ಕಲ್ಲು ಕೊಡುವವರ ಕೈ ಮುರಿಯಿರಿ: ಆರ್.ವಿ.ದೇಶಪಾಂಡೆ
ಕಾರವಾರ, ಡಿಸೆಂಬರ್ 24: "ಮಕ್ಕಳ ಕೈಯಲ್ಲಿ ಪೆನ್ನು ಇರ್ಬೇಕು. ಅವರ ಕೈಗೆ ಕಲ್ಲು ನೀಡ್ಬಾರ್ದು. ಕಲ್ಲು ಕೊಡುವವರ ಕೈ ಮುರಿಯಬೇಕು," ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದರು.
ಅವರು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ವಿದ್ಯಾಭ್ಯಾಸ ನಡೆಸಿದ ಸಿದ್ದಾಪುರ ತಾಲ್ಲೂಕಿನ ದೊಡ್ಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಂದರ್ಭ ಈ ಹೇಳಿಕೆ ನೀಡಿದರು. ವಿಶೇಷ ಶಾಲಾಭಿವೃದ್ಧಿ ಯೋಜನೆಯಡಿ ಮಂಜೂರಾದ 36.28 ಲಕ್ಷ ರೂ. ಅನುದಾನದಲ್ಲಿ ಶಾಲೆಯಲ್ಲಿ ಕೈಗೆತ್ತಿಕೊಳ್ಳಲಾದ ಕೊಠಡಿ ಕಾಮಗಾರಿಗಳನ್ನು ಶನಿವಾರ ದೇಶಪಾಂಡೆ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, "ಹೊಡಿ, ಬಡಿ, ಬೆಂಕಿ ಹಚ್ಚು ಎಂಬುದಕ್ಕೆ ಉತ್ತೇಜನ ನೀಡಕೂಡದು. ಈ ರೀತಿ ಮಾಡುವವರಿಗೆ ಜನರು ಉತ್ತರ ಹೇಳಬೇಕು. ಕಾನೂನು ಕೈಗೆ ತೆಗೆದುಕೊಳ್ಳುವವರಿಗೆ ಶಿಕ್ಷೆ ಆಗಬೇಕು. ಪ್ರಗತಿ ಮಾಡಲು, ಸಾಮಾಜಿಕ ನ್ಯಾಯ ನೀಡಲು, ಬಡವರ, ರೈತರ ಪರ ಕಾರ್ಯಕ್ರಮ ಮಾಡಲು ಸಾಧ್ಯವಾಗದಿದ್ದಾಗ ಇಂತಹ ವಾಮಮಾರ್ಗವನ್ನು ಅನುಸರಿಸುತ್ತಿದ್ದಾರೆ. ಜಾತಿ, ಜಾತಿಯ ಮಧ್ಯೆ ಮತ್ತು ಧರ್ಮ, ಧರ್ಮದ ಮಧ್ಯೆ ಬೆಂಕಿ ಹಚ್ಚಿ ಏನು ಸಾಧನೆ ಮಾಡುತ್ತೀರಿ?" ಎಂದು ಪ್ರಶ್ನಿಸಿದರು.
"ಉತ್ತರ ಕನ್ನಡ ಸುಸಂಸ್ಕೃತ ಜನರ ಜಿಲ್ಲೆ. ಇಲ್ಲಿಯ ಜನರು ಬಡವರಿರಬಹುದು. ಆದರೆ ಗಲಾಟೆ, ಗಲಭೆ ಮಾಡುವವರಲ್ಲ. ಅವರ ನಡುವೆ ವಿಷದ ಬೀಜ ಬಿತ್ತುವ ಕೆಲಸವಾಗುತ್ತಿದೆ." ಎಂದು ದೇಶಪಾಂಡೆ ಕಿಡಿಕಾರಿದರು.
ಶಶಿಭೂಷಣ ಹೆಗಡೆ ಮನೆಗೆ ಭೇಟಿ
ದೊಡ್ಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯಕ್ರಮಕ್ಕೆ ಬರುವ ಮೊದಲು ಸಿದ್ದಾಪುರ ಪಟ್ಟಣದಲ್ಲಿರುವ, ವಿಧಾನಸಭೆ ಚುನಾವಣೆಯಲ್ಲಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಹೇಳಲಾಗಿರುವ ಶಶಿಭೂಷಣ ಹೆಗಡೆ ಅವರ ಮನೆಗೆ ಭೇಟಿ ನೀಡಿದರು.
ಈ ಕುರಿತು ಮಾಧ್ಯಮದವರು ಪ್ರಶ್ನಿಸಿದರೆ, "ಇದರಲ್ಲಿ ರಾಜಕೀಯ ತರಬೇಡಿ. ನನಗೆ ರಾಜಕೀಯ ಎಂಬುದು ದಂಧೆ ಅಲ್ಲ. ಶಶಿಭೂಷಣ ಹೆಗಡೆ ಅವರ ಮನೆಯಲ್ಲಿ ಅಮ್ಮ (ಗಣೇಶ ಹೆಗಡೆ ಅವರ ಪತ್ನಿ) ಇದ್ದಾರೆ. ಶಶಿ ನನಗೆ ಮಗ ಇದ್ದ ಹಾಗೆ. ಆದ್ದರಿಂದ ಅವರನ್ನು ನೋಡಲು ಹೋಗಿದ್ದೆ. ನನಗೆ ಎಸ್.ಎಂ.ಕೃಷ್ಣ ಸೇರಿದಂತೆ ಹಲವು ಬೇರೆ ಪಕ್ಷಗಳ ರಾಜಕೀಯ ಧುರೀಣರೊಂದಿಗೆ ಉತ್ತಮ ಸಂಬಂಧ ಇದೆ," ಎಂದು ಪ್ರತಿಕ್ರಿಯೆ ನೀಡಿದರು.
ಗಲಭೆಗೆ ಮುಖ್ಯಮಂತ್ರಿ ಉತ್ತೇಜನವಿಲ್ಲ
"ನಾನು ಹಲವು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ಒಳ್ಳೆ ಮುಖ್ಯಮಂತ್ರಿ. ರಾಜ್ಯದಲ್ಲಿ ಯಾವುದೇ ಮುಖ್ಯಮಂತ್ರಿ ಕೂಡ ಗಲಭೆ, ಗಲಾಟೆಗೆ ಉತ್ತೇಜನ ನೀಡಿಲ್ಲ," ಎಂದು ದೇಶಪಾಂಡೆ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications