ಉತ್ತರ ಕನ್ನಡದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಕ್ಯಾನ್ಸರ್, 247ಕ್ಕೂ ಹೆಚ್ಚು ಜನರಲ್ಲಿ ರೋಗ ಪತ್ತೆ: ಕಾರಣವೇನು..?
ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡದ ಕ್ರೀಮ್ಸ್ ಆಸ್ಪತ್ರೆಗೆ ಆಗಮಿಸುವ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಪ್ರಸಕ್ತ ವರ್ಷದಲ್ಲಿಯೇ 247ಕ್ಕೂ ಹೆಚ್ಚು ರೋಗಿಗಳಲ್ಲಿ ಮಾರಕ ಕ್ಯಾನ್ಸರ್ ಲಕ್ಷಣಗಳು ಗೋಚರವಾಗಿದ್ದು, ಆಸ್ಪತ್ರೆಯಲ್ಲಿ ಕಾಯಿಲೆಗೆ ಸೂಕ್ತ ಚಿಕಿತ್ಸಾ ಸೌಕರ್ಯವಿಲ್ಲದ ಕಾರಣ ಹೊರ ಜಿಲ್ಲೆ ಹಾಗೂ ರಾಜ್ಯಗಳಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯಲ್ಲಿ ಸದ್ದಿಲ್ಲದೆ ಮಾಹಾಮಾರಿ ಕ್ಯಾನ್ಸರ್ ಕಾಯಿಲೆ ಹೆಚ್ಚಾಗತೊಡಗಿದೆ. ನಗರದ ಕ್ರೀಮ್ಸ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಆಗಮಿಸುವ ಕ್ಯಾನ್ಸರ್ ರೋಗಿಗಳ ಸಂಖ್ಯೆ ಪ್ರತಿ ತಿಂಗಳು ಹೆಚ್ಚಾಗತೊಡಗಿದೆ. ಪ್ರಸಕ್ತ ಸಾಲಿನ ಜನವರಿಯಿಂದ ಈವರೆಗೆ 247 ಮಂದಿಯಲ್ಲಿ ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಂಡಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ಸೌಲಭ್ಯವಿಲ್ಲದೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆಂದು ಬಂದು ಪರೀಕ್ಷೆಗೊಳಪಟ್ಟು ಕ್ಯಾನ್ಸರ್ ಎಂದು ಧೃಡಪಟ್ಟವರ ಸಂಖ್ಯೆಯಿಂದ ಕಳೆದ ಜನವರಿಯಿಂದ ಈವರೆಗೆ 225ಕ್ಕೂ ಅಧಿಕ ಪ್ರಕರಣಗಳಾಗಿದೆ. ಕಳೆದ ಜನವರಿಯಲ್ಲಿ 24 ಪ್ರಕರಣ ಪತ್ತೆಯಾದರೆ, ಫೆಭ್ರವರಿಯಲ್ಲಿ 48, ಮಾರ್ಚ್ ನಲ್ಲಿ 17, ಏಪ್ರಿಲ್ ನಲ್ಲಿ 17, ಮೇ ನಲ್ಲಿ 25, ಜೂನ್ ನಲ್ಲಿ25, ಜುಲೈ ನಲ್ಲಿ 18, ಆಗಸ್ಟ್ ನಲ್ಲಿ 20, ಸೆಪ್ಟೆಂಬರ್ ನಲ್ಲಿ 25, ಅಕ್ಟೋಬರ್ ನಲ್ಲಿ 11 ಹಾಗೂ ನವೆಂಬರ್ ನಲ್ಲಿ 17 ಪ್ರಕರಣ ಪತ್ತೆಯಾಗಿದೆ.
ಅದರಲ್ಲಿಯೂ ಕ್ರೀಮ್ಸ್ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಪೈಕಿ ಅತಿ ಹೆಚ್ಚು ಸ್ತನ ಕ್ಯಾನ್ಸರ್ ಪ್ರಕರಗಳು ಕಂಡುಬರುತ್ತಿದೆ. ಕಳೆದ ಜನವರಿಯಿಂದ ಇವರೆಗೆ 55 ಪ್ರಕರಣಗಳು ಪತ್ತೆಯಾಗಿದೆ. ಇನ್ನು ಇದಲ್ಲದೆ ಆಯಾ ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೂ ಭೇಟಿ ನೀಡಿ ಬಳಿಕ ಚಿಕಿತ್ಸೆಗೆ ಹೊರ ಜಿಲ್ಲೆಗಳಿಗೆ ತೆರಳುತ್ತಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ತೀಚೆಗೆ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಪ್ರಾರಂಭಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ. ಸದ್ಯ ಇನ್ನೂ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಎರಡು ವರ್ಷಗಳ ನಂತರವೇ ಈ ಚಿಕಿತ್ಸೆ ಪ್ರಾರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಕ್ಯಾನ್ಸರ್ ಪತ್ತೆಯಾದವರು ಬೇರೆ ಜಿಲ್ಲೆಗಳಲ್ಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಎದುರಾಗಿದೆ. ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರ ನೇಮಕ ಹಾಗೂ ಚಿಕಿತ್ಸೆಗೆ ವ್ಯವಸ್ಥೆಯನ್ನು ಮಾಡಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ವಿಕಿರಣ, ತಂಬಾಕು ಸೇವನೆ, ಆಹಾರ ಪದ್ದತಿ ಜೊತೆಗೆ ಅನುವಂಶೀಯ ಕಾರಣ ಇರಬಹುದು. ಕ್ಯಾನ್ಸರ್ ಒಮ್ಮೆಲೇ ಬರುವ ಕಾಯಿಲೆಯಲ್ಲ. ದೇಹದಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಯಾನ್ಸರ್ ಬಗ್ಗೆ ಜನರಿಗೆ ಮುಂಜಾಗೃತೆ ಇದ್ದರೆ ಹೋರಾಟ ಮಾಡಿ ಕ್ಯಾನ್ಸರ್ ಗೆದ್ದು ಬರಬಹುದು ಎನ್ನುವುದು ಜಿಲ್ಲಾ ಸರ್ಜನ್ ಶಿವಾನಂದ ಕುಡ್ತಲಕರ್ ಅಭಿಪ್ರಾಯವಾಗಿದೆ.

ಕ್ಯಾನ್ಸರ್ ಎಂದು ಪತ್ತೆಯಾದರೆ ನುರಿತ ವೈದ್ಯರ ಬಳಿಯೇ ಚಿಕಿತ್ಸೆ ಪಡೆಯಬೇಕು. ದೇಹದಲ್ಲಿ ಬದಲಾವಣೆಗಳಾಗುತ್ತಿದ್ದರೂ ನಿರ್ಲಕ್ಷ್ಯ ತೋರಬಾರದು. ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ಕಟ್ಟದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಶಿವಾನಂದ ಕುಡ್ತಲಕರ್ ತಿಳಿಸಿದ್ದಾರೆ.
ಕೇವಲ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣವೇ 225ಕ್ಕೂ ಅಧಿಕವಾಗಿದ್ದು ಖಾಸಗಿ ಆಸ್ಪತ್ರೆ, ಮೃತಪಟ್ಟ ಪ್ರಕರಣಗಳನ್ನು ಕ್ರೂಡಿಕರಿಸಿದರೆ ಜಿಲ್ಲೆಯಲ್ಲಿ ವರ್ಷಕ್ಕೆ 500ಕ್ಕೂ ಅಧಿಕ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ. ಕ್ಯಾನ್ಸರ್ನಿಂದ ಚಿಕಿತ್ಸೆ ಸಿಗದೇ ಮನೆಯಲ್ಲಿಯೇ ಹಲವರು ಮೃತಪಟ್ಟರೇ, ಇನ್ನು ಹಲವರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿ ಕ್ಯಾನ್ಸರ್ ಧೃಡಪಟ್ಟರೇ ಅಲ್ಲೇ ಚಿಕತ್ಸೆ ಪಡೆಯುತ್ತಿದ್ದಾರೆ. ಇಂತವರ ಲೆಕ್ಕ ಸರ್ಕಾರದ ಬಳಿಯೂ ಸಿಗುತ್ತಿಲ್ಲ. ಸದ್ಯ ಜಿಲ್ಲೆಯಲ್ಲಿ ಈ ಸಂಖ್ಯೆ 500 ದಾಟಿರಬಹುದು ಎನ್ನಲಾಗಿದ್ದು, ಕ್ಯಾನ್ಸರ್ ಹೆಚ್ಚಳಕ್ಕೆ ನಿಗಧಿತ ಕಾರಣ ಕಂಡು ಹಿಡಿಯಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications