವೆಂಕಟೇಶ್ ನಾಯ್ಕ ಅವರ ಮನೆಯ ಮುಂದೆ ಮಾಟ ಮಾಡಲಾಗಿದೆ.
ಬನವಾಸಿ ರಸ್ತೆಯ ರಾಮನಬೈಲು ಕ್ರಾಸ್ ಬಳಿ ಇರುವ ಅವರ ಮನೆ ಮುಂದೆ ಸ್ತಂಭನ ಪದ್ಧತಿ ಮುಖೇನ ಮಾಟ ಮಾಡಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ಇಂದು ಬೆಳಗಿನ ಜಾವ ವೆಂಕಟೇಶ್ ಅವರು ಹೊರಗೆ ಬಂದಾಗ ಮಾಟ ಮಾಡಿರುವುದು ಕಾಣಿಸಿದೆ. ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಳೆ ಎಲೆ ಮೇಲೆ ಕುಂಬಳಕಾಯಿ, ನಿಂಬೆಹಣ್ಣು, ಮೊಳೆ, ಹಿಟ್ಟಿನ ಉಂಡೆ ಮೂಲಕ ಮಾಟ ಮಾಡಲಾಗಿದೆ. ಈ ಪದ್ಧತಿಯನ್ನು ತಾಂತ್ರಿಕ ಪರಿಣತರು ಸ್ತಂಭನ ಪದ್ದತಿ ಎನ್ನುತ್ತಾರೆ. ಈ ರೀತಿ ಮಾಡಿದಾಗ ಮಾಟ ಮಾಡಲ್ಪಟ್ಟ ವ್ಯಕ್ತಿ ಕ್ರಿಯಾಶೀಲತೆ ಇಲ್ಲದೇ ಬಳಲುತ್ತಾರೆ. ಆರೋಗ್ಯ ಹದಗೆಡುತ್ತದೆ, ಬುದ್ಧಿ, ಕ್ರಿಯಾಶೀಲತೆ ಕಳೆದುಹೋಗುತ್ತದೆ ಎನ್ನಲಾಗುತ್ತದೆ.

ದೂರಿನ ಮೇರೆಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಸಿ.ಸಿ ಕ್ಯಾಮೆರಾ ಇರಲಿಲ್ಲವಾದ್ದರಿಂದ ಸುತ್ತಮುತ್ತಲ ಮನೆಗಳಲ್ಲಿದ್ದ ಸಿಸಿ ಟಿವಿಯನ್ನು ಪರಿಶೀಲಿಸಲಾಗುತ್ತಿದೆ. ಇದುವರೆಗೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ.

ಹೀಗೆ ಮಾಟ ಮಾಡುತ್ತಿರುವುದು ಇದೇ ಮೊದಲಲ್ಲ. ಎಂಟು ತಿಂಗಳ ಹಿಂದೆಯೂ ದೇವಸ್ಥಾನದಲ್ಲಿಯೇ ಮಾಟ ಮಾಡಲಾಗಿತ್ತು. ದೇವಸ್ಥಾನದ ಕಚೇರಿಯಲ್ಲಿ ಅವರು ಕೂರುವ ಸ್ಥಳದಲ್ಲಿ ತಾಮ್ರದ ತಗಡನ್ನು ಇಟ್ಟು ಹೋಗಿದ್ದರು. ಎರಡು ತಿಂಗಳ ಹಿಂದೆ ಐದು ನಿಂಬೆ ಹಣ್ಣು ಇಟ್ಟುಹೋಗಿದ್ದು, ಅವರ ಮನೆ ಪ್ರವೇಶದ ಸಂದರ್ಭದಲ್ಲಿ ಕೂಡ ಶಾಮಿಯಾನದ ಒಳಗೆ ಸತ್ತ ನಾಯಿಗೆ ಮಾಟ ಮಾಡಿ ತಂದು ಹಾಕಿದ್ದರು ಎಂದು ವೆಂಕಟೇಶ್ ನಾಯ್ಕ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications