ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳಿಗೆ 200 ಕೋಟಿ ರೂ. ಭರವಸೆ ನೀಡಿದ ಸಿಎಂ
ಕಾರವಾರ, ಜುಲೈ 29: "ಉತ್ತರ ಕನ್ನಡ ಜಿಲ್ಲೆಯಲ್ಲಿ ನೆರೆಯಿಂದ ಹಾನಿಗಿಡಾದ ರಸ್ತೆಗಳಿಗೆ ರಾಜ್ಯ ಸರಕಾರದಿಂದ 200 ಕೋಟಿ ಬಿಡುಗಡೆ ಮಾಡಲಾಗುವುದು," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ನೆರೆ ಪಿಡೀತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಂಕೋಲಾ ತಾ.ಪಂ ಸಭಾಭವನದಲ್ಲಿ ಆಯೋಜಿಸಿದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿ, "ಜಿಲ್ಲೆಯ ಗ್ರಾಮೀಣ ಮತ್ತು ರಾಜ್ಯ ರಸ್ತೆಗಳಿಗೆ ತಲಾ 100 ಕೋಟಿಯಂತೆ ಬಿಡುಗಡೆ ಮಾಡುತ್ತೇನೆ, ತಕ್ಷಣ ಹಾನಿಗೊಳಗಾದ ರಸ್ತೆಯನ್ನು ಸರಿಪಡಿಸಿ,'' ಎಂದರು.
"ಮೀನುಗಾರರಿಗೆ ಗೋವಾ ರಾಜ್ಯ ಪ್ರವೇಶಿಸಲು ವ್ಯಾಕ್ಸಿನ್ ಇಲ್ಲದಿದ್ದರೆ ಬಿಡುವುದಿಲ್ಲ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ತಲಾ 3000 ಸಾವಿರ ವ್ಯಾಕ್ಸಿನ್ ನೀಡುತ್ತೇನೆ, ವ್ಯಾಕ್ಸಿನ್ ಶಿಬಿರ ನಡೆಸಿ, ಅದೇ ರೀತಿ ಮೀನುಗಾರರಿಗೂ ವ್ಯಾಕ್ಸಿನ್ ನೀಡಲು," ಜಿಲ್ಲಧಿಕಾರಿಗಳಿಗೆ ಸೂಚಿಸಿದರು.

"ನೆರೆಯಲ್ಲಿ ಬಿದ್ದ ಮನೆಗಳಿಗೆ ತಕ್ಷಣ ಪರಿಹಾರ ಕೊಡಿ. ಅರಣ್ಯ ಜಾಗದಲ್ಲಿ ಮನೆ ಇದ್ದು, ಅದು ಬಿದ್ದಿದ್ದರೂ ಕೊಡಿ, ಈಗ ಮನೆಗಳಿಗೆ 3800 ಹಣ ನೀಡಿದ್ದೀರಿ, ತಕ್ಷಣ ಮತ್ತೆ 6200 ರೂ. ಕೊಡಬೇಕು. ಒಟ್ಟು 10000 ರೂ. ತಕ್ಷಣದ ಪರಿಹಾರ ನೀಡಲು ಸೂಚಿಸಿದರು. ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ, ಭಾಗಶಃ 3 ಲಕ್ಷ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರ ನೀಡಲು," ಸಿಎಂ ಬೊಮ್ಮಾಯಿ ಆದೇಶಿಸಿದರು.
"ಕಳಚೆ ಗ್ರಾಮ ಸಂಪೂರ್ಣ ಸ್ಥಳಾಂತರಕ್ಕೆ ಯೋಜನೆ ರೂಪಿಸಿ, 15 ಎಕರೆ ಜಾಗ ಹುಡುಕಿ ಸ್ಥಳಾಂತರ ಮಾಡಿ," ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಸಿಎಂ ಆದೇಶಿಸಿದರು.

Recommended Video
"ಸೂಪಾ, ಕದ್ರಾ ಕೆಪಿಸಿ ಹಾಗೂ ಜಿಲ್ಲಾಡಳಿತ ಸಮನ್ವಯತೆ ಸಾಧಿಸಿ, ಹಂತ ಹಂತವಾಗಿ ನೀರು ಬಿಡಬೇಕು. ಅರಬೈಲ್ ಘಾಟ್ ರಸ್ತೆ, ಕಳಚೆ ರಸ್ತೆ ಘಟ್ಟ ಕುಸಿದ ರಿಪೇರಿಗೆ 10 ಕೋಟಿ ವೆಚ್ಚದಲ್ಲಿ ಸುಧಾರಿಸಿ."
"ರೈತರ ಬೆಳೆ ಹಾನಿ ಪರಿಹಾರಕ್ಕೆ ಕ್ರಮ ಕೈಕೊಳ್ಳುತ್ತೇನೆ, ನೆರೆ ಪರಿಹಾರ ತಕ್ಷಣ ನೀಡಿ," ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ಗೆ ಸಿಎಂ ಬೊಮ್ಮಾಯಿ ಸೂಚಿಸಿದರು. ಶಾಸಕರಾದ ಶಿವರಾಮ ಹೆಬ್ಬಾರ್, ರೂಪಾಲಿ ನಾಯ್ಕ, ಸುನೀಲ್ ನಾಯ್ಕ, ದಿನಕರ ಶೆಟ್ಟಿ, ವಿ.ಎಸ್. ಪಾಟೀಲ್ ಮುಂತಾದವರು ಇದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications