ಮಧ್ಯೆ ಸಮುದ್ರದಲ್ಲಿ ಒಡೆದ ಬೋಟ್: ಮೀನುಗಾರರು ಪಾರಾಗಿದ್ದೇ ರೋಚಕ..!
ಕಾರವಾರ, ಜನವರಿ 17: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ಬೋಟ್ ಒಡೆದು ಮುಳುಗುತ್ತಿದ್ದ ಬೋಟ್ ಹಾಗೂ 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ಕಾರವಾರ ಗೋವಾ ಗಡಿಭಾಗದ ಅರಬ್ಬಿ ಸಮುದ್ರದಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಮಂಗಳೂರಿನಿಂದ ಕಳೆದ ಮೂರು ದಿನಗಳ ಹಿಂದೆ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ರಾಯಲ್ ಬ್ಲ್ಯೂ ಹೆಸರಿನ ಮೀನುಗಾರಿಕಾ ಬೋಟ್ ಗೋವಾದ ಬೈತೊಲ್ ಬಳಿ ಆಳ ಸಮುದ್ರದಲ್ಲಿ ಬುಧವಾರ ಮುಂಜಾನೆ ಗಾಳಿ ರಭಸಕ್ಕೆ ಬೋಟ್ ತಳಭಾಗ ಒಡೆದು ಒಳಭಾಗಕ್ಕೆ ನೀರು ನುಸುಳಲಾರಂಭಿಸಿತ್ತು. ಬಳಿಕ ಮೀನುಗಾರರು ನೀರನ್ನು ಹೊರ ಹಾಕಿದ್ದರಾದರೂ ನೀರು ತುಂಬುತ್ತಿದ್ದ ಕಾರಣ ಮುಳುಗಡೆ ಭೀತಿಯಲ್ಲಿತ್ತು.

ತಕ್ಷಣ ಮೀನುಗಾರರು ಮಾಲಿಕರು, ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು. ಬಳಿಕ ನೆರವಿಗೆ ದಾವಿಸಿದ ಏಷ್ಯನ್ ಬ್ಲ್ಯೂ, ಬ್ಲಾಕ್ ಬೆರಿ, ವೈಟ್ ಆರ್ಬಿಟ್, ಸಿ ಪ್ರಿನ್ಸ್, ಸಿ ಹಂಟರ್ ಹೆಸರಿನ ಬೋಟಗಳ ಮೀನುಗಾರರು ನೆರವಿಗೆ ದಾವಿಸಿದ್ದರು. ಕೊನೆಗೆ ಎರಡು ಬೋಟ್ಗಳಿಗೆ ಬೋಟ್ ಕಟ್ಟಿಕ್ಕೊಂಡು ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆ ನೆರವಿನೊಂದಿಗೆ ಕಾರವಾರ ಬಂದರಿಗೆ ಏಳೆದು ತರಲಾಗಿದೆ.
ಅಲ್ಲದೇ ಬೋಟ್ನಲ್ಲಿದ್ದ ಎಲ್ಲಾ ಮೀನುಗಾರರು ಸುರಕ್ಷಿತವಾಗಿದ್ದು, ಬೋಟ್ ಹಾನಿಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ರಕ್ಷಣೆಗೆ ತೆರಳಿದ ಬೋಟ್ನಲ್ಲಿದ್ದ ಗಣೇಶ್ ಎನ್ನುವವರು ಮಾಹಿತಿ ನೀಡಿದ್ದಾರೆ.

ಕುಶಾಲನಗರದಲ್ಲಿ ಭೀಕರ ಅಪಘಾತ: ವ್ಯಕ್ತಿ ಸಾವು
ಕೊಡಗು: ಒಮ್ನಿ ಕಾರು ಹಾಗೂ ಬೊಲೆರೋ ಜೀಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಶಾಲನಗರ ಸಮೀಪದ ಆನೆಕಾಡು ಬಳಿ ನಡೆದಿದೆ. ದೇವಯ್ಯ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿಯು ಮೂಲತಃ ಮಡಿಕೇರಿ ಸಮೀಪದ ಕಾಲೂರು ನಿವಾಸಿಯಾಗಿದ್ದು, ಮಡಿಕೇರಿಯಿಂದ ನಾಮಕರಣ ಮುಗಿಸಿ ಹೋಗುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತವಾದ ಕಾರಿನಲ್ಲಿದ್ದ ಓರ್ವ ಮಗು ಸೇರಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರಗೆ ರವಾನಿಸಲಾಗಿದೆ. ಅಪಘಾತ ವಿಷಯ ತಿಳಿದ ಕೂಡಲೇ ಕುಶಾಲನರ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications