ಭಟ್ಕಳದಲ್ಲಿ ಬಾಂಬ್ ಸ್ಪೋಟ ಮಾಡುವುದಾಗಿ ಬೆದರಿಕೆ: ಆರೋಪಿಯನ್ನ ಬಂಧಿಸಿದ ಚೆನ್ನೈ ಪೊಲೀಸರು
ಕಾರವಾರ, ಜನವರಿ, 05: ಹೊಸ ವರ್ಷಾಚರಣೆ ವೇಳೆ ಭಟ್ಕಳದಲ್ಲಿ ಸ್ಫೋಟ ಮಾಡುವುದಾಗಿ ಪೊಲೀಸ್ ಠಾಣೆಗೆ ಬೆದರಿಕೆ ಪತ್ರ ಬರೆದಿರುವ ವಿಚಾರವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚೆನ್ನೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸ್ಫೋಟ ಮಾಡುವುದಾಗಿ "ನೆಕ್ಸ್ಟ್ ಟಾರ್ಗೆಟ್ ಡಿಸೆಂಬರ್ 25 & ಹ್ಯಾಪಿ ನ್ಯೂ ಇಯರ್ 2023" ಎಂದು ಉರ್ದು ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಬರೆದ ಪೋಸ್ಟ್ ಕಾರ್ಡ್ವೊಂದು ಭಟ್ಕಳ ಠಾಣೆಗೆ ತಲುಪಿತ್ತು. ಸೂಕ್ಷ್ಮ ವಿಷಯವಾಗಿದ್ದರಿಂದ ಬಹಿರಂಗಪಡಿಸದೇ ಪೊಲೀಸರು ತನಿಖೆ ನಡೆಸಿದ್ದರು. ಇನ್ನು ಈ ಬಗ್ಗೆ ಚೆನ್ನೈ ಪೊಲೀಸರನ್ನು ವಿಚಾರಿಸಿದಾಗ ಅಲ್ಲಿಯೂ ಇಂತಹುದೇ ಬೆದರಿಕೆ ಪತ್ರ ಬಂದಿರುವುದು ಬೆಳಕಿಗೆ ಬಂದಿದೆ. ಲ್ಯಾಪ್ಟಾಪ್ ಕಳ್ಳತನ ಮಾಡಿದ ಆರೋಪಿಯೋರ್ವ ಅದನ್ನು ಅಂಗಡಿಗೆ ಮಾರಲು ಮುಂದಾಗಿದ್ದ. ಆತ ಸಿಕ್ಕಿಬಿದ್ದಾಗ ಕಳ್ಳತನದ ವಿಷಯ ಮುಚ್ಚಿಡಲು ಈ ರಿತಿ ಹುಸಿ ಬೆದರಿಕೆ ಪತ್ರ ಬರೆದಿರುವುದು ವಿಚಾರಣೆ ವೇಳೆ ಬಹಿರಂಗವಾಗಿದೆ.
ಭಟ್ಕಳ ಸ್ಫೋಟಿಸುವ ಬೆದರಿಕೆ, ಆರೋಪಿ ಅಂದರ್
ಲ್ಯಾಪ್ಟಾಪ್ ಮಾರಾಟ ಮಾಡಲು ತೆರಳಿದ್ದ ಅಂಗಡಿ ಮಾಲೀಕನ ನಂಬರ್ ಹಾಕಿ ಪತ್ರ ಬರೆದಿರುವುದು ಬೆಳಕಿದೆ ಬಂದಿತ್ತು. ಆಗ ಆ ಪತ್ರವನ್ನು ಆಧರಿಸಿ ತನಿಖೆ ನಡೆಸಿದ್ದ ಚೆನ್ನೈ ಪೊಲೀಸರು ಆರೋಪಿಯನ್ನು ಬಲೆಗೆ ಕೆಡವಿದ್ದಾರೆ. ಹೊಸಪೇಟೆ ಮೂಲದ ಹನುಮಂತಪ್ಪ ಹುಸಿ ಬೆದರಿಕೆ ಪತ್ರ ಬರೆದಿರುವ ಆರೋಪಿಯಾಗಿದ್ದಾನೆ. ಮಂಗಳೂರಿನ ಸುಬ್ರಹ್ಮಣ್ಯದಿಂದ ಪತ್ರವನ್ನು ಪೋಸ್ಟ್ ಮಾಡಿದ್ದ ಎನ್ನಲಾಗಿದ್ದು, ಇದೀಗ ಕಳ್ಳನನ್ನು ಬಾಡಿ ವಾರಂಟ್ ಮೇಲೆ ಭಟ್ಕಳಕ್ಕೆ ತರಲು ಪೊಲೀಸರು ತಯಾರಿ ನಡೆಸಿದ್ದಾರೆ.

ಸೂಕ್ತ ಭದ್ರತೆ ಕಲ್ಪಿಸುವಂತೆ ಮನವಿ
ಇತ್ತೀಚೆಗಷ್ಟೇ ಉಗ್ರರ ಟಾರ್ಗೆಟ್ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಎನ್ನುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದರು. ಅತೀ ಹೆಚ್ಚು ಭಕ್ತರು ಆಗಮಿಸುವ ಕದ್ರಿ ಕ್ಷೇತ್ರದಲ್ಲಿ ಭಕ್ತರಿಗೆ ರಕ್ಷಣೆ ಕೊಡುವಂತೆ ದೇವಸ್ಥಾನದ ಆಡಳಿತ ಸಮಿತಿ ಪೊಲೀಸರ ಮೊರೆ ಹೋಗಿತ್ತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದು ಭದ್ರತೆಯನ್ನು ಕಲ್ಪಿಸಲಾಗಿತ್ತು. ಮಂಗಳೂರಿನ ನಾಗುರಿಯಲ್ಲಿ ನಡೆದ ಬಾಂಬ್ ಸ್ಪೋಟ ಕದ್ರಿ ಮಂಜುನಾಥ ದೇವಸ್ಥಾನದ ಟಾರ್ಗೆಟ್ ಎನ್ನುವುದು ಈಗ ಬೆಳಕಿಗೆ ಬಂದಿತ್ತು. ಐಆರ್ಸಿ ಎನ್ನುವ ಉಗ್ರ ಸಂಘಟನೆಯ ಹೆಸರಿನಲ್ಲಿ ಡಾರ್ಕ್ ವೆಬ್ ಮೂಲಕ ಹರಿದಾಡಿದ ಪೋಸ್ಟರ್ನಲ್ಲಿ ಈ ಆಘಾತಕಾರಿ ವಿಚಾರವನ್ನು ಬಂಹಿರಂಗಪಡಿಸಿದ್ದು, ಸ್ಪೋಟದ ರೂವಾರಿ ನಾವೇ ಎಂದು ಸಂಘಟನೆ ಹೇಳಿಕೊಂಡಿತ್ತು.
ಬಾಂಬ್ ಸ್ಫೋಟ ವಿಫಲವಾಗಿದ್ದರೂ ಮುಂದಿನ ದಿನದಲ್ಲಿ ನಮ್ಮ ಟಾರ್ಗೆಟ್ ಕಂಪ್ಲೀಟ್ ಮಾಡುತ್ತೇವೆ ಎಂದು ಹೇಳಿಕೊಂಡಿದ್ದರು. ಇದರಿಂದ ಆತಂಕ ಮತ್ತಷ್ಟು ಹೆಚ್ಚಾಗಿತ್ತು. ಹೀಗಾಗಿ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಭದ್ರತೆಯನ್ನು ಕೇಳಿತ್ತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಪ್ರತಿನಿತ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಸೂಕ್ತ ಭದ್ರತೆ ಕಲ್ಪಿಸಲು ದೂರಿನಲ್ಲಿ ತಿಳಿಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications