ದಲೈಲಾಮ ಹತ್ಯೆ ಸಂಚು:ಬೌದ್ಧ ಬಿಕ್ಕುಗಳಿಗೆ ಸಮಾಧಾನಪಡಿಸಿದ ಅಧಿಕಾರಿಗಳು
ಕಾರವಾರ, ಅಕ್ಟೋಬರ್.05: ಬೌದ್ಧಗುರು ದಲೈಲಾಮ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸುದ್ದಿ ಇದೀಗ ಟಿಬೇಟಿಯನ್ನರನ್ನು ತಲ್ಲಣಗೊಳಿಸಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಟಿಬೇಟಿಯನ್ನರ ನಿರಾಶ್ರಿತರ ಕೇಂದ್ರದಲ್ಲಿರುವ ಬೌದ್ಧ ಸನ್ಯಾಸಿಗಳಲ್ಲಿ ಈ ಸುದ್ದಿ ಸಂಚಲನ ಸೃಷ್ಟಿಸಿದೆ.
ಬೌದ್ಧಗುರು ದಲೈಲಾಮಾ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆಗಸ್ಟ್ 5ರ ರಾತ್ರಿ ರಾಮನಗರದಲ್ಲಿ ಬಂಧಿತನಾಗಿದ್ದ ಜಾರ್ಖಂಡ್ ಮೂಲದ ಉಗ್ರ ಮುನೀರ್ ಬಾಯ್ಬಿಟ್ಟಿದ್ದ. ದಲೈಲಾಮಾರನ್ನ ಬಾಂಬ್ ನಿಂದ ಸ್ಫೋಟಿಸಿ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಮಾಹಿತಿಯನ್ನು ಆತ ವಿಚಾರಣೆಯ ವೇಳೆ ಬಿಚ್ಚಿಟ್ಟಿದ್ದ.
ಬೌದ್ಧ ಧರ್ಮಗುರು ದಲೈಲಾಮಾ ಅವರು ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರು. ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರಿಂದ ಜೆಎಂಬಿ ಉಗ್ರ ಸಂಘಟನೆ ಹತ್ಯೆಗೆ ಸಂಚು ರೂಪಿಸಿತ್ತು ಎಂದು ಆತ ಹೇಳಿಕೆ ನೀಡಿದ್ದ. ಈ ಸುದ್ದಿ ಹೊರಬೀಳುತ್ತಿದ್ದಂತೆ, ನಿರಾಶ್ರಿತರ ನೆಲೆಯಲ್ಲಿ ಎಲ್ಲವೂ ಸುರಕ್ಷಿತವಾಗಿದೆ ಎಂದು ಸರ್ಕಾರ, ಅಧಿಕಾರಿಗಳು ಇಲ್ಲಿನ ಬಿಕ್ಕುಗಳಿಗೆ ಸಮಾಧಾನಿಸುತ್ತಿದ್ದಾರೆ.
ಆದರೆ, ದೇವರಂತೆ ಪೂಜಿಸಲಾಗುವ ಗುರುವಿನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸಂಗತಿ ಬಿಕ್ಕುಗಳಲ್ಲಿ ಒಳಗೊಳಗೆ ಆತಂಕ ಉಂಟುಮಾಡಿದೆ. ದೆಹಲಿ, ಬೆಂಗಳೂರಿನಲ್ಲಿರುವ ಟಿಬೆಟಿಯನ್ ರಾಜಕೀಯ ಪ್ರಮುಖರು ಕಾಲಕಾಲಕ್ಕೆ ಇಲ್ಲಿಯ ಪ್ರಮುಖರಿಗೆ ಮಾಹಿತಿಗಳನ್ನು ರವಾನಿಸುತ್ತಿದ್ದಾರೆ.
ಬೌದ್ಧ ಮುಖಂಡರು ನಿರಾಶ್ರಿತರ ಕೇಂದ್ರದಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ದಲೈಲಾಮಾ ದೀರ್ಘಾಯುಷ್ಯಕ್ಕಾಗಿ ಬೌದ್ಧ ಸನ್ಯಾಸಿಗಳು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಈ ಕುರಿತ ಸಂಕ್ಷಿಪ್ತ ಲೇಖನ ಇಲ್ಲಿದೆ.

ಸಭೆ ನಡೆಸಿದ ಎಸ್ಪಿ
ನಿರಾಶ್ರಿತರ ಶಿಬಿರಕ್ಕೆ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಗುರುವಾರ ಮುಂಡಗೋಡದ ಟಿಬೆಟಿಯನ್ ಕಾಲೊನಿಗಳಿಗೆ ತೆರಳಿ ಸಭೆ ನಡೆಸಿದ್ದಾರೆ.
ಈ ವೇಳೆ ಎಲ್ಲ ಪ್ರಮುಖ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಶಿಬಿರದ ವಿವಿಧೆಡೆ ಅಗತ್ಯವಿದ್ದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಂದುಹೋಗುವವರ ಕಡ್ಡಾಯ ಪರಿಶೀಲನೆ ಮುಂತಾದ ವಿಚಾರಗಳನ್ನು ಈ ವೇಳೆ ಚರ್ಚಿಸಲಾಗಿದೆ.

ಪೊಲೀಸ್ ಇಲಾಖೆ ಕಾರ್ಯಕ್ರಮಗಳು
ನಿವಾಸಿಗಳಲ್ಲಿ ಸುರಕ್ಷತಾಭಾವ ಮೂಡಿಸಲು ಪೊಲೀಸ್ ಇಲಾಖೆ ಕಾರ್ಯಕ್ರಮಗಳನ್ನೂ ಏರ್ಪಡಿಸುತ್ತಿದೆ. "ಮುಂದಿನ ದಿನಗಳಲ್ಲಿ ಗುಪ್ತಚರ ಇಲಾಖೆಯ ಸಿಬ್ಬಂದಿಯನ್ನೂ ಒಳಗೊಂಡ ಜಂಟಿ ಸಮಿತಿ ರಚಿಸಿಕೊಂಡು ಶಿಬಿರಕ್ಕೆ ಭೇಟಿ ನೀಡಲಾಗುವುದು.
ಆಗ ಕಂಡುಬರುವ ಮಾಹಿತಿಗಳ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಮುಂಡಗೋಡದ ಶಿಬಿರಕ್ಕೆ ಯಾವುದೇ ಭದ್ರತಾ ಬೆದರಿಕೆ ಇಲ್ಲ" ಅಂತ ವಿನಾಯಕ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.

12 ರಾಜ್ಯಗಳಲ್ಲಿ ನೆಲೆಕಂಡುಕೊಂಡರು
60ರ ದಶಕದ ಆರಂಭದಲ್ಲಿ ಹಿಮಾಚಲ ಪ್ರದೇಶದ ಮೂಲಕ ಬಂದ ಟಿಬೇಟಿಯನ್ನರು ದೇಶದ 12 ರಾಜ್ಯಗಳಲ್ಲಿ ನೆಲೆಕಂಡುಕೊಂಡರು. ಅಂತೆಯೇ, ಕರ್ನಾಟಕದಲ್ಲಿಯೂ ನೆಲೆನಿಂತ ಅವರಿಗೆ ಸರ್ಕಾರ ಮುಂಡಗೋಡ ತಾಲ್ಲೂಕಿನಲ್ಲಿ ನಿರಾಶ್ರಿತರ ಕೇಂದ್ರಗಳನ್ನು ನಿರ್ಮಿಸಿಕೊಟ್ಟಿತ್ತು.

ಗೆಲುಕ್ಪಾ ಪಂಗಡ
ಮುಂಡಗೋಡ ತಾಲ್ಲೂಕಿನ 10 ಕ್ಯಾಂಪ್ಗಳಲ್ಲಿ 16 ಸಾವಿರದಷ್ಟು ಟಿಬೇಟಿಯನ್ನರಿದ್ದಾರೆ. ಅವರಲ್ಲಿ 7,800 ಬೌದ್ಧ ಬಿಕ್ಕುಗಳು, 280 ಬೌದ್ಧ ಬಿಕ್ಷುಣಿಯರಿದ್ದಾರೆ. 10 ಮೊನ್ಯಾಸ್ಟ್ರಿಗಳಲ್ಲಿ ಬೌದ್ಧ ಅಧ್ಯಯನ ನಿರಂತರವಾಗಿ ನಡೆಯುತ್ತಿದೆ.
ಪ್ರಮುಖ ಐದು ಪಂಗಡಗಳ ಅನುಯಾಯಿಗಳು ಬುದ್ಧನೊಂದಿಗೆ ದಲೈಲಾಮ ಅವರನ್ನೂ ನಿತ್ಯ ಪೂಜಿಸುತ್ತಾರೆ. 'ಗೆಲುಕ್ಪಾ' ಪಂಗಡಕ್ಕೆ ಸೇರಿರುವ ಅನುಯಾಯಿಗಳು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications