ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ ವಾಹನ ಸವಾರರಿಗೆ ಗುಡ್ ನ್ಯೂಸ್
National Highway 766E: ರಾಜ್ಯದ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ವಾಹನ ಸಂಚಾರಕ್ಕೆ ಅಡೆತಡೆಯದಂತಾಗಿದೆ. ಇನ್ನೂ ಕೆಲವೆಡೆ ಕಾಮಗಾರಿ ನಡೆಯುತ್ತಿರುವ ಮಾರ್ಗಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ಅನುವು ಮಾಡಿಕೊಡಲಾಗಿದೆ. ಈ ನಡುವೆಯೇ ಇದೀಗ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766 ಇ ವಾಹನ ಸವಾರರಿಗೆ ಗುಡ್ ನ್ಯೂಸ್ವೊಂದು ಇದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ನಿಷೇಧಿಸಲಾದ ಬಸ್ ಸಂಚಾರವನ್ನು ಮತ್ತೆ ಪುನಃ ಆರಂಭಿಸಲಾಗಿದೆ. ಇದಕ್ಕೆ ಕಾರಣವೂ ಇದೆ. ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಹಿನ್ನೆಲೆ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಹಾಗೂ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರವಾರ ಅವರ ವರದಿ ಆಧಾರದ ಮೇಲೆ ಸದರಿ ರಸ್ತೆಯಲ್ಲಿ ಡಿಸೆಂಬರ್, 30, 2025ರಿಂದ ಬಸ್ ಸಂಚಾರಕ್ಕೆ ಅನುವು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಹಾಗಾದ್ರೆ ಯಾವೆಲ್ಲಾ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವ ವಾಹನಗಳ ಸಂಚಾರಕ್ಕೆ ಅವಕಾಶ?: ಸಂಚಾರ ಸಮಯದಲ್ಲಿ ಬಸ್ ಹೊರತುಪಡಿಸಿ ಬೇರೆ ಯಾವುದೇ ಭಾರಿ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಮತ್ತು ಕಾಮಗಾರಿ ಪ್ರಗತಿಯಲ್ಲಿರುವ ಪ್ರದೇಶದಲ್ಲಿ ವೇಗದ ಮೀತಿ 20 ಕಿಲೋ ಮೀಟರ್ಗೆ ಸೀಮಿತ ಆಗಿರಬೇಕು. ಪೊಲೀಸ್ ಇಲಾಖೆ ವತಿಯಿಂದ ಅವಶ್ಯ ಇರುವ ಕಡೆಗಳಲ್ಲಿ ಬ್ಯಾರಿಕೇಡ್ಗಳನ್ನು ಕಡ್ಡಾಯವಾಗಿ ಅಳವಡಿಕೆ ಮಾಡಬೇಕು. ಸಂಚಾರ ದಟ್ಟಣೆ ಆಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವೇಗದ ಮಿತಿ ಫಲಕ, ರಸ್ತೆ ತಿರುವು ಪ್ರದೇಶದಲ್ಲಿ ಅಗತ್ಯ ಸೂಚನಾ ಫಲಕಗಳು, ಇನ್ನೀತರ ಅಗತ್ಯ ಸರಕ್ಷಾ ಕ್ರಮಗಳನ್ನು ಅಳವಡಿಕೆ ಮಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ವಾಹನ ಸಂಚಾರಕ್ಕೆ ಅವಕಾಶ: ಇನ್ನೂ ಆದೇಶವು ಡಿಸೆಂಬರ್ 30ರಿಂದ ಜಾರಿಗೆ ಬಂದಿದೆ. ಭಕ್ತಾದಿಗಳು ಮತ್ತು ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲ ಆದಂತಾಗಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ವರದಿಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ.
ವಾಹನ ಸಂಚಾರ ನಿರ್ಬಂಧ ಏಕೆ?: ಈ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಜಾತ್ರೆಯ ಸಮಯದಲ್ಲಿ ವಾಹನ ದಟ್ಟಣೆ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎನ್ನುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ಹಾದುಹೋಗಲಿದೆ?: ರಾಷ್ಟ್ರೀಯ ಹೆದ್ದಾರಿ 766 E ಕುಮಟಾ, ಯಲ್ಲಾಪುರ, ಶಿರಸಿ ಮೇಲೆ ಹಾದುಹೋಗುತ್ತದೆ. ಒಟ್ಟಿನಲ್ಲಿ ಇದು ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ನಡುವಿನ ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಂಪರ್ಕವನ್ನು ಹೆಚ್ಚಿಸಿದೆ. ಅದರಲ್ಲೂ ಪ್ರಮುಖ ಪಟ್ಟಣಗಳು ಹಾಗೂ ಗಿರಿಧಾಮಗಳಗೆ ಪ್ರವಾಸ ಮಾಡಲು ತುಂಬಾ ಅನುಕೂಲವಾಗಿದೆ.
ಏನೆಲ್ಲಾ ಪ್ರಯೋಜನಗಳಿವೆ?
* ಸುಗಮ, ಸುರಕ್ಷಿತ ಪ್ರಯಾಣಕ್ಕೆ ಅನುಕೂಲ
* ವ್ಯಾಪಾರಕ್ಕೆ ಉತ್ತೇಜನ
* ಪ್ರವಾಸೋದ್ಯಮದ ಅಭಿವೃದ್ಧಿ
* ಉದ್ಯೋಗ ಹಾಗೂ ಆರ್ಥಿಕ ವೃದ್ಧಿ
* ಗ್ರಾಮೀಣ ಸಂಪರ್ಕ ಸುಧಾರಣೆ
ಇಷ್ಟೆಲ್ಲಾ ಪ್ರಯೋಜನಗಳನ್ನು ನೀಡುವ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೀಗ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಇಲ್ಲಿ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಇದೀಗ ಶಿರಸಿ ಮಾರಿಕಾಂಬ ಜಾತ್ರೆ ಹಿನ್ನೆಲೆ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಇಲ್ಲಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications